AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Purushottama Kanagal Death: ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ

Kannada Film Industry : ಪುರುಷೋತ್ತಮ ಕಣಗಾಲ್ ಅವರು ಅಮೆರಿಕದಲ್ಲಿ ನಿಧನ ಹೊಂದಿದ್ಧಾರೆ. ಜುಲೈ 3ಕ್ಕೆ ಭಾರತಕ್ಕೆ ಬಂದು, ರಾಜ್ಯಪ್ರಶಸ್ತಿ ಪಡೆದ ಅವರ ಸಿನೆಮಾ ‘ಮಹಾಕಾವ್ಯ’ವನ್ನು ಕಾಲೇಜು ವಿದ್ಯಾರ್ಥಿಗಳಿಗೆ ತೋರಿಸುವ ಕನಸು ಅವರಿಗಿತ್ತು.

Purushottama Kanagal Death: ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ
ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jun 09, 2022 | 1:06 PM

Purushottama Kanagal : ಖ್ಯಾತ ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ (Purushottama Kanagal)  ನಿನ್ನೆ ಅಮೆರಿಕದಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ 70 ವರ್ಷಗಳಾಗಿದ್ದವು. ಡಲ್ಲಾಸ್​ನಲ್ಲಿರುವ ಮಗಳ ಮನೆಯಲ್ಲಿ ವಾಸವಾಗಿದ್ದ ಅವರು ಮಗ, ಮಗಳನ್ನು ಅಗಲಿದ್ದಾರೆ. ಕಣಗಾಲ್​ ಪ್ರಭಾಕರ ಶಾಸ್ತ್ರಿಗಳ ಮಗನಾಗಿದ್ದ ಇವರು ಬೆಂಗಳೂರಿನಲ್ಲಿಯೇ ಹುಟ್ಟಿ, ವಿಜಯಾ ಕಾಲೇಜಿನಲ್ಲಿ ಬಿಎಪದವಿ ಪಡೆದ ನಂತರ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದರು. ಕರ್ನಾಟಕ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸಿ ಡಿ.ಎಂ.ಜಿ. ಆಗಿ ನಿವೃತ್ತರಾಗಿದ್ದರು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್​ ಅವರ ಅಣ್ಣನ ಮಗ ಇವರು. ಅಪ್ಪ, ಚಿಕ್ಕಪ್ಪನಂತೆ ಸಿನೆಮಾಲೋಕದತ್ತ ಒಲವು ಬೆಳೆಸಿಕೊಂಡಿದ್ದರು. ಕಿರುಚಿತ್ರ, ಸಾಕ್ಷ್ಯಚಿತ್ರ ಸೇರಿದಂತೆ ಬರೆವಣಿಗೆಯ ಮೂಲಕ ಕಲಾಜಗತ್ತಿಗೆ ಸುಪರಿಚಿತರಾಗಿದ್ದರು. ಸಾಕಷ್ಟು ಚಿತ್ರಗೀತೆಗಳನ್ನು ರಚಿಸಿದ್ದರು. ಕಣಗಾಲ್ ನೃತ್ಯಾಲಯ, ಪುಟ್ಟಣ್ಣ ಕಣಗಾಲ್ ಟ್ರಸ್ಟ್ ನ ಮುಖ್ಯಸ್ಥರಾಗಿಯೂ ಇವರು ಕಾರ್ಯ ನಿರ್ವಹಿಸಿದ್ದರು.

ಪತ್ರಕರ್ತ ಎನ್. ಎಸ್. ಶ್ರೀಧರ ಮೂರ್ತಿ, ‘ನಿನ್ನೆಯಷ್ಟೇ ಇವರ ಮಗಳು ತಂದೆಯ ನಿಧನದ ಬಗ್ಗೆ ಸಂದೇಶ ಕಳಿಸಿದ್ದರು. ಬಹಳ ಬೇಸರವಾಯಿತು. ಮಹಾಕವಿ ಪಂಪ, ರನ್ನ, ಪೊನ್ನರ ಪರಿಚಯ ಮತ್ತು ಅವರ ಕಾವ್ಯದ ಭಾಗವನ್ನು ಆಧರಿಸಿದ ‘ಮಹಾಕಾವ್ಯ ’ ಚಿತ್ರಕ್ಕೆ ರಾಜ್ಯಪ್ರಶಸ್ತಿ ಬಂದಿತ್ತು. ಈ ಚಿತ್ರಕ್ಕಾಗಿ ಸಬ್​ ಟೈಟಲ್​ ಬರೆಯುವಾಗ ಅವರೊಂದಿಗೆ ಒಡನಾಡಿದ ಖುಷಿ ನನ್ನದು. ಆದರೆ ಆ ಚಿತ್ರ ಎಲ್ಲರನ್ನೂ ತಲುಪಲಿಲ್ಲ ಎಂಬ ಕೊರಗು ಅವರಿಗಿತ್ತು. ಇದನ್ನು ಕಾಲೇಜುಗಳ ಮೂಲಕ ತಲುಪಿಸೋಣ ಎಂದು ಪರಸ್ಪರ ಮಾತನಾಡಿಕೊಂಡಿದ್ದೆವು. ಜುಲೈ 3ಕ್ಕೆ ಅವರು ಭಾರತಕ್ಕೆ ಬರಬೇಕಿತ್ತು. ಇದಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡಿದ್ದೆವು. ಈಗ ಎಲ್ಲ ಅರೆಬರೆ. ಈ ವಿಶಿಷ್ಟ ನೆನಪುಗಳನ್ನು ಕಟ್ಟಿಹೋದ ಹಿರಿಯರಿಗೆ ನಮನಗಳು’ ಎಂದು ಸಂತಾಪ ಸೂಚಿಸಿದ್ಧಾರೆ.

ಕನ್ನಡ ಚಿತ್ರರಂಗ ಮೃತರ ಆತ್ಮಕ್ಕೆ ಕಂಬನಿ ಮಿಡಿದಿದೆ.

ಇದನ್ನೂ ಓದಿ
Image
Literature: ನೆರೆನಾಡ ನುಡಿಯೊಳಗಾಡಿ; ‘ಈಗಲೇ ರಿಕಾರ್ಡ್ ಹಚ್ಚಬಾರದು, ಇನ್ನೂ ಅಪ್ಪನ ಖತಮು ಮುಗಿದಿಲ್ಲ’
Image
Literature : ನೆರೆನಾಡ ನುಡಿಯೊಳಗಾಡಿ; ಬಿಎಂ ಶರ್ಮಾ ಅನುವಾದಿಸಿದ ರಾಹುಲ ಸಾಂಕೃತ್ಯಾಯನ ಕಥೆ ‘ನಿಶಾ‘
Image
Literature: ನೆರೆನಾಡ ನುಡಿಯೊಳಗಾಡಿ; ‘ಉಭಯ ಜೀವನ’ ಕೆಕೆ ಗಂಗಾಧರನ್ ಅನುವಾದಿಸಿದ ಮಲಯಾಳ ಕಥೆ
Image
Literature: ನೆರೆನಾಡ ನುಡಿಯೊಳಗಾಡಿ; ಪಾವಣ್ಣನ್ ಚಿಂತಾಮಣಿ ಕೊಡ್ಲೆಕೆರೆ ಅನುವಾದಿಸಿದ ಬಿ ಜಯಮೋಹನ್ ಕಥೆ ‘ವಿಷಸರ್ಪ’

ಇದನ್ನೂ ಓದಿ : ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ

Published On - 12:50 pm, Thu, 9 June 22

ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್