AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ. ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ. ದಾವಣಗೆರೆಯಲ್ಲಿ […]

10 ದಿನದಲ್ಲಿ 141 ಸೋಂಕಿತರು ಗುಣಮುಖ: ವೈದ್ಯರ ಚಿಕಿತ್ಸೆ ಜೊತೆಗೆ ಬೆರಗಾಗುವ ಕಾರಣವೂ ಇದೆ!
ಆಯೇಷಾ ಬಾನು
|

Updated on:Jun 05, 2020 | 3:11 PM

Share

ದಾವಣಗೆರೆ: ಈಗ ಜಗತ್ತಿನಲ್ಲಿ ಕೊರೊನಾ ಸೋಂಕಿಗೆ ಔಷಧಿ ಕಂಡು ಹಿಡಿದಿಲ್ಲ. ಇದಕ್ಕಾಗಿ ವೈದ್ಯ ಲೋಕ ಹಗಲು ರಾತ್ರಿ ಪರಿಶ್ರಮ ಪಡುತ್ತಿದೆ. ನಿತ್ಯ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಲಕ್ಷಾಂತರ ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಡೀ ಜಗತ್ತೇ ತತ್ತರವಾಗುತ್ತಿದೆ.

ಇದೇ ವಾತಾವರಣದಲ್ಲಿ ಸೋಂಕು ತಗುಲಿಸಿಕೊಂಡ ಲಕ್ಷಾಂತರ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆ ಹೋಗುತ್ತಿದ್ದಾರೆ. ನಿಜಕ್ಕೂ ಇದಕ್ಕೆ ಉತ್ತರ ಹುಡುಕುವುದೇ ಕಷ್ಟ. ಆದ್ರೆ ದಾವಣಗೆರೆ ಜಿಲ್ಲೆಯಲ್ಲಿ ಇಂತಹ ಪ್ರಶ್ನೆಗೆ ತಕ್ಕ ಮಟ್ಟಿನ ಹಾಗೂ ಸತ್ಯಕ್ಕೆ ಸಮೀಪ ಇರುವ ಉತ್ತರ ಸಿಕ್ಕಿದೆ.

ದಾವಣಗೆರೆಯಲ್ಲಿ ಕೇವಲ ಹತ್ತು ದಿನಗಳಲ್ಲಿ ಬರೋಬರಿ 141 ಜನ ಜನರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಇವರಲ್ಲಿ 80 ವರ್ಷದ ವೃದ್ಧ ಹಾಗೂ ಎಂಟು ತಿಂಗಳ ಮಗು ಸಹ ಸೇರಿದ್ದಾರೆ. ಚಿಕಿತ್ಸೆಯ ಜೊತೆಗೆ ಸೋಂಕಿತರಿಗೆ ಅಗತ್ಯವಿರುವ ವಿಟಮಿನ್​ಗಳ ಪೂರೈಕೆಗೆ ಆದ್ಯತೆ ನೀಡಲಾಗಿತ್ತು.

ಮೈಸೂರಿನ ಸಿಎಫ್​ಟಿಆರ್​ಐ ನಿಂದ ಮಿಟಮಿನ್ ಸಿ ಹಾಗೂ ಜಿಂಕ್ ಇರುವ ಮ್ಯಾಂಗೋ ಬಾರ್, ಗ್ರೀನ್ ಚಿಕ್ಕಿ ಹಾಗೂ ಸಮುದ್ರದ ಪಾಚಿಯಿಂದ ಸಿದ್ದ ಪಡಿಸಿದ ಕೆಲ ಪದಾರ್ಥಗಳನ್ನ ತರಿಸಿ ಕೊಟ್ಟಿದೆ. ಹೀಗಾಗಿ ನಿರೀಕ್ಷೆಗೂ ಮೀರಿ ಇಲ್ಲಿನ ಸೋಂಕಿತರು ಚೇತರಿಸಿಕೊಂಡರು ಅಂದ್ರೆ ತಪ್ಪಾಗಲಿಕ್ಕಿಲ್ಲ.

ನಿರಂತರವಾಗಿ ವೈದ್ಯರಿಂದ ಚಿಕಿತ್ಸೆ ಹಾಗೂ ಔಷಧಿ ನೀಡಲಾಗುತ್ತದೆ. ಇವುಗಳ ಜೊತೆಗೆ ಇಂತಹ ದೇಹಕ್ಕೆ ಅಗತ್ಯ ಇರುವ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಪದಾರ್ಥಗಳನ್ನ ಪೂರೈಕೆ ಮಾಡಿದ್ದು ಒಂದು ಉತ್ತಮ ಬೆಳವಣಿಗೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Published On - 7:50 am, Fri, 5 June 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!