AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟಿಂಗ್ ಸಂತೋಷ ತಂದಿದೆ.. ಸಚಿವ ಸಂಪುಟದ ಬಗ್ಗೆ ಆದಷ್ಟು ಬೇಗ ಗುಡ್ ನ್ಯೂಸ್ ಸಿಗಲಿದೆ -ಸಿಎಂ BSY

ರಾಷ್ಟ್ರ ನಾಯಕರ ಜೊತೆಗಿನ ಸಭೆ ಸಂತೋಷ ತಂದುಕೊಟ್ಟಿದೆ. ಹಾಗಾಗಿ,ಸಚಿವ ಸಂಪುಟದ ಬಗ್ಗೆ  ಹೈಕಮಾಂಡ್ ಆದಷ್ಟು ಬೇಗ ಗುಡ್​ ನ್ಯೂಸ್​ ಕೊಡಲಿದೆ ಎಂದು ಯಡಿಯೂರಪ್ಪ ಹೇಳಿದರು.

ಮೀಟಿಂಗ್ ಸಂತೋಷ ತಂದಿದೆ.. ಸಚಿವ ಸಂಪುಟದ ಬಗ್ಗೆ ಆದಷ್ಟು ಬೇಗ ಗುಡ್ ನ್ಯೂಸ್ ಸಿಗಲಿದೆ -ಸಿಎಂ BSY
ಸಿಎಂ ಬಿ.ಎಸ್.ಯಡಿಯೂರಪ್ಪ
KUSHAL V
|

Updated on:Jan 10, 2021 | 5:00 PM

Share

ದೆಹಲಿ: ಅಮಿತ್ ಶಾ, ನಡ್ಡಾ, ಅರುಣ್ ಕುಮಾರ್ ಜೊತೆ ಚರ್ಚೆ ಮಾಡಿದ್ದೇನೆ. ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಮಾಹಿತಿ ನೀಡಿದ್ದೇನೆ. ಚುನಾವಣೆ ಫಲಿತಾಂಶದ ಅಂಕಿ-ಅಂಶ ನೀಡಿದ್ದೇನೆ. ಗ್ರಾ.ಪಂ. ಚುನಾವಣೆ ಫಲಿತಾಂಶ ಅವರಿಗೆ ಸಂತೋಷ ತಂದಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಉಪಚುನಾವಣೆ ಸಂಬಂಧವೂ ಚರ್ಚೆಯಾಯಿತು. 3 ಸ್ಥಾನಗಳಲ್ಲೂ ಗೆಲ್ಲಲೇಬೇಕೆಂದು ಸೂಚಿಸಿದ್ದಾರೆ. ಆದಷ್ಟು ಬೇಗ ಆಕಾಂಕ್ಷಿಗಳ ಪಟ್ಟಿ ಕಳಿಸಲು ಹೇಳಿದ್ದಾರೆ. ಪಟ್ಟಿ ಕಳಿಸಿದರೆ ಅಂತಿಮಗೊಳಿಸುವುದಾಗಿ ಹೇಳಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಜೊತೆಗೆ, ಸಮಾಧಾನಕರ ಹಾಗೂ ತೃಪ್ತಿಕರವಾದ ಚರ್ಚೆಗಳು ನಡೆದಿದೆ. ಈ ಸಭೆ ನನಗಂತೂ ಅತ್ಯಂತ ಸಂತೋಷ, ಸಮಾಧಾನ, ತೃಪ್ತಿ ತಂದಿದೆ. ರಾಷ್ಟ್ರ ನಾಯಕರ ಜೊತೆಗಿನ ಸಭೆ ಸಂತೋಷ ತಂದುಕೊಟ್ಟಿದೆ. ಸಚಿವ ಸಂಪುಟದ ಬಗ್ಗೆ  ಹೈಕಮಾಂಡ್ ಆದಷ್ಟು ಬೇಗ ಗುಡ್​ ನ್ಯೂಸ್​ ಕೊಡಲಿದೆ. ಆದಷ್ಟು ಬೇಗ ಶುಭ ಸುದ್ದಿಯನ್ನು ಕೊಡುತ್ತಾರೆ. ರಾಷ್ಟ್ರ ನಾಯಕರು ಶುಭ ಸುದ್ದಿ ಕೊಡುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಷ್ಟ್ರ ನಾಯಕರ ಭೇಟಿ ಬಳಿಕ ನಾನು ಸಂತೋಷವಾಗಿದ್ದೇನೆ. ಹೀಗಾಗಿ, ಈಗ ಯತ್ನಾಳ್ ವಿಚಾರದ ಬಗ್ಗೆ ಮಾತಾಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿ ಸುಮ್ಮನಾದರು.

ಅಮಿತ್ ಶಾ ಭೇಟಿಯಾದ ಯಡಿಯೂರಪ್ಪ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ

Published On - 4:51 pm, Sun, 10 January 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ