AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ. ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ. ದಾವಣಗೆರೆಯಲ್ಲಿ […]

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!
ಆಯೇಷಾ ಬಾನು
|

Updated on:Jun 05, 2020 | 3:11 PM

Share

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ.

ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ.

ದಾವಣಗೆರೆಯಲ್ಲಿ ಕೇವಲ ಹತ್ತು ದಿನಗಳಲ್ಲಿ ಬರೋಬರಿ 141 ಜನ ಜನರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಇವರಲ್ಲಿ 80 ವರ್ಷದ ವೃದ್ಧ ಹಾಗೂ ಎಂಟು ತಿಂಗಳ ಮಗು ಸಹ ಸೇರಿದ್ದಾರೆ. ಚಿಕಿತ್ಸೆಯ ಜೊತೆಗೆ ಸೋಂಕಿತರಿಗೆ ಅಗತ್ಯವಿರುವ ವಿಟಮಿನ್​ಗಳ ಪೂರೈಕೆಗೆ ಆದ್ಯತೆ ನೀಡಲಾಗಿತ್ತು.

ಮೈಸೂರಿನ ಸಿಎಫ್​ಟಿಆರ್​ಐ ನಿಂದ ಮಿಟಮಿನ್ ಸಿ ಹಾಗೂ ಜಿಂಕ್ ಇರುವ ಮ್ಯಾಂಗೋ ಬಾರ್, ಗ್ರೀನ್ ಚಿಕ್ಕಿ ಹಾಗೂ ಸಮುದ್ರದ ಪಾಚಿಯಿಂದ ಸಿದ್ದ ಪಡಿಸಿದ ಕೆಲ ಪದಾರ್ಥಗಳನ್ನ ತರಿಸಿ ಕೊಟ್ಟಿದೆ. ಹೀಗಾಗಿ ನಿರೀಕ್ಷೆಗೂ ಮೀರಿ ಇಲ್ಲಿನ ಸೋಂಕಿತರು ಚೇತರಿಸಿಕೊಂಡರು ಅಂದ್ರೆ ತಪ್ಪಾಗಲಿಕ್ಕಿಲ್ಲ.

ನಿರಂತರವಾಗಿ ವೈದ್ಯರಿಂದ ಚಿಕಿತ್ಸೆ ಹಾಗೂ ಔಷಧಿ ನೀಡಲಾಗುತ್ತದೆ. ಇವುಗಳ ಜೊತೆಗೆ ಇಂತಹ ದೇಹಕ್ಕೆ ಅಗತ್ಯ ಇರುವ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳನ್ನ ಪೂರೈಕೆ ಮಾಡಿದ್ದು ಒಂದು ಉತ್ತಮ ಬೆಳವಣಿಗೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Published On - 7:50 am, Fri, 5 June 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ