AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಿಷನ್​ಗೆ ಕರೆಸಿ ಅತ್ಯಾಚಾರ ಆರೋಪ, ಕೊರಿಯೋಗ್ರಾಫರ್ ಪವನ್ ಅಂದರ್

ಬೆಂಗಳೂರು: ಸ್ಟಾರ್ ನಟನ ತಂಗಿ ಪಾತ್ರಕ್ಕೆ ಚಿತ್ರದ ಆಡಿಷನ್‌ ಇದೆ ಎಂದು ಕರೆಸಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನೃತ್ಯ ಸಂಯೋಜಕ ಪವನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಜನವರಿ 12 ರಂದು ಡ್ಯಾನ್ಸ್ ಮಾಸ್ಟರ್ ಪವನ್ ಯುವತಿಗೆ ಕರೆ ಮಾಡಿ ಚಿತ್ರವೊಂದರಲ್ಲಿ ತಂಗಿ ಪಾತ್ರಕ್ಕೆ ಆಡಿಷನ್ ಇದೆ ಬಾ ಎಂದು ಕರೆದಿದ್ದಾರೆ. ಸಂತ್ರಸ್ಥ ಯುವತಿ ನಾಗರಭಾವಿ ಬಳಿಯ ತನ್ನ ಡ್ಯಾನ್ಸ್ ಕ್ಲಾಸಿಗೆ ಬಂದಿದ್ದಾಳೆ. ನಂತರ ಪವನ್ ತನ್ನ ಗೆಳೆಯನೊಬ್ಬನಿಗೆ ಕರೆ […]

ಆಡಿಷನ್​ಗೆ ಕರೆಸಿ ಅತ್ಯಾಚಾರ ಆರೋಪ, ಕೊರಿಯೋಗ್ರಾಫರ್ ಪವನ್ ಅಂದರ್
ಸಾಧು ಶ್ರೀನಾಥ್​
|

Updated on:Jan 16, 2020 | 9:52 AM

Share

ಬೆಂಗಳೂರು: ಸ್ಟಾರ್ ನಟನ ತಂಗಿ ಪಾತ್ರಕ್ಕೆ ಚಿತ್ರದ ಆಡಿಷನ್‌ ಇದೆ ಎಂದು ಕರೆಸಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ನೃತ್ಯ ಸಂಯೋಜಕ ಪವನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳೆದ ಜನವರಿ 12 ರಂದು ಡ್ಯಾನ್ಸ್ ಮಾಸ್ಟರ್ ಪವನ್ ಯುವತಿಗೆ ಕರೆ ಮಾಡಿ ಚಿತ್ರವೊಂದರಲ್ಲಿ ತಂಗಿ ಪಾತ್ರಕ್ಕೆ ಆಡಿಷನ್ ಇದೆ ಬಾ ಎಂದು ಕರೆದಿದ್ದಾರೆ. ಸಂತ್ರಸ್ಥ ಯುವತಿ ನಾಗರಭಾವಿ ಬಳಿಯ ತನ್ನ ಡ್ಯಾನ್ಸ್ ಕ್ಲಾಸಿಗೆ ಬಂದಿದ್ದಾಳೆ. ನಂತರ ಪವನ್ ತನ್ನ ಗೆಳೆಯನೊಬ್ಬನಿಗೆ ಕರೆ ಮಾಡಿ ನಿರ್ದೇಶಕನ ಸೋಗಿನಲ್ಲಿ ಯುವತಿಯ ಜೊತೆ ಮಾತನಾಡಿಸಿದ್ದಾನೆ. ಮಾತು ಮುಗಿದ ಬಳಿಕ ನೀನು ಸುದೀಪ್ ಸರ್ ನೆಕ್ಸ್ಟ್ ಮೂವಿಯ ತಂಗಿ ಪಾತ್ರಕ್ಕೆ ನೀನು ಸೆಲೆಕ್ಟ್ ಆಗಿದ್ದೀಯಾ ಎಂದು ನಂಬಿಸಿದ್ದಾನೆ.

ನಂತರ ಡ್ಯಾನ್ಸ್ ಕ್ಲಾಸ್​ನಲ್ಲಿ ಯುವತಿಗೆ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನ ತೋರಿಸಿದ್ದಾನೆ. ಬಳಿಕ ಪ್ರಜ್ಞೆ ತಪ್ಪುವ ಔಷಧ ಬೆರೆಸಿದ ನೀರು ಕುಡಿಸಿದ್ದಾನೆ. ಯುವತಿ ಪ್ರಜ್ಞೆತಪ್ಪಿದಾಗ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ಥ ಯುವತಿ ಪೋಷಕರು ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಯುವತಿಯನ್ನ ನಂಬಿಸಿ ದೈಹಿಕವಾಗಿ ಹಿಂಸಿಸಿದ ಕನ್ನಡದ ಡ್ಯಾನ್ಸ್ ಮಾಸ್ಟರ್ ಅಂದರ್ ಆಗಿದ್ದಾನೆ. ಬಂಧಿತ ಡ್ಯಾನ್ಸ್ ಮಾಸ್ಟರ್ ಕನ್ನಡದ ಖ್ಯಾತ ರಿಯಾಲಿಟಿ ಶೋ ಗಳಿಗೆ ಕೊರಿಯೋಗ್ರಾಫರ್ ಆಗಿದ್ದ. ಕನ್ನಡದ ಡ್ಯಾನ್ಸ್ ಡ್ಯಾನ್ಸ್, ತಕಧಿಮಿತ, ಕಿಕ್, ಡ್ಯಾನ್ಸಿಂಗ್ ಸ್ಟಾರ್ ಶೋಗಳಲ್ಲಿ ನೃತ್ಯಸಂಯೋಜಕನಾಗಿದ್ದ. ನಾಗರಭಾವಿ ಬಿಡಿಎ ಕಾಂಪ್ಲೇಕ್ಸ್ ಬಳಿ ಡ್ಯಾನ್ಸ್ ಕ್ಲಾಸ್ ಹೊಂದಿದ್ದ. ಸಂತ್ರಸ್ಥ ಯುವತಿ ಪವನ್ ಬಳಿ ಕಳೆದ ಮೂರು ವರ್ಷಗಳಿಂದ ಡ್ಯಾನ್ಸ್ ಕಲಿಯುತ್ತಿದ್ದಳು.

Published On - 7:54 am, Thu, 16 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್