AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಖಾತೆ ಬದಲಾವಣೆಗೆ ಸಿಎಂ ನಿರ್ಧಾರ; ವೈದ್ಯಕೀಯ ಶಿಕ್ಷಣ ಖಾತೆ ಸುಧಾಕರ್​ ಹೆಗಲಿಗೆ?..ಆನಂದ್ ಸಿಂಗ್ ಮುನಿಸು !

ಈ ಬಗ್ಗೆ ನನಗೆ ಮಾಹಿತಿ ಇಲ್ಲವೆಂದು ಸಚಿವ ಮಾಧುಸ್ವಾಮಿ ಹೇಳಿದ್ದರೆ, ಇನ್ನೊಂದೆಡೆ ಆನಂದ್ ಸಿಂಗ್​, ನಾನು ಸಿಎಂ ಭೇಟಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದೂ ಹೇಳಿಕೆ ನೀಡಿದ್ದಾರೆ.

ಮತ್ತೆ ಖಾತೆ ಬದಲಾವಣೆಗೆ ಸಿಎಂ ನಿರ್ಧಾರ; ವೈದ್ಯಕೀಯ ಶಿಕ್ಷಣ ಖಾತೆ ಸುಧಾಕರ್​ ಹೆಗಲಿಗೆ?..ಆನಂದ್ ಸಿಂಗ್ ಮುನಿಸು !
ಸಿಎಂ ಯಡಿಯೂರಪ್ಪ (ಫೈಲ್​ ಫೋಟೋ )
Lakshmi Hegde
|

Updated on:Jan 25, 2021 | 11:46 AM

Share

ಬೆಂಗಳೂರು: ರಾಜ್ಯದಲ್ಲಿ ಖಾತೆ ಹಂಚಿಕೆ ಮುಗಿಯುತ್ತಿಲ್ಲ. ಸಚಿವರ ಮುನಿಸು ಪರಿಹಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ​ ಸರ್ಕಸ್​ ಮುಂದುವರಿದಿದೆ. ಈಗ ಮತ್ತೆ ಬಿಎಸ್​ವೈ ಖಾತೆ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಚಿವ ಜೆ.ಸಿ.ಮಾಧುಸ್ವಾಮಿಗೆ ನೀಡಲಾಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ಮತ್ತೆ ಸಚಿವ ಸುಧಾಕರ್​ಗೇ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಮಾಧುಸ್ವಾಮಿ ಬಳಿಯಿದ್ದ ಹಜ್​, ವಕ್ಫ್​ ಖಾತೆಯನ್ನೂ ವಾಪಸ್​ ಪಡೆಯಲು ನಿರ್ಧರಿಸಿದ್ದಲ್ಲದೆ, ಸಚಿವ ಆನಂದ್​ಸಿಂಗ್​ರಿಂದ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಹಿಂಪಡೆಯುವ ಬಗ್ಗೆ ಯೋಚಿಸಿದ್ದಾರೆ. ಹಾಗೇ ಆನಂದ್​ ಸಿಂಗ್​ಗೆ ಹಜ್, ವಕ್ಫ್​ ಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಜವಾಬ್ದಾರಿ ನೀಡಲು ನಿರ್ಧರಿಸಿದ್ದಾಗಿ ಮೂಲಗಳು ತಿಳಿಸಿವೆ. ಈ ಬಗ್ಗೆ ಸಂಜೆ ಅಧಿಕೃತವಾಗಿ ಆದೇಶ ಹೊರಬೀಳಲಿದೆ.

ಇನ್ನು ಈ ಬಗ್ಗೆ ನನಗೆ ಮಾಹಿತಿ ಇಲ್ಲವೆಂದು ಸಚಿವ ಮಾಧುಸ್ವಾಮಿ ಹೇಳಿದ್ದರೆ, ಇನ್ನೊಂದೆಡೆ ಆನಂದ್ ಸಿಂಗ್​, ನಾನು ಸಿಎಂ ಭೇಟಿ ಮಾಡುತ್ತೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದೂ ಆಪ್ತರ ಬಳಿ ಹೇಳಿಕೊಂಡಿದ್ದಾಗಿ ಮಾಹಿತಿ ಸಿಕ್ಕಿದೆ.

ಕೊನೆಗೂ ರೈತರ ಹಠಕ್ಕೆ ಮಣಿದ ದೆಹಲಿ ಪೊಲೀಸರು.. ‘ಕಿಸಾನ್ ಗಣತಂತ್ರ’ ಪರೇಡ್​ಗೆ ಅನುಮತಿ

Published On - 11:33 am, Mon, 25 January 21

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ