Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ.. ಸರಳ ದಸರಾ ಜಂಬೂ ಸವಾರಿಗೆ ಸಿಎಂ ಚಾಲನೆ

ಮೈಸೂರು: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಎಂ ಬಿ.ಎಸ್​.ಯಡಿಯೂರಪ್ಪ ಚಿನ್ನದ ಅಂಬಾರಿಯಲ್ಲಿ ಸ್ಥಾಪಿತವಾದ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದರು. ಶುಭ ಕುಂಭ ಲಗ್ನದಲ್ಲಿ ಅಧಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕೊರೊನಾ ಹಿನ್ನೆಲೆ ಈ ಬಾರಿ ಜಂಬೂಸವಾರಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ರಾಜ ನಡಿಗೆ: ಐತಿಹಾಸಿಕ ಜಂಬೂಸವಾರಿಗಾಗಿ ಮೈಸೂರು ಅರಮನೆಯಲ್ಲಿ ಚಿನ್ನದ ಅಂಬಾರಿಯನ್ನು ಅಲಂಕಾರ ಮಾಡಲಾಯಿತು. ಅಂಬಾರಿ ಹೊರುವ ಕ್ಯಾಪ್ಟನ್ ಅಭಿಮನ್ಯುನನ್ನು ಬಣ್ಣಗಳಿಂದ […]

ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ.. ಸರಳ ದಸರಾ ಜಂಬೂ ಸವಾರಿಗೆ ಸಿಎಂ ಚಾಲನೆ
Follow us
ಆಯೇಷಾ ಬಾನು
| Updated By: KUSHAL V

Updated on:Oct 26, 2020 | 4:12 PM

ಮೈಸೂರು: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಎಂ ಬಿ.ಎಸ್​.ಯಡಿಯೂರಪ್ಪ ಚಿನ್ನದ ಅಂಬಾರಿಯಲ್ಲಿ ಸ್ಥಾಪಿತವಾದ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದರು. ಶುಭ ಕುಂಭ ಲಗ್ನದಲ್ಲಿ ಅಧಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕೊರೊನಾ ಹಿನ್ನೆಲೆ ಈ ಬಾರಿ ಜಂಬೂಸವಾರಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ.

ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ರಾಜ ನಡಿಗೆ: ಐತಿಹಾಸಿಕ ಜಂಬೂಸವಾರಿಗಾಗಿ ಮೈಸೂರು ಅರಮನೆಯಲ್ಲಿ ಚಿನ್ನದ ಅಂಬಾರಿಯನ್ನು ಅಲಂಕಾರ ಮಾಡಲಾಯಿತು. ಅಂಬಾರಿ ಹೊರುವ ಕ್ಯಾಪ್ಟನ್ ಅಭಿಮನ್ಯುನನ್ನು ಬಣ್ಣಗಳಿಂದ ಸಿಂಗರಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ಆನೆಗೆ ಹಣೆಪಟ್ಟಿ, ದಂತಗಳಿಗೆ ಕವಚ, ವಿಶೇಷ ಕಾಸಿನ ಸರದ ಕೊರಳ ಘಂಟೆ, ಕಾಲಿಗೆ ಗೆಜ್ಜೆ ಸೇರಿದಂತೆ ಹಲವು ಆಭರಣಗಳಿಂದ ಅಲಂಕಾರ ಮಾಡಲಾಗಿದೆ. ಅರಮನೆ ಆವರಣದಲ್ಲಿಯೇ ವಿಜಯದಶಮಿ ಮೆರವಣಿಗೆಯಾಗಿದೆ. ಮೊದಲ ಬಾರಿಗೆ ‘ಅಭಿಮನ್ಯು’ ಅಂಬಾರಿ ಹೊರುತ್ತಿದ್ದು, ಅಭಿಮನ್ಯುಗೆ ವಿಜಯಾ, ಕಾವೇರಿ ಆನೆಗಳು ಸಾಥ್ ನೀಡಿದವು. ಇದು ಅರಮನೆಯಲ್ಲಿ ರಾಜ ವೈಭವವನ್ನೇ ಮತ್ತೆ ಸೃಷ್ಟಿಸಿದಂತಿತ್ತು.

ಇನ್ನು ಸರಳ ದಸರಾ ಹಿನ್ನೆಲೆಯಲ್ಲಿ ಪ್ರತಿ ವರ್ಷ ಅರಮನೆಯಿಂದ ಬನ್ನಿಮಂಟಪದವರೆಗೆ ಸುಮಾರು 5.5 ಕಿಲೋ ಮೀಟರ್ ಸಾಗುತ್ತಿದ್ದ ಜಂಬೂಸವಾರಿ ಈ ಬಾರಿ ಕೇವಲ 400 ಮೀಟರ್‌ ಅಂತರದಲ್ಲೇ ಸಾಗಿ ಬಂದಿದೆ. ವಿಜಯದಶಮಿ ಜಂಬೂಸವಾರಿಯಲ್ಲಿ ಕೇವಲ 4 ಕಲಾತಂಡಗಳು ಭಾಗಿಯಾಗಿವೆ. ಅಶ್ವಾರೋಹಿ ದಳದ 2 ತುಕಡಿ, ಒಂದು ಸ್ತಬ್ಧ ಚಿತ್ರ ಮಾತ್ರ ಭಾಗಿಯಾಗಿದ್ದು ಇದರ ಜೊತೆಗೆ ಕರ್ನಾಟಕ ಪೊಲೀಸ್ ಬ್ಯಾಂಡ್​ ಆನೆಗಾಡಿಯೂ ಭಾಗಿಯಾಗಿದೆ. ಪ್ರತಿ ಬಾರಿ ಕಂಡು ಬರುತ್ತಿದ್ದ ಸಂಭ್ರಮ, ಸಡಗರ ಈ ಬಾರಿ ಕೊಂಚ ಕಮ್ಮಿಯಾಗಿತ್ತು. ಲಕ್ಷಾಂತರ ಜನ ನಿಂತು ನೋಡುತಿದ್ದ ಬೀದಿಗಳು ಖಾಲಿ ಖಾಲಿಯಾಗಿ ಕಂಡು ಬಂದವು.

Published On - 3:58 pm, Mon, 26 October 20

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ