ಸೋಮವಾರ ಬೆಳಗ್ಗೆ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಚಿರಂಜೀವಿ ಸರ್ಜಾ ಕುಟುಂಬಸ್ಥರು ಅರ್ಜುನ್ ಸರ್ಜಾ ಹಾಗೂ ಚಿರು ಅವರ ಅಜ್ಜಿಗಾಗಿ ಕಾಯುತ್ತಿದ್ದಾರೆ. ಸದ್ಯ ಅರ್ಜುನ್ ಸರ್ಜಾ ಚೆನ್ನೈನಲ್ಲಿದ್ದಾರೆ. ಅರ್ಜುನ್ ಸರ್ಜಾ ಬೆಂಗಳೂರಿಗೆ ಬರಲು 4 ಗಂಟೆ ಸಮಯಾವಕಾಶ ಬೇಕಾಗುತ್ತದೆ. ಹಾಗಾಗಿ ನಾಳೆ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ಮಾಡಲು ಕುಟುಂಬ ಸಿದ್ಧತೆ ನಡೆಸುತ್ತಿದ್ದಾರೆ. ಚಿರಂಜೀವಿ ಸರ್ಜಾ ತಾತ […]

ಸೋಮವಾರ ಬೆಳಗ್ಗೆ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ
ಸಾಧು ಶ್ರೀನಾಥ್​ Edited By:

Updated on: Jun 07, 2020 | 8:15 PM

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಚಿರಂಜೀವಿ ಸರ್ಜಾ ಕುಟುಂಬಸ್ಥರು ಅರ್ಜುನ್ ಸರ್ಜಾ ಹಾಗೂ ಚಿರು ಅವರ ಅಜ್ಜಿಗಾಗಿ ಕಾಯುತ್ತಿದ್ದಾರೆ. ಸದ್ಯ ಅರ್ಜುನ್ ಸರ್ಜಾ ಚೆನ್ನೈನಲ್ಲಿದ್ದಾರೆ. ಅರ್ಜುನ್ ಸರ್ಜಾ ಬೆಂಗಳೂರಿಗೆ ಬರಲು 4 ಗಂಟೆ ಸಮಯಾವಕಾಶ ಬೇಕಾಗುತ್ತದೆ. ಹಾಗಾಗಿ ನಾಳೆ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ಮಾಡಲು ಕುಟುಂಬ ಸಿದ್ಧತೆ ನಡೆಸುತ್ತಿದ್ದಾರೆ.

ಚಿರಂಜೀವಿ ಸರ್ಜಾ ತಾತ ಶಕ್ತಿಪ್ರಸಾದ್ ಅವರ ಸ್ವಗ್ರಾಮ ಜಕ್ಕೇನಹಳ್ಳಿ. ಹಾಗಾಗಿ ಚಿರಂಜೀವಿ ಸರ್ಜಾ ಅಂತ್ಯಸಂಸ್ಕಾರವನ್ನು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿ ಗ್ರಾಮದಲ್ಲಿ ಮಾಡಲಿದ್ದಾರೆ ಎಂದು ಸರ್ಜಾ ಕುಟುಂಬ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 6:09 pm, Sun, 7 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us