AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸಿಎಂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !
ಬಿ.ಎಸ್​.ಯಡಿಯೂರಪ್ಪ ಮತ್ತು ರಮೇಶ್ ಜಾರಕಿಹೊಳಿ
Lakshmi Hegde
| Edited By: |

Updated on:Dec 09, 2020 | 2:16 PM

Share

ಬೆಂಗಳೂರು: ಒಂದೆಡೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದರೆ, ಮತ್ತೊಂದೆಡೆ ಸಚಿವ ರಮೇಶ್ ಜಾರಕಿಹೊಳಿ ದೆಹಲಿ ಪ್ರಯಾಣವೂ ಹೆಚ್ಚುತ್ತಿದೆ. ರಮೇಶ್ ಜಾರಕಿಹೊಳಿ ಪದೇಪದೆ ದೆಹಲಿಗೆ ಹೋಗುತ್ತಿರುವುದು ಪಕ್ಷದೊಳಗೇ ಚರ್ಚೆಗೆ ಕಾರಣವಾಗಿದೆ..ಅಷ್ಟೇ ಅಲ್ಲ ಮುಖ್ಯಮಂತ್ರಿ ಯಡಿಯೂರಪ್ಪನವರೂ ಸಹ ಈ ಬಗ್ಗೆ ಸಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿ.ಪಿ.ಯೋಗೇಶ್ವರ್​ ಸೇರಿ ಕೆಲವರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಪ್ರಯತ್ನ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಬಿ.ಎಲ್​.ಸಂತೋಷ್​ ಸೇರಿ ಕೆಲವು ಕೇಂದ್ರ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ಇಂದು ಅವರು ದೆಹಲಿಯಿಂದ ವಾಪಸ್​ ಬಂದ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದ ವೇಳೆ, ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸೂಕ್ಷ್ಮವಾಗಿಯೇ ರಮೇಶ್ ಜಾರಕಿಹೊಳಿಗೆ ನೀವು ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಈ ವೇಳೆ ರಮೇಶ್ ಜಾರಕಿಹೊಳಿ, ತಾವು ನೀರಾವರಿ ಯೋಜನೆ ಬಗ್ಗೆ ಚರ್ಚಿಸಲು ಹೋಗಿದ್ದಾಗಿ ಸಿಎಂಗೆ ಹೇಳಿದರೂ, ಅವರು ಸಚಿವ ರಮೇಶ್ ನಡೆಯನ್ನು ಸ್ವಲ್ಪ ಖಾರವಾಗಿಯೇ ವಿರೋಧಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Published On - 8:48 pm, Sat, 28 November 20

Follow Us
Lakshmi Hegde
Lakshmi Hegde
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!