AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ. ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ […]

ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು! ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಿಂದ ಫೀಸ್ ಕಟ್ಟಲು ಒತ್ತಾಯ
ಆಯೇಷಾ ಬಾನು
|

Updated on:Jun 20, 2020 | 9:07 AM

Share

ಗದಗ: ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶುಲ್ಕ ಪಾವತಿಸುವಂತೆ ಶಾಲೆ ಆಡಳಿತ ಮಂಡಳಿ ಪೋಷಕರಿಗೆ ಪತ್ರ ಬರೆದಿಯುವ ಘಟನೆ ಗದಗ ಹೊರವಲಯದ ಮುಂಡರಗಿ ರಸ್ತೆಯಲ್ಲಿರುವ ಶಾಲೆಯಲ್ಲಿ ನಡೆದಿದೆ.

ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳ ಪೋಷಕರಿಗೆ ಆಡಳಿತ ಮಂಡಳಿ ಪತ್ರ ಬರೆದಿದೆ. ಶೇಕಡಾ 50ರಷ್ಟು ಶುಲ್ಕವನ್ನು ಪಾವತಿ ಮಾಡಬೇಕು. ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿ ಮಾಡದಿದ್ದರೆ ಮಕ್ಕಳನ್ನ ಶಾಲೆಯಲ್ಲಿ ಮುಂದುವರಿಸುವ ಇಚ್ಛೆ ಇಲ್ಲವೆಂದು ತಿಳಿಯಲಾಗುತ್ತೆ. ಆಗ ನಾವು ಹೊಸ ದಾಖಲಾತಿ ಮಾಡಿಕೊಳ್ಳುವುದಾಗಿ ಬಹಿರಂಗ ಪತ್ರ ಬರೆದಿದೆ. ಅಡ್ಮಿಷನ್, ವಾಹನ ಶುಲ್ಕ ಪಾವತಿ ಮಾಡುವಂತೆ ಒತ್ತಾಯಪೂರ್ವಕವಾಗಿ ಶಾಲೆ ಆಡಳಿತ ಮಂಡಳಿ ವಸೂಲಿಗೆ ಮುಂದಾಗಿದೆ.

ಪೋಷಕರ ಅಭಿಪ್ರಾಯ ನೆಪದಲ್ಲಿ ಸಭೆ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಪೋಷಕರ ಅಭಿಪ್ರಾಯ ಸಂಗ್ರಹ ಮಾಡುವ ನೆಪದಲ್ಲಿ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹದ ಬದಲಿಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಮಂಡಿ ನೋವು ಸೇರಿದಂತೆ ಹಲವು ಕಾಯಿಲೆಗಳಿಗೆ ಔಷಧಗಳ ಬಗ್ಗೆ ಮಾರ್ಕೆಟಿಂಗ್ ಮಾಡಿದ್ದಾರೆ. ಸುಮಾರು 300 ಪೋಷಕರನ್ನು ಒಂದೆಡೆ ಸೇರಿಸಿ ಮಾರ್ಕೆಟಿಂಗ್ ಮಾಡಲಾಗಿದೆ.

ಕೊವಿಡ್ ನಿಯಮ ಉಲ್ಲಂಘಿಸಿ ನಟರನ್ನು ಕರೆಸಿ ಶಾಲೆಯಿಂದ ಮಾರ್ಕೆಟಿಂಗ್ ಮಾಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಸಂಸ್ಥೆ ಅಧ್ಯಕ್ಷ ಎಸ್.ವೈ.ಚಿಕ್ಕಟ್ಟಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ್ರು. ಇದನ್ನು ಡಿಡಿಪಿಐ ಗಮನಕ್ಕೆ ತಂದರೂ ಡೋಂಟ್‌ಕೇರ್. ಸರ್ಕಾರದ ಆದೇಶ ಉಲ್ಲಂಘಿಸಿದ್ರೂ ಜಿಲ್ಲಾಡಳಿತ ಮೌನವಾಗಿದೆ.

Published On - 8:13 am, Sat, 20 June 20

Follow Us
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ