AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದ ಮುರುಘಾ ಮಠ ನಕ್ಸಲರ ಅಡ್ಡೆಯಾಗಿದೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ ಎಂದು ವಿಧಾನಸೌಧದಲ್ಲಿ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಚಿತ್ರದುರ್ಗದ ಮುರುಘಾ ಮಠ ನಕ್ಸಲರ ಅಡ್ಡೆಯಾಗಿದೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ
TV9 Web
| Edited By: |

Updated on: Sep 16, 2022 | 4:05 PM

Share

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠ (Murugha Mutt) ಪ್ರಗತಿಪರರು, ನಕ್ಸಲರ (Naxal) ಅಡ್ಡೆಯಾಗಿದೆ ಎಂದು ವಿಧಾನಸೌಧದಲ್ಲಿ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda patil yatnal) ಹೇಳಿದ್ದಾರೆ. ಚಿತ್ರದುರ್ಗದ ಮಠದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಮಠದ ಆಸ್ತಿ ಬಗ್ಗೆ ತನಿಖೆಯಾಗಬೇಕು ಎಂದು ಹೈಕೋರ್ಟ್​ ಮುಖ್ಯ ನ್ಯಾಮೂರ್ತಿ ಅವರಿಗೆ ಪತ್ರ ಬರೆಯುತ್ತೇನೆ. ಚಿತ್ರದುರ್ಗ ಮುರುಘಾ ಮಠದ ಬಗ್ಗೆ ಸಾರ್ವಜನಿಕರಿಗೆ ಗೊತ್ತಾಗಲಿ ಎಂದರು.

ಶಿವಮೂರ್ತಿ ಮರುಘಾ ಶರಣರನ್ನು ಗದ್ದುಗೆಯಿಂದ ಕೆಳಗಿಳಿಸಬೇಕು. ಚಿತ್ರದುರ್ಗದ ಮುರುಘಾ ಮಠದ ಆಡಳಿತಾಧಿಕಾರಿ ಮಠವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಒತ್ತಾಯಿಸಿದರು.

ಅದು‌ ಲಿಂಗಾಯತರ ಶ್ರೀಮಂತ ಮಠವಾಗಿದೆ. ಮಠದ ಆಸ್ತಿ‌ ಹೇಗೆ ಉಳಿಸಬೇಕು? ಅಲ್ಲಿರುವ ಆಡಳಿತಾಧಿಕಾರಿ ದುರುಪಯೋಗ ಮಾಡಿಕೊಂಡಿದ್ದಾರೆ. ಮೊದಲು ೧೦ ಸಾವಿರ ಎಕರೆ ಕಾಫಿ ಎಸ್ಟೇಟ್ ಇತ್ತು. ಈಗ ೫೦೦ ಎಕರೆಗೆ ಇಳಿದಿದೆ. ಹೆಲಿಕಾಪ್ಟರ್ ಯಾರದ್ದು ಎಂದು ಗೊತ್ತಾಗಬೇಕು. ಬೇರೆ ಮಠದ ಮೇಲೆ ಇಂತಹ ಗಂಭೀರ ಆರೋಪ ಬಂದಿಲ್ಲ ಎಂದು ತಿಳಿಸಿದರು.

ಬಾಲಕಿಯರ ಮೇಲಿನ ಆರೋಪ ಬಂದಿದೆ. ಜಾತ್ಯಾತೀತರು, ಪ್ರಗತಿಪರರಿಗೆ ಪ್ರಶಸ್ತಿ ಕೊಡಲಾಗಿದೆ. ಅದಕ್ಕೆ ನಾವು ಹೈಕೋರ್ಟ್ ಮೇಲೆ ಒತ್ತಡ ತರುತ್ತೇವೆ. ಮಠದ ಸಂಪ್ರದಾಯಂತೆ ನಡೆದುಕೊಳ್ಳಬೇಕು. ಪಾಕ್​ನ ಮಲಾಲಗೆ ಬಸವ ಪ್ರಶಸ್ತಿ ಕೊಟ್ಟಿದ್ದಾರೆ. ಲಿಂಗಾಯತ ಮಠ ಅಂದರೆ ಶಿಕ್ಷಣ ಕೊಡುವುದು. ಸಿದ್ದಗಂಗಾ ಮಠದಂತೆ ಇರಬೇಕು. ಇದರ ಬಗ್ಗೆ ಎಲ್ಲಾ ತನಿಖೆಯಾಗಬೇಕು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ