AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಹಿಂದೆ ಗಾಂಜಾ ಗ್ಯಾಂಗ್‌ ಕೈವಾಡ: SR ವಿಶ್ವನಾಥ್

ಬೆಂಗಳೂರು: ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಘಟನೆ ಹಿಂದೆ ಗಾಂಜಾ, ಅಫೀಮು ಗ್ಯಾಂಗ್‌ ಕೈವಾಡವಿದೆಯೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಆರೋಪ ಮಾಡಿದ್ದಾರೆ. ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಗಾಂಜಾ ಮಾರಾಟ ನಡೆಯುತ್ತಿದೆ. ಇಂಥ ಸಮಾಜ ವಿರೋಧಿಗಳು, ಗೂಂಡಾಗಳನ್ನು ಕೆಲವು ರಾಜಕಾರಣಿಗಳು ಬೆಳೆಸಿದ್ದಾರೆ. ಇಂಥವರಲ್ಲಿ ಕಾಂಗ್ರೆಸ್‌ ಮುಖಂಡರು ಸೇರಿದ್ದಾರೆ. ಶಾಸಕರ ಪರ ನಿಂತರೆ ಅಲ್ಪಸಂಖ್ಯಾತರು ಬೇಜಾರು ಮಾಡ್ಕೋತಾರೆ ಅಂತಾ ಕಾಂಗ್ರೆಸ್ ನವರಿಗೆ ಆತಂಕ ಇದೆ. […]

ಡಿಜೆ ಹಳ್ಳಿ ಗಲಭೆ ಹಿಂದೆ ಗಾಂಜಾ ಗ್ಯಾಂಗ್‌ ಕೈವಾಡ: SR ವಿಶ್ವನಾಥ್
Guru
Guru|

Updated on:Aug 13, 2020 | 1:28 PM

Share

ಬೆಂಗಳೂರು: ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಘಟನೆ ಹಿಂದೆ ಗಾಂಜಾ, ಅಫೀಮು ಗ್ಯಾಂಗ್‌ ಕೈವಾಡವಿದೆಯೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಆರೋಪ ಮಾಡಿದ್ದಾರೆ.

ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಗಾಂಜಾ ಮಾರಾಟ ನಡೆಯುತ್ತಿದೆ. ಇಂಥ ಸಮಾಜ ವಿರೋಧಿಗಳು, ಗೂಂಡಾಗಳನ್ನು ಕೆಲವು ರಾಜಕಾರಣಿಗಳು ಬೆಳೆಸಿದ್ದಾರೆ. ಇಂಥವರಲ್ಲಿ ಕಾಂಗ್ರೆಸ್‌ ಮುಖಂಡರು ಸೇರಿದ್ದಾರೆ. ಶಾಸಕರ ಪರ ನಿಂತರೆ ಅಲ್ಪಸಂಖ್ಯಾತರು ಬೇಜಾರು ಮಾಡ್ಕೋತಾರೆ ಅಂತಾ ಕಾಂಗ್ರೆಸ್ ನವರಿಗೆ ಆತಂಕ ಇದೆ. ಹೀಗಾಗಿ ಕಾಂಗ್ರೆಸ್,‌ ಈಗ ತನ್ನ ಶಾಸಕರನ್ನೇ ಕೈಬಿಡುವ ಸ್ಥಿತಿಯಲ್ಲಿದೆ ಎಂದು ಆರೋಪ ಮಾಡಿದ್ದಾರೆ.

ಅಮಾಯಕರು ಯಾರಾದ್ರೂ ರಾತ್ರಿ ಎರಡು ಗಂಟೆಗೆ ಮನೆಯಿಂದ ಹೊರ ಬರುತ್ತಾರಾ? ಗಲಭೆಯಲ್ಲಿ ಸತ್ತಿರುವವರನ್ನು ಅಮಾಯಕರು ಅಂತಿದ್ದಾರೆ. ಅಮಾಯಕರು ಯಾರಾದ್ರೂ ರಾತ್ರಿ ಎರಡು ಗಂಟೆಗೆ ಮನೆಯಿಂದ ಹೊರ ಬರುತ್ತಾರಾ? ಎಂದು ಪ್ರಶ್ನಿಸಿದ ಎಸ್‌ ಆರ್‌ ವಿಶ್ವನಾಥ್‌, ಮೊನ್ನೆ ರಾತ್ರಿ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆ ಏಕಾಏಕಿ ನಡೆದಿರೋದು ಅಲ್ಲ, ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಆಪಾದಿಸಿದ್ದಾರೆ.

ಮಂಗಳೂರು, ಪಾದರಾಯನಪುರ, ಇಲ್ಲಿ ಎಲ್ಲಾ ಕಡೆ ಒಂದೇ ಟೀಮ್ ನವರು ಮಾಡ್ತಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ರಾಮಮಂದಿರ ಶಿಲಾನ್ಯಾಸ ಸಮಯದಲ್ಲಿ ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ಕಡೆ ಗಲಾಟೆ ಆಗುತ್ತದೆ ಅಂತಾ ವರದಿ ಕೊಟ್ಟಿತ್ತು. ಗಲಭೆ ನಡೆಸಲು ಒಂದು ಟೀಮ್ ರೆಡಿ ಆಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಕಡೆ ಗಲಭೆ ನಡೆಸಲು ಉದ್ದೇಶಿಸಿದ್ದರು ಎಂದು ವಿಶ್ವನಾಥ್ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ಜಮೀರ್ ಅಹಮದ್ ಬಗ್ಗೆ ಕೂಡಾ ಟೀಕಾ ಪ್ರಹಾರ ಮಾಡಿದ ವಿಶ್ವನಾಥ್‌, ಜಮೀರ್‌ ಅಹ್ಮದ್‌ ಹೇಳೋದೊಂದು, ಮಾಡೋದೊಂದು. ಬೆಂಗಳೂರಿನಲ್ಲಿ ಮುಸ್ಲಿಂ ನಾಯಕ ಅಂತಾ ಬಿಂಬಿಸಿಕೊಳ್ಳಲು ಹೋಗುತ್ತಾರೆ. ಆದ್ರೆ ಗಲಭೆ ನಿಯಂತ್ರಿಸುವಲ್ಲಿ ಅವರು ಪರಿಣಾಮಕಾರಿಯಾಗಿಲ್ಲ. ತಕ್ಷಣವೇ ಎಸ್‌ಡಿಪಿಐ, ಪಿಎಫ್‌ಐ ನಿಷೇಧ ಆಗಬೇಕು ಎಂದು ಆಗ್ರಹಿಸಿದ್ದಾರೆ.

Published On - 1:11 pm, Thu, 13 August 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ