
ಮೈಸೂರು: ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಸರಗಳ್ಳರು ಕೈಚಳಕ ತೋರಿಸಿದ್ದಾರೆ. ಪಟ್ಟಣದ ಬಸವನಗುಡಿ ಬಡಾವಣೆಯಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳು ಡಿಯೋ ಗಾಡಿಯಲ್ಲಿ ಬಂದು ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಸರಗಳ್ಳರು ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಟೋಪಿ ಹಾಕಿಕೊಂಡಿದ್ದರಂತೆ. ಸ್ಥಳಕ್ಕೆ ASP ಶಿವಕುಮಾರ್, DySPಪ್ರಭಾಕರ್ ರಾವ್ ಶಿಂಧೇ ಹಾಗೂ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ ತಳವಾರ್ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.