AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Child Sale | ಪಡೆದ ಸಾಲ ವಾಪಸ್ ನೀಡದಿದಕ್ಕೆ ವೈದ್ಯ ದಂಪತಿಗೆ ಗಂಡು ಮಗು ಮಾರಾಟ.. 6 ಮಂದಿ ಅರೆಸ್ಟ್

ಪಡೆದ ಸಾಲ ವಾಪಸ್ ನೀಡದ ಹಿನ್ನೆಲೆಯಲ್ಲಿ ಸಾಲ ಪಡೆದಿದ್ದ ದಂಪತಿಯ ಗಂಡು ಮಗುವನ್ನು ಮಾರಾಟ ಮಾಡಿದ ಅಮಾನವೀಯ ಘಟನೆ ಧಾರವಾಡದ ತೇಜಸ್ವಿನಗರ ಬಡಾವಣೆಯಲ್ಲಿ ನಡೆದಿದೆ.

Child Sale | ಪಡೆದ ಸಾಲ ವಾಪಸ್ ನೀಡದಿದಕ್ಕೆ ವೈದ್ಯ ದಂಪತಿಗೆ ಗಂಡು ಮಗು ಮಾರಾಟ.. 6 ಮಂದಿ ಅರೆಸ್ಟ್
ಭಾರತಿ ವಾಲ್ಮೀಕಿ, ರಮೇಶ್ ವಾಲ್ಮೀಕಿ, ವಿನಾಯಕ, ರವಿ ಹೆಗಡೆ
ಆಯೇಷಾ ಬಾನು
|

Updated on: Mar 07, 2021 | 8:53 AM

Share

ಧಾರವಾಡ: ಪಡೆದ ಸಾಲ ವಾಪಸ್ ನೀಡದ ಹಿನ್ನೆಲೆಯಲ್ಲಿ ಸಾಲ ಪಡೆದಿದ್ದ ದಂಪತಿಯ ಗಂಡು ಮಗುವನ್ನು ಮಾರಾಟ ಮಾಡಿದ ಅಮಾನವೀಯ ಘಟನೆ ಧಾರವಾಡದ ತೇಜಸ್ವಿನಗರ ಬಡಾವಣೆಯಲ್ಲಿ ನಡೆದಿದೆ. ರೂಪಾ, ಮೈನುದ್ದೀನ್ ದಂಪತಿಯ ಗಂಡು ಮಗುವನ್ನು ಉಡುಪಿ ಮೂಲದ ವೈದ್ಯ ದಂಪತಿಗೆ ಮಾರಾಟ ಮಾಡಲಾಗಿದ್ದು 5 ತಿಂಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಡೆದ ಸಾಲ ಮರಳಿಸದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಸಾಲಗಾರರ ಮಗುವನ್ನೇ ಮಾರಿ ತಮ್ಮ ಹಣ ಪಡೆದಿದ್ದಾರೆ. ಭಾರತಿ ವಾಲ್ಮೀಕಿ ಎಂಬುವವರ ಬಳಿ ರೂಪಾ 72,000 ರೂ. ಸಾಲ ಪಡೆದಿದ್ದರು. ಸಾಲಕ್ಕೆ ಬಡ್ಡಿ ಸೇರಿಸಿ ₹1.50ಲಕ್ಷ ರೂ ಆಗಿತ್ತು. ಅಷ್ಟೂ ಹಣವನ್ನು ನೀಡುವಂತೆ ಭಾರತಿ ಡಿಮ್ಯಾಂಡ್ ಮಾಡಿದ್ದಳು. ಇದೇ ವೇಳೆ ರೂಪಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಭಾರತಿ ಒತ್ತೆಯಾಳಾಗಿ ತಾಯಿ, ಮಗುವನ್ನು ತಮ್ಮ ಮನೆಯಲ್ಲಿ ಇರಿಸಿಕೊಂಡಿದ್ದಳು ಎಂಬ ಆರೋಪ ಕೇಳಿ ಬಂದಿದೆ. 40 ದಿನ ಮನೆಯಲ್ಲೇ ಇಟ್ಟುಕೊಂಡು ಖಾಲಿ ಬಾಂಡ್ ಪೇಪರ್ ಮೇಲೆ ಸಹಿ ಮಾಡಿಸಿ ಮಗುವನ್ನು ಉಡುಪಿ ಮೂಲದ ವೈದ್ಯ ದಂಪತಿಗೆ ಮಾರಿ ರೂಪಾಗೆ 1 ಲಕ್ಷ ರೂಪಾಯಿಯನ್ನು ಭಾರತಿ ಕೊಟ್ಟಿದ್ದಾಳೆ. ಬಳಿಕ ಸುಮಾರು ಐದು ತಿಂಗಳ ನಂತರ ಈ ಪ್ರಕರಣ ಹೊರ ಬಂದಿದೆ.

ಈ ಘಟನೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ವಾಟ್ಸಾಪ್ ಮೂಲಕ ಸಂದೇಶ ರವಾನಿಸಿದ್ದಾರೆ. ಈ ಸಂದೇಶ ಆಧರಿಸಿ ತನಿಖೆ ನಡೆಸಿದ ವಿದ್ಯಾಗಿರಿ ಪೊಲೀಸರು ಆರೋಪಿಗಳಾದ ಭಾರತಿ, ಮಗ ರಮೇಶ್, ಅಳಿಯ ವಿನಾಯಕ, ರವಿ ಹೆಗಡೆಯನ್ನು ಬಂಧಿಸಿದ್ದಾರೆ. ಮಗು ಪಡೆದಿದ್ದ ವೈದ್ಯ ದಂಪತಿ ವಿಜಯ್ ನೆಗಳೂರು, ಚಿತ್ರಾ ದಂಪತಿಯನ್ನೂ ವಶಕ್ಕೆ ಪಡೆಯಲಾಗಿದೆ. ಇನ್ನು ಪೊಲೀಸರು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ನೀಡಿದ್ದಾರೆ.

ಇದನ್ನೂ ಓದಿ: ಗಂಡು ಮಗುವನ್ನು ಮಾರಾಟ ಮಾಡಲು ಮುಂದಾದ ತಂದೆ .. ಮಗು ಕೊಡಲು ಒಲ್ಲೆ ಎಂದ ಪತ್ನಿಗೆ ರಸ್ತೆಯಲ್ಲಿ ಜುಟ್ಟು ಹಿಡಿದು ಎಳೆದಾಡಿದ ಪತಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ