AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ ಸೇರಿಸಲು ಪ್ಲ್ಯಾನ್, ಸಚಿವ ಸಂಪುಟ ಸಭೆಯಲ್ಲಿಂದು ತೀರ್ಮಾನ..

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿದ್ಧ ಸಿಎಂ ಯಡಿಯೂರಪ್ಪ ಈಗ ಮತ್ತೊಂದು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ.‌ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರಿಸಲು ಶಿಫಾರಸು ಮಾಡುವ ತೀರ್ಮಾನ ಹೊರಬೀಳಲಿದೆ.

ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ ಸೇರಿಸಲು ಪ್ಲ್ಯಾನ್, ಸಚಿವ ಸಂಪುಟ ಸಭೆಯಲ್ಲಿಂದು ತೀರ್ಮಾನ..
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
|

Updated on:Nov 27, 2020 | 7:33 AM

Share

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿದ್ಧ ಸಿಎಂ ಯಡಿಯೂರಪ್ಪ ಈಗ ಮತ್ತೊಂದು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ.‌ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರಿಸಲು ಶಿಫಾರಸು ಮಾಡುವ ತೀರ್ಮಾನ ಹೊರಬೀಳಲಿದೆ. ಇದರ ಜೊತೆಗೆ ಸಿಎಂ ಇಂದು ಬಿಜೆಪಿ ಸಂಸದರ ಸಭೆಯನ್ನೂ ನಡೆಸಲಿದ್ದಾರೆ.

ಲಿಂಗಾಯತ ಸಮಾಜಕ್ಕೆ ಶೇಕಡ16ರಷ್ಟು ಮೀಸಲಾತಿ ನೀಡಿ: ಇತ್ತ ವೀರಶೈವ ಲಿಂಗಾಯತ ಸಮಾಜಕ್ಕೆ ಶೇಕಡ16ರಷ್ಟು ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸ್ವಾಮೀಜಿ ಆಗ್ರಹಿಸಿದ್ದಾರೆ. ಅಲ್ಲದೆ ಎಲ್ಲಾ ಲಿಂಗಾಯತ ಮುಖಂಡರು ಇದೇ ಬೇಡಿಕೆಯನ್ನು ಸಿಎಂ ಮುಂದಿಟ್ಟಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಕೇಂದ್ರಕ್ಕೆ ಶಿಫಾರಸು? ಕಳೆದ ವಾರವಷ್ಟೇ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂಪಾಯಿ ಅನುದಾನ ಮೀಸಲಿರಿಸಿದ್ದ ಸಿಎಂ ಈಗ ಮತ್ತೊಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಬಹು ದಿನಗಳ ಬೇಡಿಕೆಯಾದ ಕೇಂದ್ರದ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಲು ಶಿಫಾರಸು ಮಾಡಲು ಚಿಂತಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ವೀರಶೈವ ಲಿಂಗಾಯತಕ್ಕೆ ನೇರ ಮೀಸಲಾತಿ ನೀಡುವ ಪ್ರಯತ್ನ ಮಾಡಿದ್ದರು. ಆದರೆ ಸಿದ್ದರಾಮಯ್ಯರ ಪ್ರಯತ್ನವನ್ನು ಕೇಂದ್ರವು ಎರಡು ಬಾರಿ ನಿರಾಕರಿಸಿತ್ತು.

ಸದ್ಯ ಈಗ ಕೇಂದ್ರದ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಲು ಶಿಫಾರಸು ಮಾಡವ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಹೊರಬೀಳೋ ಸಾಧ್ಯತೆಯಿದೆ. ಇದಕ್ಕೂ ಮುನ್ನ ನಿನ್ನೆ ಲಿಂಗಾಯತ ಸಚಿವರನ್ನು ತಮ್ಮ ಅಧಿಕೃತ ನಿವಾಸಕ್ಕೆ ಕರೆಸಿಕೊಂಡಿದ್ದ ಸಿಎಂ ಸಾಧಕ ಬಾಧಕಗಳ ಚರ್ಚೆ ನಡೆಸಿದ್ದಾರೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಖುದ್ದು ಸಿಎಂ ಶಿಫಾರಸು ವಿಚಾರವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ ಎನ್ನಲಾಗ್ತಿದೆ.

ಬಿಜೆಪಿ ಸಂಸದರ ಸಭೆ ಕರೆದ ಸಿಎಂ ಬಿಎಸ್‌ವೈ: ಇನ್ನು ಇಂದು‌ ಸಿಎಂ ಯಡಿಯೂರಪ್ಪ ಬಿಜೆಪಿ ಸಂಸದರ ಸಭೆ ನಡೆಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ‌ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ಕುರಿತಾಗಿ ಸಂಸದರ ಜೊತೆ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಆದರೆ ಇಂದಿನ ಸಭೆಯ ಹಿಂದೆ ಯಡಿಯೂರಪ್ಪ ಸಂಸದರನ್ನು ತಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳುವ ರಹಸ್ಯ ಕಾರ್ಯಸೂಚಿ‌ ಅಡಗಿದೆ. ಆದರೆ ಇಂದಿನ ಸಭೆಯಲ್ಲಿ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಬಿಜೆಪಿ ಗ್ರಾಮ ಸ್ವರಾಜ್ಯ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ ಭಾಗವಹಿಸುತ್ತಿಲ್ಲ.

ಸಂಸದ ಮತ್ತು ಕೇಂದ್ರ ಸಚಿವ ಡಿ.ವಿ. ಸದಾನಂದ ‌ಗೌಡ ಕೋವಿಡ್ ಸೋಂಕಿಗೊಳಗಾಗಿರುವ ಕಾರಣ ಪಾಲ್ಗೊಳ್ಳುತ್ತಿಲ್ಲ. ಸಂಸದ ಮತ್ತು ಬಿಜೆಪಿ ಯುವ ಮೋರ್ಛಾ ಅಧ್ಯಕ್ಷ ತೇಜಸ್ವಿ ಸೂರ್ಯ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಚೇರಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ ಭಾಗವಹಿಸುತ್ತಿಲ್ಲ.

ಒಂದೆಡೆ ಸಚಿವರು ದೆಹಲಿಗೆ ಹಾರಿದ್ರೆ, ಇತ್ತು ಸಿಎಂ ಬಿಎಸ್​ವೈ ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ಒಟ್ನಲ್ಲಿ ಸಿಎಂ ಯಡಿಯೂರಪ್ಪ ತಮ್ಮನ್ನು ‌ತಾವು ಗಟ್ಟಿಪಡಿಸಿಕೊಳ್ಳುವ ಯತ್ನವನ್ನು ಸತತವಾಗಿ ಮುಂದುವರಿಸುತ್ತಲೇ ಇದ್ದಾರೆ.‌ ಅದಕ್ಕಾಗಿ‌ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕೇಂದ್ರ ಒಬಿಸಿ ಪಟ್ಟಿಗೆ ಶಿಫಾರಸು, ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಎಲ್ಲವೂ ನಿರಂತರವಾಗಿ ಸಾಗಿದೆ.

ಇದನ್ನೂ ಓದಿ: ಯಡಿಯೂರಪ್ಪ ಮುಂದಿನ ನಡೆ: ವೀರಶೈವ ಲಿಂಗಾಯತರಿಗೆ ಶೇ 16 ಮೀಸಲಾತಿ ಮತ್ತು ಒಕ್ಕಲಿಗ ಅಭಿವೃದ್ಧಿ ನಿಗಮ?

Published On - 7:31 am, Fri, 27 November 20

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!