AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವ ಸಂವತ್ಸರ: ದೇವಾಲಯಗಳಿಗೆ ಹರಿದು ಬಂದ ಜನಸಾಗರ

ಮೈಸೂರು: ಹೊಸ ವರ್ಷಾಚರಣೆ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜನ ಸಾಗರವೇ ಹರಿದು ಬಂದಿದೆ. ಇಂದು ವರ್ಷದ ಮೊದಲ ದಿನ ದೇವರ ಕೃಪೆಯೊಂದಿಗೆ ಸಾಗಬೇಕೆಂದು ಅನೇಕ ಭಕ್ತರು ದೇವಾಲಯಕ್ಕೆ ಬಂದಿದ್ದರು. ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹೊಸ ವರ್ಷವನ್ನ ಸ್ವಾಗತಿಸಿದ್ದಾರೆ. ಇಂದು ಮುಂಜಾನೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ನಿಂತು ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಹೊಸ ವರ್ಷದಂದು ಹೊಸ ಸಂಕಲ್ಪದೊಂದಿಗೆ ದೇವಿಗೆ ನಮಿಸಿದ್ದಾರೆ. ಪ್ರವಾಸಿಗರು ಹಾಗೂ ಸ್ಥಳೀಯರಿಂದ ಚಾಮುಂಡೇಶ್ವರಿ […]

ನವ ಸಂವತ್ಸರ: ದೇವಾಲಯಗಳಿಗೆ ಹರಿದು ಬಂದ ಜನಸಾಗರ
ಸಾಧು ಶ್ರೀನಾಥ್​
|

Updated on:Jan 01, 2020 | 6:18 PM

Share

ಮೈಸೂರು: ಹೊಸ ವರ್ಷಾಚರಣೆ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜನ ಸಾಗರವೇ ಹರಿದು ಬಂದಿದೆ. ಇಂದು ವರ್ಷದ ಮೊದಲ ದಿನ ದೇವರ ಕೃಪೆಯೊಂದಿಗೆ ಸಾಗಬೇಕೆಂದು ಅನೇಕ ಭಕ್ತರು ದೇವಾಲಯಕ್ಕೆ ಬಂದಿದ್ದರು. ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹೊಸ ವರ್ಷವನ್ನ ಸ್ವಾಗತಿಸಿದ್ದಾರೆ.

ಇಂದು ಮುಂಜಾನೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ನಿಂತು ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಹೊಸ ವರ್ಷದಂದು ಹೊಸ ಸಂಕಲ್ಪದೊಂದಿಗೆ ದೇವಿಗೆ ನಮಿಸಿದ್ದಾರೆ. ಪ್ರವಾಸಿಗರು ಹಾಗೂ ಸ್ಥಳೀಯರಿಂದ ಚಾಮುಂಡೇಶ್ವರಿ ದೇವಾಲಯ ತುಂಬಿ ಹೋಗಿದೆ.

ಅಲ್ಲದೆ ಮೈಸೂರಿನ ಪ್ರಸಿದ್ಧ ನಂಜನಗೂಡು ಶ್ರೀ ಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲೂ ಹೊಸ ವರ್ಷದ ಪ್ರಯುಕ್ತ ಜನಸಾಗರ ಹರಿದು ಬಂದಿದೆ. ಇಂದು ಮುಂಜಾನೆಯಿಂದಲೇ ಭಕ್ತರು ಕಪಿಲಾ ನದಿಯಲ್ಲಿ ಸ್ನಾನ ಮಾಡಿ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಮಾಡಿ ಹೊಸ ವರ್ಷ ಆಚರಣೆ ಮಾಡಿದ್ದಾರೆ.

ದೇವರಿಗೆ ಅಭಿಷೇಕ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ದಾಸೋಹ ಭವನದಲ್ಲಿ ಪ್ರಸಾದ ವಿನಿಯೋಗ ಮಾಡಲಾಗಿದೆ. ಅಷ್ಟೆ ಅಲ್ಲದೆ ಮೈಸೂರಿನ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಚಾಮುಂಡಿ ದೇವಸ್ಥಾನ, ರಾಘವೇಂದ್ರ ಮಠ, ಮಲ್ಲನ ಮೂಲೆ ಮಠ ಸೇರಿದಂತೆ ವಿವಿಧೆಡೆ ಭಕ್ತರು ದೇವರ ದರ್ಶನಕ್ಕೆ ಮುಗಿಬಿದ್ದಿದ್ದಾರೆ.

Published On - 3:12 pm, Wed, 1 January 20

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ