AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಿಗರೇ ಹುಷಾರ್! ಅಸಲಿ ನೋಟುಗಳನ್ನು ಮೀರಿಸಿ ಚಲಾವಣೆಗೆ ಬಂದಿವೆ ಖೋಟಾ ನೋಟುಗಳು..

ಚಿಕ್ಕಮಗಳೂರು : ಅಂಗಡಿಗೆ ಹೋಗಿ ಚೇಂಜ್ ಇಸ್ಕೊಬೇಕಾದ್ರೆ ಹುಷಾರ್! ಲಕ್ಷಾಂತರ ರೂ ವ್ಯವಹಾರ ಮಾಡ್ಬೇಕಾದ್ರೂ ಜೋಪಾನ! ಅದ್ರಲ್ಲೂ 500-2000 ರೂಪಾಯಿಗಳ ನೋಟ್ ತೆಗೆದುಕೊಳ್ಳಬೇಕಾದ್ರೆ ಬಿ ಕೇರ್ ಫುಲ್! ಅಷ್ಟಕ್ಕೂ ನಾವ್ ನಿಮ್ನ ಸುಮ್ನೇ ಹೆದರಿಸ್ತಿಲ್ಲ, ಹಣದ ವ್ಯವಹಾರ ಮಾಡ್ಬೇಕಾದ್ರೆ ಮೋಸ ಹೋಗ್ಬೇಡಿ ಅಂತಾ ಎಚ್ಚರಿಸ್ತಾ ಇದ್ದೀವಿ. ಏಕೆಂದರೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಆ ಎರಡು ಪ್ರಕರಣಗಳು ನೀವು ಹುಷಾರಾಗಿರೋದು ಒಳಿತು ಅನ್ನೋದನ್ನ ಸಾರಿ ಸಾರಿ ಹೇಳ್ತಿದೆ. ಪ್ರಕರಣ 1: ನೂರಲ್ಲ, ಇನ್ನೂರಲ್ಲ, ಬರೋಬ್ಬರಿ 500ರೂ ಮುಖಬೆಲೆಯ […]

ಕಾಫಿನಾಡಿಗರೇ ಹುಷಾರ್! ಅಸಲಿ ನೋಟುಗಳನ್ನು ಮೀರಿಸಿ ಚಲಾವಣೆಗೆ ಬಂದಿವೆ ಖೋಟಾ ನೋಟುಗಳು..
ಆಯೇಷಾ ಬಾನು
|

Updated on:Oct 13, 2020 | 11:21 AM

Share

ಚಿಕ್ಕಮಗಳೂರು : ಅಂಗಡಿಗೆ ಹೋಗಿ ಚೇಂಜ್ ಇಸ್ಕೊಬೇಕಾದ್ರೆ ಹುಷಾರ್! ಲಕ್ಷಾಂತರ ರೂ ವ್ಯವಹಾರ ಮಾಡ್ಬೇಕಾದ್ರೂ ಜೋಪಾನ! ಅದ್ರಲ್ಲೂ 500-2000 ರೂಪಾಯಿಗಳ ನೋಟ್ ತೆಗೆದುಕೊಳ್ಳಬೇಕಾದ್ರೆ ಬಿ ಕೇರ್ ಫುಲ್! ಅಷ್ಟಕ್ಕೂ ನಾವ್ ನಿಮ್ನ ಸುಮ್ನೇ ಹೆದರಿಸ್ತಿಲ್ಲ, ಹಣದ ವ್ಯವಹಾರ ಮಾಡ್ಬೇಕಾದ್ರೆ ಮೋಸ ಹೋಗ್ಬೇಡಿ ಅಂತಾ ಎಚ್ಚರಿಸ್ತಾ ಇದ್ದೀವಿ. ಏಕೆಂದರೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಆ ಎರಡು ಪ್ರಕರಣಗಳು ನೀವು ಹುಷಾರಾಗಿರೋದು ಒಳಿತು ಅನ್ನೋದನ್ನ ಸಾರಿ ಸಾರಿ ಹೇಳ್ತಿದೆ.

ಪ್ರಕರಣ 1: ನೂರಲ್ಲ, ಇನ್ನೂರಲ್ಲ, ಬರೋಬ್ಬರಿ 500ರೂ ಮುಖಬೆಲೆಯ 5,50,000 ರೂಪಾಯಿ ನಕಲಿ ನೋಟನ್ನ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಪೊಲೀಸ್ರು ರೆಡ್ ಹ್ಯಾಂಡಾಗಿ ಮೂಡಿಗೆರೆ ಸಮೀಪದ ಹಾಂದಿ ಬಳಿ ವಶಪಡಿಸಿಕೊಂಡಿದ್ದಾರೆ. ಯಾವುದೇ ವ್ಯತ್ಯಾಸವಿಲ್ಲದಂತೆ ಕಾಣೋ ಈ ನಕಲಿ ನೋಟುಗಳು, ಅಸಲಿ ನೋಟುಗಳನ್ನ ಕೂಡ ಮೀರಿಸ್ತಾವೆ. ಅಷ್ಟು ಪರ್ಫೆಕ್ಟಾಗಿ ಮುದ್ರಣವಾಗಿರುವ ಈ ಖೋಟಾ ನೋಟುಗಳನ್ನು ಖದೀಮರ ಗುಂಪೊಂದು ಚಲಾವಣೆ ಮಾಡುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ತಿಳಿದುಕೊಂಡು ಆಲ್ದೂರು ಪೊಲೀಸ್ ಇನ್ಸ್ಪೆಕ್ಟರ್ ಶಂಭುಲಿಂಗಯ್ಯ ನೇತೃತ್ವದಲ್ಲಿ ದಾಳಿ ನಡೆಸಿದ ಸಿಬ್ಬಂದಿ ಖೋಟಾ ನೋಟು ಸಾಗಿಸುತ್ತಿದ್ದ ಕಾರಿನ ಸಮೇತ ಆರೋಪಿಗಳನ್ನ ಬಂಧಿಸಿದ್ದಾರೆ.

ಖದೀಮರು ದಕ್ಷಿಣ ಕನ್ನಡದಿಂದ ಚಿಕ್ಕಮಗಳೂರಿಗೆ ನಕಲಿ ಹಣವನ್ನ ಸಾಗಿಸುತ್ತಿದ್ದಾಗ ಅರೆಸ್ಟ್ ಆಗಿದ್ದಾರೆ. ಇದ್ರಲ್ಲಿ ಇನ್ನೊಂದು ಇಂಟರೆಸ್ಟಿಂಗ್ ಮ್ಯಾಟ್ರು ಅಂದ್ರೆ, ಈ ಖದೀಮರು ಹೋಗ್ತಾ ಇದ್ದಿದ್ದು ರೆಡ್ ಮರ್ಕ್ಯೂರಿಯನ್ನ ಖರೀದಿ ಮಾಡೋದಕ್ಕಂತೆ. ರೆಡ್ ಮರ್ಕ್ಯೂರಿ ಅಸಲಿಯತ್ತು ಏನು ಅನ್ನೋದನ್ನ ಒಂದೆಡೆ ತನಿಖೆ ಮಾಡ್ತಿರೋ ಪೊಲೀಸ್ರು, ಸದ್ಯ ಖೋಟಾ ಖದೀಮರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಪ್ರಕರಣದಲ್ಲಿ ಸಂತೋಷ್ ಹಾಗೂ ನಾಸೀರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಪ್ರಕರಣ 2: ನಕಲಿ 500 ರೂಪಾಯಿಯ ಸ್ಟೋರಿ ಒಂದ್ಕಡೆಯಾದ್ರೆ ಮತ್ತೊಂದೆಡೆ ಮೂಡಿಗೆರೆಯಲ್ಲಿ ಕೊರೊನಾದಿಂದ ಬ್ಯುಸಿನೆಸ್ ಕೈಕೊಟ್ಟ ಹಿನ್ನೆಲೆಯಲ್ಲಿ ಕಾಳುಮೆಣಸು, ಏಲಕ್ಕಿ, ಕಾಫಿ ವ್ಯಾಪಾರವನ್ನ ತಂದೆಯ ಜೊತೆ ಸೇರಿ ಮಾಡ್ತಿದ್ದ 32 ವರ್ಷದ ಪ್ರಮೋದ್ ಹಾಗೂ ತರಕಾರಿ ವ್ಯಾಪಾರ ಮಾಡ್ತಿದ್ದ 23 ವರ್ಷದ ಶಕೀಲ್ ಹೊಸ ವ್ಯವಹಾರಕ್ಕೆ ಇಳಿದಿದ್ರು. ಇವರು ಕಲರ್ ಪ್ರಿಂಟರ್​ನಿಂದ ಗರಿ ಗರಿ ಕಲರ್ ನೋಟುಗಳನ್ನ ಪ್ರಿಂಟ್ ಮಾಡಿ, ಆ ಹಣವನ್ನ ಚಲಾವಣೆ ಮಾಡಿ ಲಾಭ ಮಾಡಲು ಸಜ್ಜಾಗಿದ್ರು.

ಇವರು ಹೆಚ್ಚಾಗಿ 2000ರೂಪಾಯಿಯ ನೋಟನ್ನೇ ಹೆಚ್ಚಾಗಿ ಮುದ್ರಿಸುತ್ತಿದ್ರು. ಸದ್ಯ ನೋಟನ್ನ ಕಲರ್ ಪ್ರಿಂಟ್ ಮಾಡಿ ಜನರನ್ನ ಯಾಮಾರಿಸೋಕೆ ಹೋಗಿ ಇದೀಗ ಈ ಇಬ್ಬರು ಪೊಲೀಸರ ಅತಿಥಿಗಳಾಗಿದ್ದಾರೆ. ಗೋಡನ್ ವೊಂದರಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಮೆಷಿನ್ ಸೇರಿದಂತೆ ನಕಲಿ 2000 ರೂ ಮುಖಬೆಲೆಯ 350 ನೋಟುಗಳನ್ನು ಮೂಡಿಗೆರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ತಮ್ಮ ಇಲಾಖೆಯ ಪೊಲೀಸರ ಕಾರ್ಯಕ್ಕೆ ಎಸ್ಪಿ ಅಕ್ಷಯ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ‌.

ಒಂದ್ಕಡೆ ರೆಡ್ ಮರ್ಕ್ಯೂರಿಯ ಹಿಂದೆ ಬಿದ್ದು ಇಬ್ಬರು ಆರೋಪಿಗಳು ಲಾಕ್ ಆಗಿದ್ರೆ, ಮತ್ತೊಂದೆಡೆ ಕೊರೊನಾದಿಂದ ಲಾಸ್ ಆಗಿದೆ, ಲಾಭ ಮಾಡ್ಕೊಬೇಕು ಅನ್ನೋ ಆಸೆಗೆ ಬಿದ್ದು ಮತ್ತಿಬ್ಬರು ಯುವಕರು ಅರೆಸ್ಟ್ ಆಗಿದ್ದಾರೆ. ಅಷ್ಟಕ್ಕೂ ಈಗಷ್ಟೇ ಇವರ ನಕಲಿಯಾಟ ಬೆಳಕಿಗೆ ಬಂದಿದೆ. ಇದಕ್ಕಿಂತ ಮೊದ್ಲು ಈ ರೀತಿಯ ನಕಲಿ ಗ್ಯಾಂಗ್​ಗಳು ಅದೆಷ್ಟು ಜನರಿಗೆ ಯಾಮಾರಿಸಿದ್ದಾವೂ ದೇವ್ರೇ ಬಲ್ಲ. ಯಾವ್ದಕ್ಕೂ ನೀವು ವ್ಯವಹಾರ ಮಾಡೋ ಮುನ್ನ ಎಚ್ಚರದಿಂದ ಇರ್ಲೇಬೇಕು, ಇಲ್ಲ ಅಂದ್ರೆ ಇಂತಹ ನಕಲಿಗಳು ನಿಮ್ಗೆ ಮಕ್ಮಲ್ ಟೋಪಿ ಹಾಕೋದ್ರಲ್ಲಿ ಡೌಟೇ ಇಲ್ಲ.

Published On - 11:21 am, Tue, 13 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ