ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ನೆರವೇರಿದೆ. ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು. ಇದೇ ವೇಳೆ, ನಟ ಚಿರಂಜೀವಿ ಸರ್ಜಾ ಸಮಾಧಿ ಮುಂದೆ ಕ್ರಿಶ್ಚಿಯನ್​ ಸಂಪ್ರದಾಯದಂತೆ ನಿಕಟ ಸಂಬಂಧಿಕರು ಪ್ರಾರ್ಥನೆ ಸಲ್ಲಿಸಿದರು. ಚಿರು ಪತ್ನಿ ಮೇಘನಾ ರಾಜ್ ಹಾಗೂ ಅತ್ತೆ ಪ್ರಮೀಳಾ ಜೋಷಾಯ್ ಸೇರಿದಂತೆ ಕೆಲ ಸಂಬಂಧಿಗಳು ಸಮಾಧಿ ಬಳಿ ಕುಳಿತು ಕ್ರಿಶ್ಚಿಯನ್ ಸಂಪ್ರದಾಯದಂತೆ ಆಂಗ್ಲ ಭಾಷೆ […]

ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ
ಸಾಧು ಶ್ರೀನಾಥ್​

Updated on: Jun 08, 2020 | 7:23 PM

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್‌ಹೌಸ್​ನಲ್ಲಿ ನೆರವೇರಿದೆ. ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು.

ಇದೇ ವೇಳೆ, ನಟ ಚಿರಂಜೀವಿ ಸರ್ಜಾ ಸಮಾಧಿ ಮುಂದೆ ಕ್ರಿಶ್ಚಿಯನ್​ ಸಂಪ್ರದಾಯದಂತೆ ನಿಕಟ ಸಂಬಂಧಿಕರು ಪ್ರಾರ್ಥನೆ ಸಲ್ಲಿಸಿದರು. ಚಿರು ಪತ್ನಿ ಮೇಘನಾ ರಾಜ್ ಹಾಗೂ ಅತ್ತೆ ಪ್ರಮೀಳಾ ಜೋಷಾಯ್ ಸೇರಿದಂತೆ ಕೆಲ ಸಂಬಂಧಿಗಳು ಸಮಾಧಿ ಬಳಿ ಕುಳಿತು ಕ್ರಿಶ್ಚಿಯನ್ ಸಂಪ್ರದಾಯದಂತೆ ಆಂಗ್ಲ ಭಾಷೆ ಹಾಗೂ ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸೋದರ ಮಾವ ಅರ್ಜುನ್ ಸರ್ಜಾ ಭಾವಪರವಶರಾಗಿ ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ, ಬಿಕ್ಕಳಿಕೆ ತಾಳಲಾರದೆ ಅರ್ಜುನ್ ಸರ್ಜಾ ತಾವೊಬ್ಬರೇ ಏಕಾಂತಕ್ಕೆ ತೆರಳಿದರು.

Published On - 7:21 pm, Mon, 8 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us