AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಿಎಂ ಯಡಿಯೂರಪ್ಪ ಬೀದರ್, ಯಾದಗಿರಿ ಜಿಲ್ಲಾ ಪ್ರವಾಸ.. ಹೊಸ ಹೊಸ ಕಾಮಗಾರಿಗೆ ಚಾಲನೆ

ಇಂದು ಸಿಎಂ ಬಿಎಸ್ ಯಡಿಯೂರಪ್ಪ ಬೀದರ್ ಮತ್ತು ಯಾದಗಿರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಅನೇಕ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಹಾಗೂ ಹೊಸ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ.

ಇಂದು ಸಿಎಂ ಯಡಿಯೂರಪ್ಪ ಬೀದರ್, ಯಾದಗಿರಿ ಜಿಲ್ಲಾ ಪ್ರವಾಸ.. ಹೊಸ ಹೊಸ ಕಾಮಗಾರಿಗೆ ಚಾಲನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jan 06, 2021 | 9:58 AM

Share

ಬೀದರ್: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬೀದರ್ ಮತ್ತು ಯಾದಗಿರಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಅನೇಕ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಹಾಗೂ ಹೊಸ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ.

ಸಿಎಂ ಬೆಳಗ್ಗೆ 10.15ಕ್ಕೆ ಬೀದರ್‌ ಏರ್‌ಬೇಸ್‌ಗೆ ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ 10.30ಕ್ಕೆ ಬೀದರ್‌ ಓಲ್ಡ್ ಸಿಟಿಯಲ್ಲಿರುವ ತಾಯಿ & ಮಕ್ಕಳ ಆರೈಕೆ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ನರ್ಸಿಂಗ್ ಕಾಲೇಜು, ಜಿಲ್ಲಾ ಕ್ರೀಡಾಂಗಣ, ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಬೀದರ್ ಏರ್‌ಬೇಸ್‌ನಿಂದ ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ಬೆಳಸಿ ಬಸವಕಲ್ಯಾಣಕ್ಕೆ ತೆರಳಿ ₹600 ಕೋಟಿ ವೆಚ್ಚದಲ್ಲಿ ತಲೆ ಎತ್ತಲಿರುವ ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಉದ್ಯಾನವನ, ವಿವಿಧ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಯಾದಗಿರಿ ಜಿಲ್ಲೆಗೆ ಸಿಎಂ ಬಿಎಸ್‌ವೈ ಪ್ರಯಾಣ ಬೆಳೆಸಲಿದ್ದಾರೆ. ಯಾದಗಿರಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ, ಅಭಿವೃದ್ಧಿ ಕೆಲಸಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಗೆ ಯಾದಗಿರಿಯಿಂದ ಬೀದರ್‌ಗೆ ಬಂದು ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಈ ರೀತಿ ಇಂದು ಅನೇಕ ಹೊಸ ಹೊಸ ಯೋಜನೆಗಳಿಗೆ ಚಾಲನೆ ಸಿಗಲಿದೆ.

ರಾಜಕಾರಣ | ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಮತ್ತು ಜೊಲ್ಲೆ ಕುಟುಂಬದ ನಡುವೆ ಜಾರಿಯಲ್ಲಿದೆ ಶೀತಲ ಸಮರ!

Published On - 7:15 am, Wed, 6 January 21

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ