AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಲತಾಣಗಳಲ್ಲಿ ಒಂಟಿ ಯುವತಿಯರ ಬೇಟೆ: ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಸೆರೆ

ಬೆಂಗಳೂರು:ಫೇಸ್ಬುಕ್ ಹಾಗೂ ಡೇಟಿಂಗ್ ಆ್ಯಪ್​ಗಳ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಹಣ ಪಡೆದುಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿಯ ನಿವಾಸಿ ಸುಹಾಸ್ ಹರಿಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಫೇಸ್ಬುಕ್ ಮತ್ತು ಡೇಟಿಂಗ್ ಆ್ಯಪ್​ಗಳ ಮುಖಾಂತರ, ಕೆಲಸಕ್ಕೆ ಹೋಗುತ್ತಿದ್ದ ಒಂಟಿ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ತದನಂತರ ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಲಕ್ಷಲಕ್ಷ ಹಣ ಪಡೆದು ವಂಚಿಸುತ್ತಿದ್ದ. ಇದೇ ರೀತಿಯಾಗಿ ಬೊಮ್ಮನಹಳ್ಳಿಯ ಯುವತಿಯಿಂದ 12 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿ, […]

ಜಾಲತಾಣಗಳಲ್ಲಿ ಒಂಟಿ ಯುವತಿಯರ ಬೇಟೆ: ಹಣ ಪಡೆದು ವಂಚಿಸುತ್ತಿದ್ದ ಆರೋಪಿ ಸೆರೆ
Follow us
ಸಾಧು ಶ್ರೀನಾಥ್​
|

Updated on:Aug 17, 2020 | 5:01 PM

ಬೆಂಗಳೂರು:ಫೇಸ್ಬುಕ್ ಹಾಗೂ ಡೇಟಿಂಗ್ ಆ್ಯಪ್​ಗಳ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಹಣ ಪಡೆದುಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರಹಳ್ಳಿಯ ನಿವಾಸಿ ಸುಹಾಸ್ ಹರಿಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಫೇಸ್ಬುಕ್ ಮತ್ತು ಡೇಟಿಂಗ್ ಆ್ಯಪ್​ಗಳ ಮುಖಾಂತರ, ಕೆಲಸಕ್ಕೆ ಹೋಗುತ್ತಿದ್ದ ಒಂಟಿ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ತದನಂತರ ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಂದ ಲಕ್ಷಲಕ್ಷ ಹಣ ಪಡೆದು ವಂಚಿಸುತ್ತಿದ್ದ.

ಇದೇ ರೀತಿಯಾಗಿ ಬೊಮ್ಮನಹಳ್ಳಿಯ ಯುವತಿಯಿಂದ 12 ಲಕ್ಷ ಹಣ ಪಡೆದು ವಂಚಿಸಿದ್ದ ಆರೋಪಿ, ಬಳಿಕ ಫೇಸ್ಬುಕ್ನಲ್ಲಿ ಬೇರೊಂದು ಯುವತಿಯೊಂದಿಗೆ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ. ಈ ವಿಚಾರ ತಿಳಿದ ಸಂತ್ರಸ್ತೆ, ಯುವತಿಯನ್ನು ಭೇಟಿ ಮಾಡಿ ವಿಚಾರಿಸಿದ್ದಾರೆ. ವಿಚಾರಣೆಯ ವೇಳೆ ಸುಹಾಸ್ ಇನ್ನಿಬ್ಬರು ಯುವತಿಯರಿಗೆ ವಂಚಿಸಿ 1.40 ಲಕ್ಷ ಹಣವನ್ನು ಪಡೆದುಕೊಂಡಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಎಚ್ಚೆತ್ತುಕೊಂಡ ಸಂತ್ರಸ್ತ ಯುವತಿ, ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿ ಸುಹಾಸ್ ಹರಿಪ್ರಸಾದ್​ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾಗ, ಈ ಮೊದಲೆ ಸುಹಾಸ್​ಗೆ ಮದುವೆಯಾಗಿದ್ದು, ಸಂಸಾರ ನಡೆಸುತ್ತಿರುವುದು ತಿಳಿದು ಬಂದಿದೆ.

Published On - 4:53 pm, Mon, 17 August 20

ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ