ಕ್ವಾರಂಟೈನ್ ಕೇಂದ್ರದಲ್ಲಿ ಅನ್ನ-ನೀರು ಇಲ್ಲದೇ ಮಕ್ಕಳ ಗೋಳಾಟ.. ಎಲ್ಲಿ?

ಗದಗ: ಬೆಂಗಳೂರು ಸಂಪೂರ್ಣ ಲಾಕ್ ಡೌನ್ ಆದ ಕಾರಣ ಬೆಂಗಳೂರಿನಿಂದ ಬಂದ ಜನರಿಗೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಅಲ್ಪಸಂಖ್ಯಾತರ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ಕಂಡು ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಲ್ಲ, ಬೆಳಿಗ್ಗೆ 10 ಗಂಟೆಯಾದ್ರೂ ಉಪಹಾರ, ನೀರು ನೀಡಿಲ್ಲ. ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳು ತಮಗೆ ಪರಿಚಯವಿದ್ದವ್ರನ್ನ ಮನೆಗೆ ಕಳುಹಿಸಿ ನಮ್ಮನ್ನ ಮಾತ್ರ ಇಲ್ಲಿ ಕೂಡಿ ಹಾಕಿದ್ದಾರೆ ಅಂತಾ‌ ಜನ ಆರೋಪ […]

ಕ್ವಾರಂಟೈನ್ ಕೇಂದ್ರದಲ್ಲಿ ಅನ್ನ-ನೀರು ಇಲ್ಲದೇ ಮಕ್ಕಳ ಗೋಳಾಟ.. ಎಲ್ಲಿ?
ಸಾಧು ಶ್ರೀನಾಥ್​

Updated on: Jul 14, 2020 | 1:20 PM

ಗದಗ: ಬೆಂಗಳೂರು ಸಂಪೂರ್ಣ ಲಾಕ್ ಡೌನ್ ಆದ ಕಾರಣ ಬೆಂಗಳೂರಿನಿಂದ ಬಂದ ಜನರಿಗೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಅಲ್ಪಸಂಖ್ಯಾತರ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ಕಂಡು ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾಗಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿಲ್ಲ, ಬೆಳಿಗ್ಗೆ 10 ಗಂಟೆಯಾದ್ರೂ ಉಪಹಾರ, ನೀರು ನೀಡಿಲ್ಲ. ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳು ತಮಗೆ ಪರಿಚಯವಿದ್ದವ್ರನ್ನ ಮನೆಗೆ ಕಳುಹಿಸಿ ನಮ್ಮನ್ನ ಮಾತ್ರ ಇಲ್ಲಿ ಕೂಡಿ ಹಾಕಿದ್ದಾರೆ ಅಂತಾ‌ ಜನ ಆರೋಪ ಮಾಡಿದ್ದಾರೆ.

ಸದ್ಯ ಕ್ವಾರಂಟೈನ್ ಕೇಂದ್ರದಲ್ಲಿ ಚಿಕ್ಕ ಚಿಕ್ಕ ಮಕ್ಕಳಿದ್ದು ಅವರಿಗೂ ಸಹ ಸರಿಯಾದ ಊಟದ ವ್ಯವಸ್ಥೆಯಿಲ್ಲದೆ ನರಳುತ್ತಿದ್ದಾರೆ. ಅಧಿಕಾರಿಗಳ ಈ ದಿವ್ಯ ನಿರ್ಲಕ್ಷತನಕ್ಕೆ ಬೇಸತ್ತ ಕ್ವಾರಂಟೈನ್ ಕೇಂದ್ರದ‌ ಜನರು, ಚಿಕ್ಕ ಮಕ್ಕಳ ಹಸುವಿನ ಕೂಗು ಸಹ ಇವರಿಗೆ ಕಾಣುತ್ತಿಲ್ಲವೇ ಅಂತಾ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us