AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರಕ್ಕೆ ಶನಿವಾರ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ, ಈಶಾ ಫೌಂಡೇಷನ್ ನಾಗವಿಗ್ರಹ ಪ್ರತಿಷ್ಠಾಪನೆ

ನಾಗವಿಗ್ರಹ ಉದ್ಘಾಟನೆಗೆ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ, ಕೆಲ ಸಚಿವರುಗಳು, ದೇಶ ವಿದೇಶದಲ್ಲಿರುವ ಜಗ್ಗಿ ವಾಸುದೇವನ್ ರವರ ಅನುಯಾಯಿಗಳು ಆಗಮಿಸುತ್ತಿರುವ ಕಾರಣ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅಲರ್ಟ್ ಆಗಿದೆ.

ಚಿಕ್ಕಬಳ್ಳಾಪುರಕ್ಕೆ ಶನಿವಾರ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ, ಈಶಾ ಫೌಂಡೇಷನ್ ನಾಗವಿಗ್ರಹ ಪ್ರತಿಷ್ಠಾಪನೆ
ಚಿಕ್ಕಬಳ್ಳಾಪುರಕ್ಕೆ ಶನಿವಾರ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ, ಈಶಾ ಫೌಂಡೇಷನ್ ನಾಗವಿಗ್ರಹ ಪ್ರತಿಷ್ಠಾಪನೆ
TV9 Web
| Edited By: ಸಾಧು ಶ್ರೀನಾಥ್​|

Updated on: Oct 07, 2022 | 7:23 PM

Share

ತಮಿಳುನಾಡಿನ ಕೊಯಮತ್ತೂರು ಬಳಿ ಈಶಾ ಫೌಂಡೇಷನ್ ನ ಬೃಹತ್ ಆಶ್ರಮ ನಿರ್ಮಾಣ ಮಾಡಿ, ಆಶ್ರಮದಲ್ಲಿ ಆದಿಯೋಗಿ ಪರಶಿವನ ಮೂರ್ತಿ ಪ್ರತಿಮೆ ನಿರ್ಮಾಣ ಮಾಡಿದಂತೆ.. ಚಿಕ್ಕಬಳ್ಳಾಪುರದ ಬಳಿಯೂ ಆಶ್ರಮ ನಿರ್ಮಾಣ ಮಾಡಿ 112 ಅಡಿಗಳ ಶಿವನಮೂರ್ತಿ ವಿಗ್ರಹ ನಿರ್ಮಾಣ ಮಾಡಲು ಅಡಿಗಲ್ಲು ಹಾಕಿರುವ ಈಶಾ ಫೌಂಡೇಷನ್ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ಯೋಗ ಗುರು ಜಗ್ಗಿ ವಾಸುದೇವನ್ (Sadhguru Jaggi Vasudev), ನಾಗ ವಿಗ್ರಹ ಪ್ರತಿಷ್ಠಾಪನೆ ಮಾಡಲಿದ್ದು, ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ನಿರ್ಮಾಣ ಹಂತದ ಆಶ್ರಮಕ್ಕೆ ಭೇಟಿ ನೀಡಿ ನಾಳೆ ಅಕ್ಟೋಬರ್ 8ರಂದು ಸಂಜೆ 6 ಗಂಟೆಗೆ ನಾಗವಿಗ್ರಹ (Isha Foundation Naga Pratishtapana) ಉದ್ಘಾಟನೆ ಮಾಡಲಿದ್ದಾರೆ. ಈ ಕುರಿತು ಒಂದು ವರದಿ.

ಈಶಾ ಫೌಂಡೇಷನ್ ಸಂಸ್ಥಾಪಕ, ಆಧ್ಯಾತ್ಮಿಕ ಗುರು, ಯೋಗ ಗುರು ಜಗ್ಗಿ ವಾಸುದೇವನ್, ತಮಿಳುನಾಡಿನಂತೆ ತವರು ರಾಜ್ಯ ಕರ್ನಾಟಕದಲ್ಲೂ… ಬೃಹತ್ ಯೋಗ ಕೇಂದ್ರ ತೆರೆದು ಅದರಲ್ಲಿ 112 ಅಡಿಗಳ ಶಿವನ ವಿಗ್ರಹ ಪ್ರತಿಷ್ಠಾಪನೆಗೆ ಯೋಜನೆ ರೂಪಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಾಲಾರಿ ನರಸಿಂಹಸ್ವಾಮಿ ಕ್ಷೇತ್ರದ ಬಳಿ ಅಲವಗುರ್ಕಿ ಗ್ರಾಮದ ಸರ್ವೆ ನಂಬರ್ ನಲ್ಲಿ ಇನ್ನೂರು ಎಕರೆ ಖಾಸಗಿ ಭೂಮಿ ಖರೀದಿ ಮಾಡಿದ್ದು, ಆಶ್ರಮ ನಿರ್ಮಾಣ ಕಾಮಗಾರಿ ಜೋರಾಗಿ ಸಾಗಿದೆ.

ಮೊದಲ ಹೆಜ್ಜೆಯಾಗಿ ಅಕ್ಟೋಬರ್ 8 ಸಂಜೆ ಆರು ಗಂಟೆಗೆ ಸ್ವತಃ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಖಾತೆ ಸಚಿವ ಡಾ. ಕೆ. ಸುಧಾಕರ್ (Dr K Sudhakar) ಆಶ್ರಮಕ್ಕೆ ಆಗಮಿಸಿ, ಬೃಹತ್ ನಾಗವಿಗ್ರಹ ಉದ್ಘಾಟನೆ ಮಾಡಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ತಿಳಿಸಿದ್ದಾರೆ.

ನಾಗವಿಗ್ರಹ ಉದ್ಘಾಟನೆಗೆ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ, ಕೆಲ ಸಚಿವರುಗಳು, ದೇಶ ವಿದೇಶದಲ್ಲಿರುವ ಜಗ್ಗಿ ವಾಸುದೇವನ್ ರವರ ಅನುಯಾಯಿಗಳು ಆಗಮಿಸುತ್ತಿರುವ ಕಾರಣ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅಲರ್ಟ್ ಆಗಿದೆ. ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಎಸ್​ ಪಿ ಡಿ.ಎಲ್. ನಾಗೇಶ, ಎ.ಸಿ. ಡಾ. ಸಂತೋಷ ಕುಮಾರ್ ಸೇರಿದಂತೆ ಇತರೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿರ್ಮಾಣ ಹಂತದ ಆಶ್ರಮ ಕಾಮಗಾರಿ ಸ್ಥಳದಲ್ಲಿ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ದೇಶ ವಿದೇಶಗಳಿಂದ ಜಗ್ಗಿ ವಾಸುದೇವನ್ ರವರ ಅನುಯಾಯಿಗಳು ಆಗಮಿಸುವ ನಿರೀಕ್ಷೆಯಿದೆ. ಮತ್ತೊಂದೆಡೆ ನಿರ್ಮಾಣ ಹಂತದ ಆಶ್ರಮದಲ್ಲಿ 112 ಅಡಿಗಳ ಶಿವನ ವಿಗ್ರಹ ಕಾಮಗಾರಿ ನಡೆಯುತ್ತಿರುವ ಕಾರಣ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ -ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ