ಮುಖ್ಯಮಂತ್ರಿ ಬಿಎಸ್​ವೈ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಒಂದೇ ವಿಮಾನದಲ್ಲಿ!

ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕಟ್ಟಾ ರಾಜಕೀಯ ವೈರಿಗಳಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಬೆಳಗಾವಿ ವಿಮಾನ ನಿಲ್ದಾನದಲ್ಲಿ ಮುಖಾಮುಖಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಬಿಎಸ್​ವೈ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಒಂದೇ ವಿಮಾನದಲ್ಲಿ!
ಅರುಣ್​ ಕುಮಾರ್​ ಬೆಳ್ಳಿ

Updated on: Dec 05, 2020 | 10:32 PM

ಒಬ್ಬರಿಗೊಬ್ಬರು ವಿಶ್ ಮಾಡುತ್ತಿರುವ ಬಿಎಸ್​ವೈ ಮತ್ತು ಸಿದ್ದರಾಮಯ್ಯ

ಇಲ್ಲಿರುವ ಚಿತ್ರಗಳನ್ನೊಮ್ಮೆ ಗಮನಿಸಿ. ಅಪರೂಪಕ್ಕೊಮ್ಮೆ ಸಿಗುವಂಥ ಪೋಟೊಗಳಿವು. ದಿನಬೆಳಗಾದರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಟೀಕಿಸುವ ರಾಜ್ಯ ಕಾಂಗ್ರೆಸ್​ನ ಇಬ್ಬರು ವರಿಷ್ಠ ನಾಯಕರು- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಎಸ್​ವೈರೊಂದಿಗೆ ಲಹರಿ ಮೂಡ್​ನಲ್ಲಿ ಹರಟುತ್ತಿದ್ದಾರೆ!

ಯಡಿಯೂರಪ್ಪ, ಸಿದ್ದರಾಮಯ್ಯ, ಡಿಕೆಶಿ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾಗಿ ಮಾತುಕತೆಯಲ್ಲಿ ತೊಡಗಿದರು. ಈ ನಾಯಕರು ಬೆಳಗಾವಿಯಿಂದ ಬೆಂಗಳೂರಿಗೆ ಬರುವ ಮೊದಲು ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾಗಿದ್ದು.

ಮೊದಲು ಉಭಯ ಕುಶಲೋಪರಿ ವಿಚಾರಿಸಿಕೊಂಡ ನಾಯಕರು ವಿಮಾನ ಹೊರಡಲು ಇನ್ನೂ ಸಮಯವಿದ್ದ ಕಾರಣ ಒಂದೆಡೆ ಕೂತು ಹರಟಿದರು. ನಂತರ ಮೂವರು ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸಿದರು. ವಿಮಾನದಲ್ಲೂ ಅಕ್ಕಪಕ್ಕವೇ ಕೂತಿದ್ದರೋ ಇಲ್ಲವೇ ದೂರ ದೂರ ಕೂತಿದ್ದರೋ ಎನ್ನುವುದು ಇನ್ನೂ ಗೊತ್ತಾಗಬೇಕಿದೆ.

ಹಾಗೆಯೇ, ಅವರ ಭೇಟಿ ಆಕಸ್ಮಿಕವೋ, ಕಾಕತಾಳೀಯವೋ ಅಥವಾ ಪೂರ್ವನಿಯೋಜಿತವೋ ಅಂತಲೂ ಅರ್ಥವಾಗುತ್ತಿಲ್ಲ!

 

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us