AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸಿಎಂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !
ಬಿ.ಎಸ್​.ಯಡಿಯೂರಪ್ಪ ಮತ್ತು ರಮೇಶ್ ಜಾರಕಿಹೊಳಿ
Lakshmi Hegde
| Edited By: |

Updated on:Dec 09, 2020 | 2:16 PM

Share

ಬೆಂಗಳೂರು: ಒಂದೆಡೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದರೆ, ಮತ್ತೊಂದೆಡೆ ಸಚಿವ ರಮೇಶ್ ಜಾರಕಿಹೊಳಿ ದೆಹಲಿ ಪ್ರಯಾಣವೂ ಹೆಚ್ಚುತ್ತಿದೆ. ರಮೇಶ್ ಜಾರಕಿಹೊಳಿ ಪದೇಪದೆ ದೆಹಲಿಗೆ ಹೋಗುತ್ತಿರುವುದು ಪಕ್ಷದೊಳಗೇ ಚರ್ಚೆಗೆ ಕಾರಣವಾಗಿದೆ..ಅಷ್ಟೇ ಅಲ್ಲ ಮುಖ್ಯಮಂತ್ರಿ ಯಡಿಯೂರಪ್ಪನವರೂ ಸಹ ಈ ಬಗ್ಗೆ ಸಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿ.ಪಿ.ಯೋಗೇಶ್ವರ್​ ಸೇರಿ ಕೆಲವರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಪ್ರಯತ್ನ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಬಿ.ಎಲ್​.ಸಂತೋಷ್​ ಸೇರಿ ಕೆಲವು ಕೇಂದ್ರ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ಇಂದು ಅವರು ದೆಹಲಿಯಿಂದ ವಾಪಸ್​ ಬಂದ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದ ವೇಳೆ, ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸೂಕ್ಷ್ಮವಾಗಿಯೇ ರಮೇಶ್ ಜಾರಕಿಹೊಳಿಗೆ ನೀವು ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಈ ವೇಳೆ ರಮೇಶ್ ಜಾರಕಿಹೊಳಿ, ತಾವು ನೀರಾವರಿ ಯೋಜನೆ ಬಗ್ಗೆ ಚರ್ಚಿಸಲು ಹೋಗಿದ್ದಾಗಿ ಸಿಎಂಗೆ ಹೇಳಿದರೂ, ಅವರು ಸಚಿವ ರಮೇಶ್ ನಡೆಯನ್ನು ಸ್ವಲ್ಪ ಖಾರವಾಗಿಯೇ ವಿರೋಧಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Published On - 8:48 pm, Sat, 28 November 20

Follow Us
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?