ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು. 2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ […]

ಗುಹೆಯಲ್ಲಿ ವಾಸವಿದ್ದ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಸೂಚನೆ
ಸಾಧು ಶ್ರೀನಾಥ್​

Updated on: Apr 23, 2020 | 10:35 AM

ಚಿಕ್ಕಮಗಳೂರು: ಗುಹೆಯಲ್ಲಿ ವಾಸಿಸುತ್ತಿರುವ ಕುಟುಂಬಕ್ಕೆ ತಕ್ಷಣ ಮನೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಪ್ರವಾಹ ಸಂದರ್ಭದಲ್ಲಿ ಮಾವಿನಕೆರೆಯ ಅನಂತ್ ಕುಟುಂಬ ಮನೆ ಕಳೆದುಕೊಂಡಿತ್ತು.

2019ರಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ವಾಸವಿದ್ದ ಅನಂತ್ ಕುಟುಂಬ ಮನೆ ಕಳೆದುಕೊಂಡು, ಗುಹೆಯಲ್ಲಿ ವಾಸ ಮಾಡುತ್ತಿತ್ತು. ಗುಹೆಯಲ್ಲಿ ವಾಸಿಸುತ್ತಿರುವ ವಿಚಾರ ಮಾಧ್ಯಮದ ಮೂಲಕ ಸಿಎಂ ಗಮನಕ್ಕೆ ಬಂದಿತ್ತು. ತಕ್ಷಣವೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಸಿಎಂ ಯಡಿಯೂರಪ್ಪ, ಅನಂತ್ ಕುಟುಂಬಕ್ಕೆ ಮನೆ ವ್ಯವಸ್ಥೆ ಮತ್ತು ಒಂದು ಲಕ್ಷ ಹಣ ನೀಡುವಂತೆ ಆದೇಶಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us