Zero traffic: ಜೀರೋ ಟ್ರಾಫಿಕ್ ಮಾಡಿಸಿದ್ಯಾಕೆ ಅಂತ ಸಿದ್ದರಾಮಯ್ಯ ಮೈಸೂರು ಪೊಲೀಸ್ ಕಮೀಶನರ್​ ವಿರುದ್ಧ ರೇಗಿದರು!  

ಅರುಣ್​ ಕುಮಾರ್​ ಬೆಳ್ಳಿ

Updated on: Jun 10, 2023 | 7:19 PM

ಪೊಲೀಸ್ ಆಯುಕ್ತರಿಗೆ ಅದು ನೆನಪಿರಲಿಲ್ಲವೋ ಅಥವಾ ಗೊತ್ತಿದ್ದೂ ಅದನ್ನು ಮಾಡಿಸಿರೋ ನಮಗೆ ಗೊತ್ತಿಲ್ಲ.

ಮೈಸೂರು: ಸರಕಾರಗಳು ಬದಲಾದಾಗ ಎಲ್ಲರಿಗಿಂತ ಹೆಚ್ಚು ಸಮಸ್ಯೆ ಅನುಭವಿಸುವವರು ಅಂದರೆ ಸರ್ಕಾರೀ ಆಧಿಕಾರಿಗಳು (government officials). ಯಾಕೆ ಗೊತ್ತಾ? ಹಿಂದಿನ ಸರ್ಕಾರದ ಮುಖ್ಯಮಂತ್ರಿ, ಮತ್ತು ಸಚಿವರ ಮರ್ಜಿ ಒಂದು ತೆರನಾಗಿದ್ದರೆ ಹೊಸ ಸರ್ಕಾರದ ಪ್ರತಿನಿಧಿಗಳದ್ದು ಮತ್ತೊಂದು ಬಗೆಯಾಗಿರುತ್ತದೆ. ಅದಕ್ಕೊಂದು ಉದಾಹರಣೆ ಇಲ್ಲಿದೆ. ಇಂದು ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಗರದ ಏರ್ಫೋಟ್ ನಿಂದ ಜಿಲ್ಲಾ ಪಂಚಾಯತ್ ಅವರಣಕ್ಕೆ ಬರುವಾಗ ನಗರದ ಪೊಲೀಸ್ ಕಮೀಶನರ್ ರಮೇಶ್ ಬಾನೋತ್ (Ramesh Bhanot) ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಿದ್ದಾರೆ. ಅಂಥದ್ದೇನೂ ತನಗೆ ಬೇಕಿಲ್ಲ ಅಂತ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಮೇಲೆ ಹೇಳಿದ್ದರು. ಆದರೆ ಪೊಲೀಸ್ ಆಯುಕ್ತರಿಗೆ ಅದು ನೆನಪಿರಲಿಲ್ಲವೋ ಅಥವಾ ಗೊತ್ತಿದ್ದೂ ಅದನ್ನು ಮಾಡಿಸಿರೋ ನಮಗೆ ಗೊತ್ತಿಲ್ಲ. ಅವರ ಈ ಕೆಲಸಕ್ಕಾಗಿ ಮುಖ್ಯಮಂತ್ರಿಗಳು ಉಳಿದವರ ಮುಂದೆ ರಮೇಶ್ ಬಾನೋತ್ ಅವರ ಮೇಲೆ ರೇಗಿದ್ದು ಮಾತ್ರ ನಮಗೆ ಗೊತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.