AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಮನೆಗೂ ತೆರಳಿ ತಲಾ 25 ಸಾವಿರ ರೂ. ಚೆಕ್ ಕೊಡ್ತೇವೆ -ಮಳೆ ಸಂತ್ರಸ್ತರಿಗೆ CM BSY ಭರವಸೆ

ಬೆಂಗಳೂರು: ಹೊಸಕೆರೆಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಇದೀಗತಾನೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಸಿಎಂ ಬಿಎಸ್‌ವೈಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು. ಮಳೆ ಹಾನಿಯ ಬಗ್ಗೆ ಆರ್.ಅಶೋಕ್ ಮತ್ತು ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು. ಜೊತೆಗೆ, ಮಳೆಯಿಂದ ಹಾನಿಯಾದ ಮನೆಗಳಿಗೂ ಸಿಎಂ BSY ಭೇಟಿ ನೀಡಿ ಸಂತ್ರಸ್ತರಿಂದಲೂ ಮಾಹಿತಿ ಪಡೆದರು. ರಾಜಕಾಲುವೆ ಒತ್ತುವರಿ  2-3 ದಿನಗಳಲ್ಲೇ ತೆರವುಗೊಳಿಸ್ತೇವೆ ಇತ್ತ ಪರಿಶೀಲನೆ ಬಳಿಕ ಮಾತನಾಡಿದ ಮುಖ್ಯಮಂತ್ರಿ  ಯಡಿಯೂರಪ್ಪ ಮನೆಮನೆಗೂ ತೆರಳಿ ತಲಾ 25 ಸಾವಿರ […]

ಮನೆಮನೆಗೂ ತೆರಳಿ ತಲಾ 25 ಸಾವಿರ ರೂ. ಚೆಕ್ ಕೊಡ್ತೇವೆ -ಮಳೆ ಸಂತ್ರಸ್ತರಿಗೆ CM BSY ಭರವಸೆ
KUSHAL V
| Edited By: |

Updated on: Oct 24, 2020 | 1:37 PM

Share

ಬೆಂಗಳೂರು: ಹೊಸಕೆರೆಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಇದೀಗತಾನೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಸಿಎಂ ಬಿಎಸ್‌ವೈಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು. ಮಳೆ ಹಾನಿಯ ಬಗ್ಗೆ ಆರ್.ಅಶೋಕ್ ಮತ್ತು ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು. ಜೊತೆಗೆ, ಮಳೆಯಿಂದ ಹಾನಿಯಾದ ಮನೆಗಳಿಗೂ ಸಿಎಂ BSY ಭೇಟಿ ನೀಡಿ ಸಂತ್ರಸ್ತರಿಂದಲೂ ಮಾಹಿತಿ ಪಡೆದರು.

ರಾಜಕಾಲುವೆ ಒತ್ತುವರಿ  2-3 ದಿನಗಳಲ್ಲೇ ತೆರವುಗೊಳಿಸ್ತೇವೆ ಇತ್ತ ಪರಿಶೀಲನೆ ಬಳಿಕ ಮಾತನಾಡಿದ ಮುಖ್ಯಮಂತ್ರಿ  ಯಡಿಯೂರಪ್ಪ ಮನೆಮನೆಗೂ ತೆರಳಿ ತಲಾ 25 ಸಾವಿರ ರೂಪಾಯಿ ಚೆಕ್ ನೀಡ್ತೇವೆ. ಮುಂದಿನ ದಿನಗಳಲ್ಲಿ ಹಾನಿಯಾಗದಂತೆ ಶಾಶ್ವತ ಪರಿಹಾರ ಕಲ್ಪಿಸಿಕೊಡುತ್ತೇವೆ ಎಂದು ಭರವಸೆ ಸಹ ನೀಡುತ್ತೇನೆ ಎಂದು ಹೇಳಿದರು.

ಶಾಶ್ವತ ಪರಿಹಾರ ಕಲ್ಪಿಸುವ ಸಂಬಂಧ ಸಚಿವ ಅಶೋಕ್ ಜೊತೆ ಚರ್ಚೆ ಮಾಡುತ್ತೇನೆ. ರಾಜಕಾಲುವೆ ಒತ್ತುವರಿಯನ್ನು 2-3 ದಿನಗಳಲ್ಲೇ ತೆರವುಗೊಳಿಸ್ತೇವೆ ಎಂದು ಸಂತ್ರಸ್ತರಿಗೆ ಆಶ್ವಾಸನೆ ನೀಡಿದರು.

ಈ ನಡುವೆ, ದತ್ತಾತ್ರೇಯ ದೇಗುಲ ಬಳಿ ಮನೆಗಳ ಪರಿಶೀಲಿಸದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕಾರು ತಡೆದ ಸ್ಥಳೀಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳೇ ಬಡವರ ಮನೆ ನೋಡಿ ಎಂದು ಜನರ ಕೂಗು ಸಹ ಹಾಕಿದರು. ಆಗ, ಸಿಎಂ ಯಡಿಯೂರಪ್ಪ ದತ್ತಾತ್ರೇಯ ದೇಗುಲದೊಳಗೆ ತೆರಳಿದರು. ನಂತರ, ಕುಮಾರಸ್ವಾಮಿ ಲೇಔಟ್​ನತ್ತ ಪರಿಶೀಲನೆಗೆ ತೆರಳಿದರು.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಘೋಷಣೆ ಮಾಡಲ್ಲ: ಜಾರಿಕೊಂಡ ಸಿಎಂ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ