AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸಿಎಂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !
ಬಿ.ಎಸ್​.ಯಡಿಯೂರಪ್ಪ ಮತ್ತು ರಮೇಶ್ ಜಾರಕಿಹೊಳಿ
Lakshmi Hegde
| Updated By: Skanda|

Updated on:Dec 09, 2020 | 2:16 PM

Share

ಬೆಂಗಳೂರು: ಒಂದೆಡೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದರೆ, ಮತ್ತೊಂದೆಡೆ ಸಚಿವ ರಮೇಶ್ ಜಾರಕಿಹೊಳಿ ದೆಹಲಿ ಪ್ರಯಾಣವೂ ಹೆಚ್ಚುತ್ತಿದೆ. ರಮೇಶ್ ಜಾರಕಿಹೊಳಿ ಪದೇಪದೆ ದೆಹಲಿಗೆ ಹೋಗುತ್ತಿರುವುದು ಪಕ್ಷದೊಳಗೇ ಚರ್ಚೆಗೆ ಕಾರಣವಾಗಿದೆ..ಅಷ್ಟೇ ಅಲ್ಲ ಮುಖ್ಯಮಂತ್ರಿ ಯಡಿಯೂರಪ್ಪನವರೂ ಸಹ ಈ ಬಗ್ಗೆ ಸಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿ.ಪಿ.ಯೋಗೇಶ್ವರ್​ ಸೇರಿ ಕೆಲವರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಪ್ರಯತ್ನ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಬಿ.ಎಲ್​.ಸಂತೋಷ್​ ಸೇರಿ ಕೆಲವು ಕೇಂದ್ರ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ಇಂದು ಅವರು ದೆಹಲಿಯಿಂದ ವಾಪಸ್​ ಬಂದ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದ ವೇಳೆ, ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸೂಕ್ಷ್ಮವಾಗಿಯೇ ರಮೇಶ್ ಜಾರಕಿಹೊಳಿಗೆ ನೀವು ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಈ ವೇಳೆ ರಮೇಶ್ ಜಾರಕಿಹೊಳಿ, ತಾವು ನೀರಾವರಿ ಯೋಜನೆ ಬಗ್ಗೆ ಚರ್ಚಿಸಲು ಹೋಗಿದ್ದಾಗಿ ಸಿಎಂಗೆ ಹೇಳಿದರೂ, ಅವರು ಸಚಿವ ರಮೇಶ್ ನಡೆಯನ್ನು ಸ್ವಲ್ಪ ಖಾರವಾಗಿಯೇ ವಿರೋಧಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Published On - 8:48 pm, Sat, 28 November 20

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!