AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಖರೀದಿಸಲಿರುವ ಐಷಾರಾಮಿ ಕಾರು ಯಾವುದು ಗೊತ್ತಾ?

ದರ್ಶನ್​ ಕೆಲ ವರ್ಷಗಳ ಹಿಂದೆ ಸ್ಪೋರ್ಟ್ಸ್​ ಕಾರಾದ ಲ್ಯಾಂಬೋರ್ಗಿನಿ ಖರೀದಿಸಿದ್ದರು. ಈ ಕಾರಿನಲ್ಲೇ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದರು.

Darshan: ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಖರೀದಿಸಲಿರುವ ಐಷಾರಾಮಿ ಕಾರು ಯಾವುದು ಗೊತ್ತಾ?
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Mar 04, 2021 | 1:47 PM

Share

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ ಜತೆಗೆ ವನ್ಯಜೀವಿಗಳನ್ನು ದತ್ತು ಪಡೆದು ಅವನ್ನು ಸಾಕುವ ಕೆಲಸ ಮಾಡುತ್ತಿದ್ದಾರೆ. ದರ್ಶನ್​ ಸಿನಿಮಾ ಹಾಗೂ ವನ್ಯಜೀವಿಗಳ ಮೇಲೆ ಎಷ್ಟು ಪ್ರೀತಿ ಇಟ್ಟುಕೊಂಡಿದ್ದಾರೋ ಅಷ್ಟೇ ಪ್ರೀತಿಯನ್ನು ಕಾರುಗಳ ಮೇಲೂ ಹೊಂದಿದ್ದಾರೆ. ದರ್ಶನ್​ಗೆ ಕಾರೆಂದರೆ ಕ್ರೇಜ್​. ಅವರ ಗರಾಜಿನಲ್ಲಿ ನಾಲ್ಕೈದು ಕಾರುಗಳಿವೆ. ಈಗ ದರ್ಶನ್​ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸೋ ಆಸೆ ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ದರ್ಶನ್​ ಈ ವಿಚಾರ ಬಿಚ್ಚಿಟ್ಟಿದ್ದಾರೆ. ನನ್ನ ಬಳಿ ನಾಲ್ಕೈದು ಕಾರುಗಳಿವೆ. ಬೆಂಟ್ಲಿ ನನ್ನ ಡ್ರೀಮ್​ ಕಾರ್​. ಅದನ್ನು ಕೊಂಡುಕೊಳ್ಳಬೇಕು ಎಂಬ ಆಸೆ ಇದೆ. ಅದನ್ನು ಖರೀದಿಸೋದು ದೊಡ್ಡ ವಿಚಾರವಲ್ಲ. ಆದರೆ, ಬೆಂಟ್ಲಿ ಶೋ ರೂಂ ಬೆಂಗಳೂರಿನಲ್ಲಿಲ್ಲ. ಅದನ್ನು ಖರೀದಿಸಬೇಕು ಎಂದರೆ ಮುಂಬೈಗೆ ಹೋಗಬೇಕು ಎಂದಿದ್ದಾರೆ ದರ್ಶನ್​.

ದರ್ಶನ್​ ಖರೀದಿಸಿದ ಹಮ್ಮರ್​ ವಾಹನಕ್ಕೆ ಬೆಂಗಳೂರಿನಲ್ಲಿ ಶೋರೂಂ ಇಲ್ಲವಂತೆ. ಹೀಗಾಗಿ, ಸರ್ವಿಸ್​ ಮಾಡಿಸಬೇಕು ಎಂದರೆ, ಮುಂಬೈನಿಂದ ಮೆಕ್ಯಾನಿಕ್​ ಕರೆಸಬೇಕು. ಐಷಾರಾಮಿ ಹೋಟೆಲ್​ನಲ್ಲಿ ಆತನಿಗೆ ಉಳಿದುಕೊಳ್ಳೋಕೆ ವ್ಯವಸ್ಥೆ ಮಾಡಬೇಕು. ಆ ಗಾಡಿ ಪೆಟ್ರೋಲ್​ ಕುಡಿಯೋದ ನೋಡಿದ್ರೆ ನಮಗೆ ಹೊಟ್ಟೆ ಉರಿಯುತ್ತದೆ. ಹೀಗಾಗಿ, ಬೆಂಗಳೂರಿನಲ್ಲಿ ಶೋ ರೂಂ ಇರುವ ಕಾರನ್ನು ಮಾತ್ರ ಖರೀದಿಸುವ ಆಲೋಚನೆ ನನ್ನದು. ಹೀಗಾಗಿ, ಬೆಂಟ್ಲಿ ಕಾರನ್ನು ಖರೀದಿಸೋಕೆ ಹಿಂದೇಟು ಹಾಕುತ್ತಿದ್ದೇನೆ ಎಂದಿದ್ದಾರೆ.

ದರ್ಶನ್​ ಕೆಲ ವರ್ಷಗಳ ಹಿಂದೆ ಸ್ಪೋರ್ಟ್ಸ್​ ಕಾರಾದ ಲ್ಯಾಂಬೋರ್ಗಿನಿ ಖರೀದಿಸಿದ್ದರು. ಈ ಕಾರಿನಲ್ಲೇ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದರು. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ರಾಬರ್ಟ್​ ಸಿನಿಮಾ ಶಿವರಾತ್ರಿ ಪ್ರಯುಕ್ತ ಮಾರ್ಚ್​ 11ರಂದು ರಿಲೀಸ್​ ಆಗುತ್ತಿದೆ. ಟ್ರೈಲರ್​ ಹಾಗೂ ಹಾಡಿನ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ತರುಣ್​ ಸುಧೀರ್​ ನಿರ್ದೇಶನ ಇರುವ ಈ ಚಿತ್ರಕ್ಕೆ ಆಶಾ ಭಟ್​ ನಾಯಕಿ. ಟಾಲಿವುಡ್​ನ ಖಳನಟ ಜಗಪತಿ ಬಾಬು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Darshan: ‘ರಾಬರ್ಟ್​’ ಬಿಡುಗಡೆಗೂ ಮುನ್ನ ಮತ್ತೊಂದು ಮುಖ್ಯ ವಿಚಾರದ ಬಗ್ಗೆ ‘ಚಾಲೆಂಜಿಂಗ್​ ಸ್ಟಾರ್’​ ದರ್ಶನ್​ ಪ್ರಸ್ತಾಪ!

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು