AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Child Sale | ಪಡೆದ ಸಾಲ ವಾಪಸ್ ನೀಡದಿದಕ್ಕೆ ವೈದ್ಯ ದಂಪತಿಗೆ ಗಂಡು ಮಗು ಮಾರಾಟ.. 6 ಮಂದಿ ಅರೆಸ್ಟ್

ಪಡೆದ ಸಾಲ ವಾಪಸ್ ನೀಡದ ಹಿನ್ನೆಲೆಯಲ್ಲಿ ಸಾಲ ಪಡೆದಿದ್ದ ದಂಪತಿಯ ಗಂಡು ಮಗುವನ್ನು ಮಾರಾಟ ಮಾಡಿದ ಅಮಾನವೀಯ ಘಟನೆ ಧಾರವಾಡದ ತೇಜಸ್ವಿನಗರ ಬಡಾವಣೆಯಲ್ಲಿ ನಡೆದಿದೆ.

Child Sale | ಪಡೆದ ಸಾಲ ವಾಪಸ್ ನೀಡದಿದಕ್ಕೆ ವೈದ್ಯ ದಂಪತಿಗೆ ಗಂಡು ಮಗು ಮಾರಾಟ.. 6 ಮಂದಿ ಅರೆಸ್ಟ್
ಭಾರತಿ ವಾಲ್ಮೀಕಿ, ರಮೇಶ್ ವಾಲ್ಮೀಕಿ, ವಿನಾಯಕ, ರವಿ ಹೆಗಡೆ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 07, 2021 | 8:53 AM

Share

ಧಾರವಾಡ: ಪಡೆದ ಸಾಲ ವಾಪಸ್ ನೀಡದ ಹಿನ್ನೆಲೆಯಲ್ಲಿ ಸಾಲ ಪಡೆದಿದ್ದ ದಂಪತಿಯ ಗಂಡು ಮಗುವನ್ನು ಮಾರಾಟ ಮಾಡಿದ ಅಮಾನವೀಯ ಘಟನೆ ಧಾರವಾಡದ ತೇಜಸ್ವಿನಗರ ಬಡಾವಣೆಯಲ್ಲಿ ನಡೆದಿದೆ. ರೂಪಾ, ಮೈನುದ್ದೀನ್ ದಂಪತಿಯ ಗಂಡು ಮಗುವನ್ನು ಉಡುಪಿ ಮೂಲದ ವೈದ್ಯ ದಂಪತಿಗೆ ಮಾರಾಟ ಮಾಡಲಾಗಿದ್ದು 5 ತಿಂಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಡೆದ ಸಾಲ ಮರಳಿಸದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಸಾಲಗಾರರ ಮಗುವನ್ನೇ ಮಾರಿ ತಮ್ಮ ಹಣ ಪಡೆದಿದ್ದಾರೆ. ಭಾರತಿ ವಾಲ್ಮೀಕಿ ಎಂಬುವವರ ಬಳಿ ರೂಪಾ 72,000 ರೂ. ಸಾಲ ಪಡೆದಿದ್ದರು. ಸಾಲಕ್ಕೆ ಬಡ್ಡಿ ಸೇರಿಸಿ ₹1.50ಲಕ್ಷ ರೂ ಆಗಿತ್ತು. ಅಷ್ಟೂ ಹಣವನ್ನು ನೀಡುವಂತೆ ಭಾರತಿ ಡಿಮ್ಯಾಂಡ್ ಮಾಡಿದ್ದಳು. ಇದೇ ವೇಳೆ ರೂಪಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಭಾರತಿ ಒತ್ತೆಯಾಳಾಗಿ ತಾಯಿ, ಮಗುವನ್ನು ತಮ್ಮ ಮನೆಯಲ್ಲಿ ಇರಿಸಿಕೊಂಡಿದ್ದಳು ಎಂಬ ಆರೋಪ ಕೇಳಿ ಬಂದಿದೆ. 40 ದಿನ ಮನೆಯಲ್ಲೇ ಇಟ್ಟುಕೊಂಡು ಖಾಲಿ ಬಾಂಡ್ ಪೇಪರ್ ಮೇಲೆ ಸಹಿ ಮಾಡಿಸಿ ಮಗುವನ್ನು ಉಡುಪಿ ಮೂಲದ ವೈದ್ಯ ದಂಪತಿಗೆ ಮಾರಿ ರೂಪಾಗೆ 1 ಲಕ್ಷ ರೂಪಾಯಿಯನ್ನು ಭಾರತಿ ಕೊಟ್ಟಿದ್ದಾಳೆ. ಬಳಿಕ ಸುಮಾರು ಐದು ತಿಂಗಳ ನಂತರ ಈ ಪ್ರಕರಣ ಹೊರ ಬಂದಿದೆ.

ಈ ಘಟನೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ವಾಟ್ಸಾಪ್ ಮೂಲಕ ಸಂದೇಶ ರವಾನಿಸಿದ್ದಾರೆ. ಈ ಸಂದೇಶ ಆಧರಿಸಿ ತನಿಖೆ ನಡೆಸಿದ ವಿದ್ಯಾಗಿರಿ ಪೊಲೀಸರು ಆರೋಪಿಗಳಾದ ಭಾರತಿ, ಮಗ ರಮೇಶ್, ಅಳಿಯ ವಿನಾಯಕ, ರವಿ ಹೆಗಡೆಯನ್ನು ಬಂಧಿಸಿದ್ದಾರೆ. ಮಗು ಪಡೆದಿದ್ದ ವೈದ್ಯ ದಂಪತಿ ವಿಜಯ್ ನೆಗಳೂರು, ಚಿತ್ರಾ ದಂಪತಿಯನ್ನೂ ವಶಕ್ಕೆ ಪಡೆಯಲಾಗಿದೆ. ಇನ್ನು ಪೊಲೀಸರು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ನೀಡಿದ್ದಾರೆ.

ಇದನ್ನೂ ಓದಿ: ಗಂಡು ಮಗುವನ್ನು ಮಾರಾಟ ಮಾಡಲು ಮುಂದಾದ ತಂದೆ .. ಮಗು ಕೊಡಲು ಒಲ್ಲೆ ಎಂದ ಪತ್ನಿಗೆ ರಸ್ತೆಯಲ್ಲಿ ಜುಟ್ಟು ಹಿಡಿದು ಎಳೆದಾಡಿದ ಪತಿ

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು