AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Child Sale | ಪಡೆದ ಸಾಲ ವಾಪಸ್ ನೀಡದಿದಕ್ಕೆ ವೈದ್ಯ ದಂಪತಿಗೆ ಗಂಡು ಮಗು ಮಾರಾಟ.. 6 ಮಂದಿ ಅರೆಸ್ಟ್

ಪಡೆದ ಸಾಲ ವಾಪಸ್ ನೀಡದ ಹಿನ್ನೆಲೆಯಲ್ಲಿ ಸಾಲ ಪಡೆದಿದ್ದ ದಂಪತಿಯ ಗಂಡು ಮಗುವನ್ನು ಮಾರಾಟ ಮಾಡಿದ ಅಮಾನವೀಯ ಘಟನೆ ಧಾರವಾಡದ ತೇಜಸ್ವಿನಗರ ಬಡಾವಣೆಯಲ್ಲಿ ನಡೆದಿದೆ.

Child Sale | ಪಡೆದ ಸಾಲ ವಾಪಸ್ ನೀಡದಿದಕ್ಕೆ ವೈದ್ಯ ದಂಪತಿಗೆ ಗಂಡು ಮಗು ಮಾರಾಟ.. 6 ಮಂದಿ ಅರೆಸ್ಟ್
ಭಾರತಿ ವಾಲ್ಮೀಕಿ, ರಮೇಶ್ ವಾಲ್ಮೀಕಿ, ವಿನಾಯಕ, ರವಿ ಹೆಗಡೆ
ಆಯೇಷಾ ಬಾನು
|

Updated on: Mar 07, 2021 | 8:53 AM

Share

ಧಾರವಾಡ: ಪಡೆದ ಸಾಲ ವಾಪಸ್ ನೀಡದ ಹಿನ್ನೆಲೆಯಲ್ಲಿ ಸಾಲ ಪಡೆದಿದ್ದ ದಂಪತಿಯ ಗಂಡು ಮಗುವನ್ನು ಮಾರಾಟ ಮಾಡಿದ ಅಮಾನವೀಯ ಘಟನೆ ಧಾರವಾಡದ ತೇಜಸ್ವಿನಗರ ಬಡಾವಣೆಯಲ್ಲಿ ನಡೆದಿದೆ. ರೂಪಾ, ಮೈನುದ್ದೀನ್ ದಂಪತಿಯ ಗಂಡು ಮಗುವನ್ನು ಉಡುಪಿ ಮೂಲದ ವೈದ್ಯ ದಂಪತಿಗೆ ಮಾರಾಟ ಮಾಡಲಾಗಿದ್ದು 5 ತಿಂಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಡೆದ ಸಾಲ ಮರಳಿಸದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಸಾಲಗಾರರ ಮಗುವನ್ನೇ ಮಾರಿ ತಮ್ಮ ಹಣ ಪಡೆದಿದ್ದಾರೆ. ಭಾರತಿ ವಾಲ್ಮೀಕಿ ಎಂಬುವವರ ಬಳಿ ರೂಪಾ 72,000 ರೂ. ಸಾಲ ಪಡೆದಿದ್ದರು. ಸಾಲಕ್ಕೆ ಬಡ್ಡಿ ಸೇರಿಸಿ ₹1.50ಲಕ್ಷ ರೂ ಆಗಿತ್ತು. ಅಷ್ಟೂ ಹಣವನ್ನು ನೀಡುವಂತೆ ಭಾರತಿ ಡಿಮ್ಯಾಂಡ್ ಮಾಡಿದ್ದಳು. ಇದೇ ವೇಳೆ ರೂಪಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಭಾರತಿ ಒತ್ತೆಯಾಳಾಗಿ ತಾಯಿ, ಮಗುವನ್ನು ತಮ್ಮ ಮನೆಯಲ್ಲಿ ಇರಿಸಿಕೊಂಡಿದ್ದಳು ಎಂಬ ಆರೋಪ ಕೇಳಿ ಬಂದಿದೆ. 40 ದಿನ ಮನೆಯಲ್ಲೇ ಇಟ್ಟುಕೊಂಡು ಖಾಲಿ ಬಾಂಡ್ ಪೇಪರ್ ಮೇಲೆ ಸಹಿ ಮಾಡಿಸಿ ಮಗುವನ್ನು ಉಡುಪಿ ಮೂಲದ ವೈದ್ಯ ದಂಪತಿಗೆ ಮಾರಿ ರೂಪಾಗೆ 1 ಲಕ್ಷ ರೂಪಾಯಿಯನ್ನು ಭಾರತಿ ಕೊಟ್ಟಿದ್ದಾಳೆ. ಬಳಿಕ ಸುಮಾರು ಐದು ತಿಂಗಳ ನಂತರ ಈ ಪ್ರಕರಣ ಹೊರ ಬಂದಿದೆ.

ಈ ಘಟನೆ ಬಗ್ಗೆ ಸ್ಥಳೀಯರು ಪೊಲೀಸರಿಗೆ ವಾಟ್ಸಾಪ್ ಮೂಲಕ ಸಂದೇಶ ರವಾನಿಸಿದ್ದಾರೆ. ಈ ಸಂದೇಶ ಆಧರಿಸಿ ತನಿಖೆ ನಡೆಸಿದ ವಿದ್ಯಾಗಿರಿ ಪೊಲೀಸರು ಆರೋಪಿಗಳಾದ ಭಾರತಿ, ಮಗ ರಮೇಶ್, ಅಳಿಯ ವಿನಾಯಕ, ರವಿ ಹೆಗಡೆಯನ್ನು ಬಂಧಿಸಿದ್ದಾರೆ. ಮಗು ಪಡೆದಿದ್ದ ವೈದ್ಯ ದಂಪತಿ ವಿಜಯ್ ನೆಗಳೂರು, ಚಿತ್ರಾ ದಂಪತಿಯನ್ನೂ ವಶಕ್ಕೆ ಪಡೆಯಲಾಗಿದೆ. ಇನ್ನು ಪೊಲೀಸರು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ನೀಡಿದ್ದಾರೆ.

ಇದನ್ನೂ ಓದಿ: ಗಂಡು ಮಗುವನ್ನು ಮಾರಾಟ ಮಾಡಲು ಮುಂದಾದ ತಂದೆ .. ಮಗು ಕೊಡಲು ಒಲ್ಲೆ ಎಂದ ಪತ್ನಿಗೆ ರಸ್ತೆಯಲ್ಲಿ ಜುಟ್ಟು ಹಿಡಿದು ಎಳೆದಾಡಿದ ಪತಿ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್