AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಹಿಂದೆ ಗಾಂಜಾ ಗ್ಯಾಂಗ್‌ ಕೈವಾಡ: SR ವಿಶ್ವನಾಥ್

ಬೆಂಗಳೂರು: ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಘಟನೆ ಹಿಂದೆ ಗಾಂಜಾ, ಅಫೀಮು ಗ್ಯಾಂಗ್‌ ಕೈವಾಡವಿದೆಯೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಆರೋಪ ಮಾಡಿದ್ದಾರೆ. ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಗಾಂಜಾ ಮಾರಾಟ ನಡೆಯುತ್ತಿದೆ. ಇಂಥ ಸಮಾಜ ವಿರೋಧಿಗಳು, ಗೂಂಡಾಗಳನ್ನು ಕೆಲವು ರಾಜಕಾರಣಿಗಳು ಬೆಳೆಸಿದ್ದಾರೆ. ಇಂಥವರಲ್ಲಿ ಕಾಂಗ್ರೆಸ್‌ ಮುಖಂಡರು ಸೇರಿದ್ದಾರೆ. ಶಾಸಕರ ಪರ ನಿಂತರೆ ಅಲ್ಪಸಂಖ್ಯಾತರು ಬೇಜಾರು ಮಾಡ್ಕೋತಾರೆ ಅಂತಾ ಕಾಂಗ್ರೆಸ್ ನವರಿಗೆ ಆತಂಕ ಇದೆ. […]

ಡಿಜೆ ಹಳ್ಳಿ ಗಲಭೆ ಹಿಂದೆ ಗಾಂಜಾ ಗ್ಯಾಂಗ್‌ ಕೈವಾಡ: SR ವಿಶ್ವನಾಥ್
Guru
Guru|

Updated on:Aug 13, 2020 | 1:28 PM

Share

ಬೆಂಗಳೂರು: ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಘಟನೆ ಹಿಂದೆ ಗಾಂಜಾ, ಅಫೀಮು ಗ್ಯಾಂಗ್‌ ಕೈವಾಡವಿದೆಯೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಆರೋಪ ಮಾಡಿದ್ದಾರೆ.

ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಗಾಂಜಾ ಮಾರಾಟ ನಡೆಯುತ್ತಿದೆ. ಇಂಥ ಸಮಾಜ ವಿರೋಧಿಗಳು, ಗೂಂಡಾಗಳನ್ನು ಕೆಲವು ರಾಜಕಾರಣಿಗಳು ಬೆಳೆಸಿದ್ದಾರೆ. ಇಂಥವರಲ್ಲಿ ಕಾಂಗ್ರೆಸ್‌ ಮುಖಂಡರು ಸೇರಿದ್ದಾರೆ. ಶಾಸಕರ ಪರ ನಿಂತರೆ ಅಲ್ಪಸಂಖ್ಯಾತರು ಬೇಜಾರು ಮಾಡ್ಕೋತಾರೆ ಅಂತಾ ಕಾಂಗ್ರೆಸ್ ನವರಿಗೆ ಆತಂಕ ಇದೆ. ಹೀಗಾಗಿ ಕಾಂಗ್ರೆಸ್,‌ ಈಗ ತನ್ನ ಶಾಸಕರನ್ನೇ ಕೈಬಿಡುವ ಸ್ಥಿತಿಯಲ್ಲಿದೆ ಎಂದು ಆರೋಪ ಮಾಡಿದ್ದಾರೆ.

ಅಮಾಯಕರು ಯಾರಾದ್ರೂ ರಾತ್ರಿ ಎರಡು ಗಂಟೆಗೆ ಮನೆಯಿಂದ ಹೊರ ಬರುತ್ತಾರಾ? ಗಲಭೆಯಲ್ಲಿ ಸತ್ತಿರುವವರನ್ನು ಅಮಾಯಕರು ಅಂತಿದ್ದಾರೆ. ಅಮಾಯಕರು ಯಾರಾದ್ರೂ ರಾತ್ರಿ ಎರಡು ಗಂಟೆಗೆ ಮನೆಯಿಂದ ಹೊರ ಬರುತ್ತಾರಾ? ಎಂದು ಪ್ರಶ್ನಿಸಿದ ಎಸ್‌ ಆರ್‌ ವಿಶ್ವನಾಥ್‌, ಮೊನ್ನೆ ರಾತ್ರಿ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಘಟನೆ ಏಕಾಏಕಿ ನಡೆದಿರೋದು ಅಲ್ಲ, ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಆಪಾದಿಸಿದ್ದಾರೆ.

ಮಂಗಳೂರು, ಪಾದರಾಯನಪುರ, ಇಲ್ಲಿ ಎಲ್ಲಾ ಕಡೆ ಒಂದೇ ಟೀಮ್ ನವರು ಮಾಡ್ತಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ರಾಮಮಂದಿರ ಶಿಲಾನ್ಯಾಸ ಸಮಯದಲ್ಲಿ ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ಕಡೆ ಗಲಾಟೆ ಆಗುತ್ತದೆ ಅಂತಾ ವರದಿ ಕೊಟ್ಟಿತ್ತು. ಗಲಭೆ ನಡೆಸಲು ಒಂದು ಟೀಮ್ ರೆಡಿ ಆಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಕಡೆ ಗಲಭೆ ನಡೆಸಲು ಉದ್ದೇಶಿಸಿದ್ದರು ಎಂದು ವಿಶ್ವನಾಥ್ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ಜಮೀರ್ ಅಹಮದ್ ಬಗ್ಗೆ ಕೂಡಾ ಟೀಕಾ ಪ್ರಹಾರ ಮಾಡಿದ ವಿಶ್ವನಾಥ್‌, ಜಮೀರ್‌ ಅಹ್ಮದ್‌ ಹೇಳೋದೊಂದು, ಮಾಡೋದೊಂದು. ಬೆಂಗಳೂರಿನಲ್ಲಿ ಮುಸ್ಲಿಂ ನಾಯಕ ಅಂತಾ ಬಿಂಬಿಸಿಕೊಳ್ಳಲು ಹೋಗುತ್ತಾರೆ. ಆದ್ರೆ ಗಲಭೆ ನಿಯಂತ್ರಿಸುವಲ್ಲಿ ಅವರು ಪರಿಣಾಮಕಾರಿಯಾಗಿಲ್ಲ. ತಕ್ಷಣವೇ ಎಸ್‌ಡಿಪಿಐ, ಪಿಎಫ್‌ಐ ನಿಷೇಧ ಆಗಬೇಕು ಎಂದು ಆಗ್ರಹಿಸಿದ್ದಾರೆ.

Published On - 1:11 pm, Thu, 13 August 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ