AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ. ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ. ದಾವಣಗೆರೆಯಲ್ಲಿ […]

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!
ಆಯೇಷಾ ಬಾನು
|

Updated on:Jun 05, 2020 | 3:11 PM

Share

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ.

ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ.

ದಾವಣಗೆರೆಯಲ್ಲಿ ಕೇವಲ ಹತ್ತು ದಿನಗಳಲ್ಲಿ ಬರೋಬರಿ 141 ಜನ ಜನರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಇವರಲ್ಲಿ 80 ವರ್ಷದ ವೃದ್ಧ ಹಾಗೂ ಎಂಟು ತಿಂಗಳ ಮಗು ಸಹ ಸೇರಿದ್ದಾರೆ. ಚಿಕಿತ್ಸೆಯ ಜೊತೆಗೆ ಸೋಂಕಿತರಿಗೆ ಅಗತ್ಯವಿರುವ ವಿಟಮಿನ್​ಗಳ ಪೂರೈಕೆಗೆ ಆದ್ಯತೆ ನೀಡಲಾಗಿತ್ತು.

ಮೈಸೂರಿನ ಸಿಎಫ್​ಟಿಆರ್​ಐ ನಿಂದ ಮಿಟಮಿನ್ ಸಿ ಹಾಗೂ ಜಿಂಕ್ ಇರುವ ಮ್ಯಾಂಗೋ ಬಾರ್, ಗ್ರೀನ್ ಚಿಕ್ಕಿ ಹಾಗೂ ಸಮುದ್ರದ ಪಾಚಿಯಿಂದ ಸಿದ್ದ ಪಡಿಸಿದ ಕೆಲ ಪದಾರ್ಥಗಳನ್ನ ತರಿಸಿ ಕೊಟ್ಟಿದೆ. ಹೀಗಾಗಿ ನಿರೀಕ್ಷೆಗೂ ಮೀರಿ ಇಲ್ಲಿನ ಸೋಂಕಿತರು ಚೇತರಿಸಿಕೊಂಡರು ಅಂದ್ರೆ ತಪ್ಪಾಗಲಿಕ್ಕಿಲ್ಲ.

ನಿರಂತರವಾಗಿ ವೈದ್ಯರಿಂದ ಚಿಕಿತ್ಸೆ ಹಾಗೂ ಔಷಧಿ ನೀಡಲಾಗುತ್ತದೆ. ಇವುಗಳ ಜೊತೆಗೆ ಇಂತಹ ದೇಹಕ್ಕೆ ಅಗತ್ಯ ಇರುವ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳನ್ನ ಪೂರೈಕೆ ಮಾಡಿದ್ದು ಒಂದು ಉತ್ತಮ ಬೆಳವಣಿಗೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Published On - 7:50 am, Fri, 5 June 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್