ನಗರದೆಲ್ಲೆಡೆ ಮೇರಿ ಕ್ರಿಸ್ಮಸ್ ಹಬ್ಬದ ಸಂಭ್ರಮ

ಬೆಂಗಳೂರು: ದೇಶದಾದ್ಯಂತ ಇಂದು ಕ್ರೈಸ್ತರ ಪವಿತ್ರ ಹಬ್ಬ ಮೇರಿ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಕಲರ್ ಫುಲ್ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯಿಂದಲೇ ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಪಟಾಕಿ ಸಿಡಿಸುವ ಮೂಲಕ ಹಬ್ಬವನ್ನು ಬರಮಾಡಿಕೊಂಡಿದ್ದಾರೆ. ನಗರ ಹಬ್ಬದ ವಾತಾವರಣದಲ್ಲಿ ಮಿಂದೆದ್ದಿದೆ. ನಗರದ ಚರ್ಚ್, ಕ್ರೈಸ್ತ ಬಾಂಧವರ ಮನೆಗಳು ಕಲರ್ ಕಲರ್ ಲೈಟಿಂಗ್ಸ್​ಗಳಿಂದ ಜಗಮಗಿಸುತ್ತಿವೆ. ಶಿವಾಜಿನಗರದಲ್ಲಿರುವ ಸಂತ ಮೇರಿ ಬೆಸಿಲಿಕಾ ಚರ್ಚ್​ನಲ್ಲಿಂದು ಕ್ರೈಸ್ತ ಸಮುದಾಯದಿಂದ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಲಾಗುತ್ತಿದೆ. ಚರ್ಚ್‌ಗೆ ವಿಶೇಷ ವಿದ್ಯುತ್ ಅಲಂಕಾರ […]

ನಗರದೆಲ್ಲೆಡೆ ಮೇರಿ ಕ್ರಿಸ್ಮಸ್ ಹಬ್ಬದ ಸಂಭ್ರಮ
ಸಾಧು ಶ್ರೀನಾಥ್​

Updated on: Dec 25, 2019 | 11:10 AM

ಬೆಂಗಳೂರು: ದೇಶದಾದ್ಯಂತ ಇಂದು ಕ್ರೈಸ್ತರ ಪವಿತ್ರ ಹಬ್ಬ ಮೇರಿ ಕ್ರಿಸ್ಮಸ್ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಕಲರ್ ಫುಲ್ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯಿಂದಲೇ ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಪಟಾಕಿ ಸಿಡಿಸುವ ಮೂಲಕ ಹಬ್ಬವನ್ನು ಬರಮಾಡಿಕೊಂಡಿದ್ದಾರೆ. ನಗರ ಹಬ್ಬದ ವಾತಾವರಣದಲ್ಲಿ ಮಿಂದೆದ್ದಿದೆ. ನಗರದ ಚರ್ಚ್, ಕ್ರೈಸ್ತ ಬಾಂಧವರ ಮನೆಗಳು ಕಲರ್ ಕಲರ್ ಲೈಟಿಂಗ್ಸ್​ಗಳಿಂದ ಜಗಮಗಿಸುತ್ತಿವೆ.

ಶಿವಾಜಿನಗರದಲ್ಲಿರುವ ಸಂತ ಮೇರಿ ಬೆಸಿಲಿಕಾ ಚರ್ಚ್​ನಲ್ಲಿಂದು ಕ್ರೈಸ್ತ ಸಮುದಾಯದಿಂದ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಲಾಗುತ್ತಿದೆ. ಚರ್ಚ್‌ಗೆ ವಿಶೇಷ ವಿದ್ಯುತ್ ಅಲಂಕಾರ ಮಾಡಿದ್ದು, ಆವರಣದಲ್ಲಿ ಏಸುಕ್ರಿಸ್ತನ ಜೀವನ ಸಂದೇಶ ಸಾರುವ ಗೊಂಬೆಗಳನ್ನ ಅನಾವರಣ ಮಾಡಿದ್ದಾರೆ. ಕ್ರೈಸ್ತ ಬಾಂಧವರು ಚರ್ಚ್​ಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಂತ ಮೇರಿ ಬೆಸಿಲಿಕಾ ಚರ್ಚ್​ನಲ್ಲಿ ಇಂಗ್ಲೀಷ್, ತಮಿಳು, ಕನ್ನಡ, ತಮಿಳು ನಾಲ್ಕು ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.



Published On - 8:49 am, Wed, 25 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us