AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ. ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ […]

ಅಂತರ್ಜಾತಿ ವಿವಾಹ? ಕಲ್ಲು ಕಟ್ಟಿ, ಕೆರೆಗೆ ಎಸೆದು ಮಗಳನ್ನು ಕೊಂದವರು ಅರೆಸ್ಟ್
KUSHAL V
| Edited By: |

Updated on: Jun 29, 2020 | 5:30 PM

Share

ಚಿಕ್ಕಬಳ್ಳಾಪುರ: ಹೆತ್ತ ಮಗಳ ಪ್ರಾಣಕ್ಕಿಂತ ತಮ್ಮ ಮಾನವೇ ಮುಖ್ಯ ಎಂದು ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿದ್ದ ಕುಟುಂಬಸ್ಥರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ನೆರೆಯ ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲೂಕಿನ ತುಮಕುಂಟೆ ಗ್ರಾಮದವರು ಎಂದು ತಿಳಿದುಬಂದಿದೆ.

ಬೇರೆ ಜಾತಿಯ ಹುಡುಗನನ್ನ ಪ್ರೀತಿಸಿ ಆತನನ್ನೇ ವರಿಸುವ ಹಠವೇ 18 ವರ್ಷದ ಸಂಧ್ಯಾಳಿಗೆ ಮುಳುವಾಗಿಬಿಟ್ಟಿತು. ಅವಳ ಹಠವನ್ನು ಸಹಿಸದ ಆಕೆಯ ತಾಯಿ ರಾಮಾಂಜಿನಮ್ಮ, ಅಣ್ಣಾ ಅಶೋಕ್, ಅಕ್ಕ ನೇತ್ರಾವತಿ ಹಾಗೂ ಮಾವ ಬಾಲಕೃಷ್ಣ ಸಂಧ್ಯಾಳನ್ನ ಇದೇ ತಿಂಗಳ 24ರಂದು ಕತ್ತು ಹಿಸುಕಿ ಕೊಲೆ ಮಾಡಿದ್ದರು. ತದ ನಂತರ ಆಕೆಯ ಶವವನ್ನು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುಲಿಕುಂಟೆಯ ಕೆರೆಯಲ್ಲಿ ಬಿಸಾಡಿದ್ದರು.

ಇದನ್ನೂ ಓದಿ: ಛೇ! ಇದೆಂಥಾ ಕ್ರೌರ್ಯ.. ಮಹಿಳೆಯನ್ನ ಕೊಂದು ಕಲ್ಲು ಕಟ್ಟಿ ಕೆರೆಗೆ ಎಸೆದ ದುಷ್ಕರ್ಮಿಗಳು

ಜಿಗುಪ್ಸೆಯ ಸಂಗತಿಯೆಂದರೆ ಆಕೆಯ ಶವ ಯಾರಿಗೂ ಸಿಗಬಾರದೆಂದು ಕಾಲಿಗೆ ಕಲ್ಲು ಕಟ್ಟಿ ಕೆರೆಯಲ್ಲಿ ದೂಡಿದ್ದರು. ಇದೇ ತಿಂಗಳ 26ರಂದು ಶವ ಪತ್ತೆಯಾದ ಹಿನ್ನೆಲೆಯಲ್ಲಿ ಗೌರಿಬಿದನೂರು ಪೊಲೀಸರು ಪ್ರಕರಣವನ್ನ ಕೈಗೆತ್ತಿಕೊಂಡು ಸಂಧ್ಯಾಳ ಕುಟುಂಬಸ್ಥರನ್ನ ಬಂಧಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್