AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಸೈನ್ಯವನ್ನು ಕಟ್ಟಿದ ಅಪ್ರತಿಮ ನಾಯಕ; ಸಿಎಂ ಬೊಮ್ಮಾಯಿ ಮಾತು

ಸ್ವಾತಂತ್ರ್ಯಕ್ಕೆ ದೊಡ್ಡ ಭದ್ರಬುನಾದಿಯನ್ನು ಹಾಕಿದ್ದರು. ನೇತಾಜಿ ಸುಭಾಷ್ ಚಂದ್ರ ಬೋಸ್ರ ದೇಶಭಕ್ತಿ, ದೇಶಕ್ಕಾಗಿ ತ್ಯಾಗ ಮಾಡುವ ಅವರ ಧ್ಯೇಯದ ಬಗ್ಗೆ ಹೇಳಬೇಕು. ಇಡೀ ವರ್ಷ ಕಾಲೇಜುಗಳಲ್ಲಿ ಚರ್ಚೆ, ಎಕ್ಸಿಬಿಷನ್ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಸೈನ್ಯವನ್ನು ಕಟ್ಟಿದ ಅಪ್ರತಿಮ ನಾಯಕ; ಸಿಎಂ ಬೊಮ್ಮಾಯಿ ಮಾತು
ವಿಧಾನಸೌಧದ ಆವರಣದಲ್ಲಿರುವ ನೇತಾಜಿಯವರ ಪ್ರತಿಮೆಗೆ ಸಿಎಂ ಬೊಮ್ಮಾಯಿ ಪುಷ್ಪನಮನ ಸಲ್ಲಿಸಿದರು
TV9 Web
| Edited By: sandhya thejappa|

Updated on:Jan 23, 2022 | 11:40 AM

Share

ಬೆಂಗಳೂರು: ಇಂದು (ಜ.23) ನೇತಾಜಿ ಸುಭಾಷ್ ಚಂದ್ರ ಬೋಸ್​ರ(Subhas Chandra Bose) 125ನೇ ಜನ್ಮದಿನ ಹಿನ್ನೆಲೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿಧಾನಸೌಧದ ಆವರಣದಲ್ಲಿರುವ ನೇತಾಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಿಎಂ, ಭಾರತಕ್ಕೆ ಇಂದು ಹೆಮ್ಮೆಯ ದಿನ. ಬ್ರಿಟಿಷರ ವಿರುದ್ಧ ಸೈನ್ಯವನ್ನು ಕಟ್ಟಿದ ಅಪ್ರತಿಮ ನಾಯಕ. ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿಯವರ ಪಾತ್ರ ದೊಡ್ಡದು. ಆಜಾದ್ ಹಿಂದ್ ಫೌಜ್ನಲ್ಲಿ ಯುವಕರನ್ನ ತೊಡಗಿಸಿಕೊಂಡ್ರು. ಸುಮಾರು 60 ಸಾವಿರ ಯುವಕರನ್ನು ತೊಡಗಿಸಿಕೊಂಡಿದ್ದರು ಅಂತ ನುಡಿದರು.

ಮುಂದುವರಿದು ಮಾತನಾಡಿದ ಸಿಎಂ ಬೊಮ್ಮಾಯಿ, ಸ್ವಾತಂತ್ರ್ಯಕ್ಕೆ ದೊಡ್ಡ ಭದ್ರಬುನಾದಿಯನ್ನು ಹಾಕಿದ್ದರು. ನೇತಾಜಿ ಸುಭಾಷ್ ಚಂದ್ರ ಬೋಸ್ರ ದೇಶಭಕ್ತಿ, ದೇಶಕ್ಕಾಗಿ ತ್ಯಾಗ ಮಾಡುವ ಅವರ ಧ್ಯೇಯದ ಬಗ್ಗೆ ಹೇಳಬೇಕು. ಇಡೀ ವರ್ಷ ಕಾಲೇಜುಗಳಲ್ಲಿ ಚರ್ಚೆ, ಎಕ್ಸಿಬಿಷನ್ ಮಾಡುತ್ತೇವೆ. ನೇತಾಜಿಯವರ ಕೃತಿಗಳನ್ನ ಕನ್ನಡದಲ್ಲಿ ಮುದ್ರಣ ಮಾಡುತ್ತೇವೆ. ವಿಧಾನಸೌಧ ಆವರಣದ ಸೂಕ್ತ ಸ್ಥಳವನ್ನು ನೋಡಿ ನೇತಾಜಿ ಪ್ರತಿಮೆ ಇಡುತ್ತೇವೆ. ಮುಂದಿನ ಹುಟ್ಟುಹಬ್ಬದ ವೇಳೆಗೆ ಪ್ರತಿಮೆ ಸ್ಥಳಾಂತರ ಮಾಡುತ್ತೇವೆ ಅಂತ ತಿಳಿಸಿದರು.

ನ್ಯಾಯಮೂರ್ತಿ ಮಂಜುನಾಥ್ ನಿಧನಕ್ಕೆ ಬೊಮ್ಮಾಯಿ ಸಂತಾಪ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರಾಗಿದ್ದ ಕೆ ಎಲ್ ಮಂಜುನಾಥ್ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ

ಭಾರತದ ಅತ್ಯಂತ ಎತ್ತರ ವ್ಯಕ್ತಿ ಧರ್ಮೇಂದ್ರ ಪ್ರತಾಪ್ ಸಿಂಗ್​ ಸಮಾಜವಾದಿ ಪಕ್ಷ ಸೇರ್ಪಡೆ; ಎಸ್​ಪಿಗೆ ಬಲಬಂತು ಎಂದು ಉತ್ತರಪ್ರದೇಶ ಅಧ್ಯಕ್ಷ

ಹರ್ಭಜನ್ ದಂಪತಿಗೆ ಕೊವಿಡ್; ಎರಡು ವರ್ಷದಿಂದ ವೈರಸ್ ಕೈಗೆ ಸಿಗದೇ ಓಡಾಡಿಕೊಂಡಿದ್ದೆವು ಎಂದು ತಮಾಷೆ ಮಾಡಿದ ಗೀತಾ

Published On - 11:34 am, Sun, 23 January 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ