AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಖರೀದಿಸಲಿರುವ ಐಷಾರಾಮಿ ಕಾರು ಯಾವುದು ಗೊತ್ತಾ?

ದರ್ಶನ್​ ಕೆಲ ವರ್ಷಗಳ ಹಿಂದೆ ಸ್ಪೋರ್ಟ್ಸ್​ ಕಾರಾದ ಲ್ಯಾಂಬೋರ್ಗಿನಿ ಖರೀದಿಸಿದ್ದರು. ಈ ಕಾರಿನಲ್ಲೇ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದರು.

Darshan: ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಖರೀದಿಸಲಿರುವ ಐಷಾರಾಮಿ ಕಾರು ಯಾವುದು ಗೊತ್ತಾ?
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Mar 04, 2021 | 1:47 PM

Share

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ ಜತೆಗೆ ವನ್ಯಜೀವಿಗಳನ್ನು ದತ್ತು ಪಡೆದು ಅವನ್ನು ಸಾಕುವ ಕೆಲಸ ಮಾಡುತ್ತಿದ್ದಾರೆ. ದರ್ಶನ್​ ಸಿನಿಮಾ ಹಾಗೂ ವನ್ಯಜೀವಿಗಳ ಮೇಲೆ ಎಷ್ಟು ಪ್ರೀತಿ ಇಟ್ಟುಕೊಂಡಿದ್ದಾರೋ ಅಷ್ಟೇ ಪ್ರೀತಿಯನ್ನು ಕಾರುಗಳ ಮೇಲೂ ಹೊಂದಿದ್ದಾರೆ. ದರ್ಶನ್​ಗೆ ಕಾರೆಂದರೆ ಕ್ರೇಜ್​. ಅವರ ಗರಾಜಿನಲ್ಲಿ ನಾಲ್ಕೈದು ಕಾರುಗಳಿವೆ. ಈಗ ದರ್ಶನ್​ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸೋ ಆಸೆ ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ದರ್ಶನ್​ ಈ ವಿಚಾರ ಬಿಚ್ಚಿಟ್ಟಿದ್ದಾರೆ. ನನ್ನ ಬಳಿ ನಾಲ್ಕೈದು ಕಾರುಗಳಿವೆ. ಬೆಂಟ್ಲಿ ನನ್ನ ಡ್ರೀಮ್​ ಕಾರ್​. ಅದನ್ನು ಕೊಂಡುಕೊಳ್ಳಬೇಕು ಎಂಬ ಆಸೆ ಇದೆ. ಅದನ್ನು ಖರೀದಿಸೋದು ದೊಡ್ಡ ವಿಚಾರವಲ್ಲ. ಆದರೆ, ಬೆಂಟ್ಲಿ ಶೋ ರೂಂ ಬೆಂಗಳೂರಿನಲ್ಲಿಲ್ಲ. ಅದನ್ನು ಖರೀದಿಸಬೇಕು ಎಂದರೆ ಮುಂಬೈಗೆ ಹೋಗಬೇಕು ಎಂದಿದ್ದಾರೆ ದರ್ಶನ್​.

ದರ್ಶನ್​ ಖರೀದಿಸಿದ ಹಮ್ಮರ್​ ವಾಹನಕ್ಕೆ ಬೆಂಗಳೂರಿನಲ್ಲಿ ಶೋರೂಂ ಇಲ್ಲವಂತೆ. ಹೀಗಾಗಿ, ಸರ್ವಿಸ್​ ಮಾಡಿಸಬೇಕು ಎಂದರೆ, ಮುಂಬೈನಿಂದ ಮೆಕ್ಯಾನಿಕ್​ ಕರೆಸಬೇಕು. ಐಷಾರಾಮಿ ಹೋಟೆಲ್​ನಲ್ಲಿ ಆತನಿಗೆ ಉಳಿದುಕೊಳ್ಳೋಕೆ ವ್ಯವಸ್ಥೆ ಮಾಡಬೇಕು. ಆ ಗಾಡಿ ಪೆಟ್ರೋಲ್​ ಕುಡಿಯೋದ ನೋಡಿದ್ರೆ ನಮಗೆ ಹೊಟ್ಟೆ ಉರಿಯುತ್ತದೆ. ಹೀಗಾಗಿ, ಬೆಂಗಳೂರಿನಲ್ಲಿ ಶೋ ರೂಂ ಇರುವ ಕಾರನ್ನು ಮಾತ್ರ ಖರೀದಿಸುವ ಆಲೋಚನೆ ನನ್ನದು. ಹೀಗಾಗಿ, ಬೆಂಟ್ಲಿ ಕಾರನ್ನು ಖರೀದಿಸೋಕೆ ಹಿಂದೇಟು ಹಾಕುತ್ತಿದ್ದೇನೆ ಎಂದಿದ್ದಾರೆ.

ದರ್ಶನ್​ ಕೆಲ ವರ್ಷಗಳ ಹಿಂದೆ ಸ್ಪೋರ್ಟ್ಸ್​ ಕಾರಾದ ಲ್ಯಾಂಬೋರ್ಗಿನಿ ಖರೀದಿಸಿದ್ದರು. ಈ ಕಾರಿನಲ್ಲೇ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದರು. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ರಾಬರ್ಟ್​ ಸಿನಿಮಾ ಶಿವರಾತ್ರಿ ಪ್ರಯುಕ್ತ ಮಾರ್ಚ್​ 11ರಂದು ರಿಲೀಸ್​ ಆಗುತ್ತಿದೆ. ಟ್ರೈಲರ್​ ಹಾಗೂ ಹಾಡಿನ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ತರುಣ್​ ಸುಧೀರ್​ ನಿರ್ದೇಶನ ಇರುವ ಈ ಚಿತ್ರಕ್ಕೆ ಆಶಾ ಭಟ್​ ನಾಯಕಿ. ಟಾಲಿವುಡ್​ನ ಖಳನಟ ಜಗಪತಿ ಬಾಬು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Darshan: ‘ರಾಬರ್ಟ್​’ ಬಿಡುಗಡೆಗೂ ಮುನ್ನ ಮತ್ತೊಂದು ಮುಖ್ಯ ವಿಚಾರದ ಬಗ್ಗೆ ‘ಚಾಲೆಂಜಿಂಗ್​ ಸ್ಟಾರ್’​ ದರ್ಶನ್​ ಪ್ರಸ್ತಾಪ!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ