Darshan: ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಖರೀದಿಸಲಿರುವ ಐಷಾರಾಮಿ ಕಾರು ಯಾವುದು ಗೊತ್ತಾ?

ದರ್ಶನ್​ ಕೆಲ ವರ್ಷಗಳ ಹಿಂದೆ ಸ್ಪೋರ್ಟ್ಸ್​ ಕಾರಾದ ಲ್ಯಾಂಬೋರ್ಗಿನಿ ಖರೀದಿಸಿದ್ದರು. ಈ ಕಾರಿನಲ್ಲೇ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದರು.

Darshan: ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಖರೀದಿಸಲಿರುವ ಐಷಾರಾಮಿ ಕಾರು ಯಾವುದು ಗೊತ್ತಾ?
ದರ್ಶನ್​
Follow us
|

Updated on: Mar 04, 2021 | 1:47 PM

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ ಜತೆಗೆ ವನ್ಯಜೀವಿಗಳನ್ನು ದತ್ತು ಪಡೆದು ಅವನ್ನು ಸಾಕುವ ಕೆಲಸ ಮಾಡುತ್ತಿದ್ದಾರೆ. ದರ್ಶನ್​ ಸಿನಿಮಾ ಹಾಗೂ ವನ್ಯಜೀವಿಗಳ ಮೇಲೆ ಎಷ್ಟು ಪ್ರೀತಿ ಇಟ್ಟುಕೊಂಡಿದ್ದಾರೋ ಅಷ್ಟೇ ಪ್ರೀತಿಯನ್ನು ಕಾರುಗಳ ಮೇಲೂ ಹೊಂದಿದ್ದಾರೆ. ದರ್ಶನ್​ಗೆ ಕಾರೆಂದರೆ ಕ್ರೇಜ್​. ಅವರ ಗರಾಜಿನಲ್ಲಿ ನಾಲ್ಕೈದು ಕಾರುಗಳಿವೆ. ಈಗ ದರ್ಶನ್​ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸೋ ಆಸೆ ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ದರ್ಶನ್​ ಈ ವಿಚಾರ ಬಿಚ್ಚಿಟ್ಟಿದ್ದಾರೆ. ನನ್ನ ಬಳಿ ನಾಲ್ಕೈದು ಕಾರುಗಳಿವೆ. ಬೆಂಟ್ಲಿ ನನ್ನ ಡ್ರೀಮ್​ ಕಾರ್​. ಅದನ್ನು ಕೊಂಡುಕೊಳ್ಳಬೇಕು ಎಂಬ ಆಸೆ ಇದೆ. ಅದನ್ನು ಖರೀದಿಸೋದು ದೊಡ್ಡ ವಿಚಾರವಲ್ಲ. ಆದರೆ, ಬೆಂಟ್ಲಿ ಶೋ ರೂಂ ಬೆಂಗಳೂರಿನಲ್ಲಿಲ್ಲ. ಅದನ್ನು ಖರೀದಿಸಬೇಕು ಎಂದರೆ ಮುಂಬೈಗೆ ಹೋಗಬೇಕು ಎಂದಿದ್ದಾರೆ ದರ್ಶನ್​.

ದರ್ಶನ್​ ಖರೀದಿಸಿದ ಹಮ್ಮರ್​ ವಾಹನಕ್ಕೆ ಬೆಂಗಳೂರಿನಲ್ಲಿ ಶೋರೂಂ ಇಲ್ಲವಂತೆ. ಹೀಗಾಗಿ, ಸರ್ವಿಸ್​ ಮಾಡಿಸಬೇಕು ಎಂದರೆ, ಮುಂಬೈನಿಂದ ಮೆಕ್ಯಾನಿಕ್​ ಕರೆಸಬೇಕು. ಐಷಾರಾಮಿ ಹೋಟೆಲ್​ನಲ್ಲಿ ಆತನಿಗೆ ಉಳಿದುಕೊಳ್ಳೋಕೆ ವ್ಯವಸ್ಥೆ ಮಾಡಬೇಕು. ಆ ಗಾಡಿ ಪೆಟ್ರೋಲ್​ ಕುಡಿಯೋದ ನೋಡಿದ್ರೆ ನಮಗೆ ಹೊಟ್ಟೆ ಉರಿಯುತ್ತದೆ. ಹೀಗಾಗಿ, ಬೆಂಗಳೂರಿನಲ್ಲಿ ಶೋ ರೂಂ ಇರುವ ಕಾರನ್ನು ಮಾತ್ರ ಖರೀದಿಸುವ ಆಲೋಚನೆ ನನ್ನದು. ಹೀಗಾಗಿ, ಬೆಂಟ್ಲಿ ಕಾರನ್ನು ಖರೀದಿಸೋಕೆ ಹಿಂದೇಟು ಹಾಕುತ್ತಿದ್ದೇನೆ ಎಂದಿದ್ದಾರೆ.

ದರ್ಶನ್​ ಕೆಲ ವರ್ಷಗಳ ಹಿಂದೆ ಸ್ಪೋರ್ಟ್ಸ್​ ಕಾರಾದ ಲ್ಯಾಂಬೋರ್ಗಿನಿ ಖರೀದಿಸಿದ್ದರು. ಈ ಕಾರಿನಲ್ಲೇ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದರು. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ರಾಬರ್ಟ್​ ಸಿನಿಮಾ ಶಿವರಾತ್ರಿ ಪ್ರಯುಕ್ತ ಮಾರ್ಚ್​ 11ರಂದು ರಿಲೀಸ್​ ಆಗುತ್ತಿದೆ. ಟ್ರೈಲರ್​ ಹಾಗೂ ಹಾಡಿನ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ತರುಣ್​ ಸುಧೀರ್​ ನಿರ್ದೇಶನ ಇರುವ ಈ ಚಿತ್ರಕ್ಕೆ ಆಶಾ ಭಟ್​ ನಾಯಕಿ. ಟಾಲಿವುಡ್​ನ ಖಳನಟ ಜಗಪತಿ ಬಾಬು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Darshan: ‘ರಾಬರ್ಟ್​’ ಬಿಡುಗಡೆಗೂ ಮುನ್ನ ಮತ್ತೊಂದು ಮುಖ್ಯ ವಿಚಾರದ ಬಗ್ಗೆ ‘ಚಾಲೆಂಜಿಂಗ್​ ಸ್ಟಾರ್’​ ದರ್ಶನ್​ ಪ್ರಸ್ತಾಪ!

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ