ಜಿಲ್ಲಾಧಿಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ, ಏಕೆ?

ಬೆಳಗಾವಿ: ಕರ್ತವ್ಯನಿರತ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಜಿಲ್ಲಾಧಿಕಾರಿ ಎಸ್‌ಬಿ ಬೊಮ್ಮನಹಳ್ಳಿ ನಿವಾಸದಲ್ಲಿ ನಡೆದಿದೆ. ಸಿಟಿ ರಿಜರ್ವ ಪೊಲೀಸ್ ಪೇದೆ ಪ್ರಕಾಶ್(30) ಭದ್ರತಾ ಸಿಬ್ಬಂದಿ ಕೊಠಡಿಯಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದ ಒತ್ತಡ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾಸ್ಥಳದಲ್ಲೇ ತಾಯಿ ಆಕ್ರಂದನ: ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೇದೆ ಪ್ರಕಾಶ್ […]

ಜಿಲ್ಲಾಧಿಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ, ಏಕೆ?

Updated on: May 06, 2020 | 9:05 AM

ಬೆಳಗಾವಿ: ಕರ್ತವ್ಯನಿರತ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಜಿಲ್ಲಾಧಿಕಾರಿ ಎಸ್‌ಬಿ ಬೊಮ್ಮನಹಳ್ಳಿ ನಿವಾಸದಲ್ಲಿ ನಡೆದಿದೆ. ಸಿಟಿ ರಿಜರ್ವ ಪೊಲೀಸ್ ಪೇದೆ ಪ್ರಕಾಶ್(30) ಭದ್ರತಾ ಸಿಬ್ಬಂದಿ ಕೊಠಡಿಯಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲಸದ ಒತ್ತಡ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನಾಸ್ಥಳದಲ್ಲೇ ತಾಯಿ ಆಕ್ರಂದನ:
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೇದೆ ಪ್ರಕಾಶ್ ತಾಯಿ ಮಗನನ್ನು ನೆನೆದು ಆಕ್ರಂದಿಸ್ತಿದ್ದಾರೆ. ಎಂತ ತಪ್ಪು ಮಾಡಿದೆ ಮಗನೇ ಎಂದು ಅಳುತ್ತಿದ್ದಾರೆ. ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಎರಡು ಮಕ್ಕಳಿರುವ ಪೇದೆ ಪ್ರಕಾಶ್ ಮನೆಗೆ ಹೋಗದೆ ಎರಡು ತಿಂಗಳಾಗಿತ್ತು.

ನಿರಂತರವಾದ ಕೊರೊನಾ ಡ್ಯೂಟಿಯಿಂದ ಮನೆಗೆ ಹೋಗಿರಲಿಲ್ಲ. ಕೆಲಸದ ಒತ್ತಡದಿಂದಲೇ ಪೇದೆ ಆತ್ಮಹತ್ಯೆಗೆ ಶರಣಾದ್ರ ಎಂಬ ಅನುಮಾನ ಹೆಚ್ಚಾಗಿದೆ. ಎಸ್‌ಎಲ್‌ಆರ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಪೇದೆ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Published On - 9:01 am, Wed, 6 May 20