AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸಿಎಂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !
ಬಿ.ಎಸ್​.ಯಡಿಯೂರಪ್ಪ ಮತ್ತು ರಮೇಶ್ ಜಾರಕಿಹೊಳಿ
Lakshmi Hegde
| Edited By: |

Updated on:Dec 09, 2020 | 2:16 PM

Share

ಬೆಂಗಳೂರು: ಒಂದೆಡೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದರೆ, ಮತ್ತೊಂದೆಡೆ ಸಚಿವ ರಮೇಶ್ ಜಾರಕಿಹೊಳಿ ದೆಹಲಿ ಪ್ರಯಾಣವೂ ಹೆಚ್ಚುತ್ತಿದೆ. ರಮೇಶ್ ಜಾರಕಿಹೊಳಿ ಪದೇಪದೆ ದೆಹಲಿಗೆ ಹೋಗುತ್ತಿರುವುದು ಪಕ್ಷದೊಳಗೇ ಚರ್ಚೆಗೆ ಕಾರಣವಾಗಿದೆ..ಅಷ್ಟೇ ಅಲ್ಲ ಮುಖ್ಯಮಂತ್ರಿ ಯಡಿಯೂರಪ್ಪನವರೂ ಸಹ ಈ ಬಗ್ಗೆ ಸಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿ.ಪಿ.ಯೋಗೇಶ್ವರ್​ ಸೇರಿ ಕೆಲವರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಪ್ರಯತ್ನ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಬಿ.ಎಲ್​.ಸಂತೋಷ್​ ಸೇರಿ ಕೆಲವು ಕೇಂದ್ರ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ಇಂದು ಅವರು ದೆಹಲಿಯಿಂದ ವಾಪಸ್​ ಬಂದ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದ ವೇಳೆ, ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸೂಕ್ಷ್ಮವಾಗಿಯೇ ರಮೇಶ್ ಜಾರಕಿಹೊಳಿಗೆ ನೀವು ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಈ ವೇಳೆ ರಮೇಶ್ ಜಾರಕಿಹೊಳಿ, ತಾವು ನೀರಾವರಿ ಯೋಜನೆ ಬಗ್ಗೆ ಚರ್ಚಿಸಲು ಹೋಗಿದ್ದಾಗಿ ಸಿಎಂಗೆ ಹೇಳಿದರೂ, ಅವರು ಸಚಿವ ರಮೇಶ್ ನಡೆಯನ್ನು ಸ್ವಲ್ಪ ಖಾರವಾಗಿಯೇ ವಿರೋಧಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Published On - 8:48 pm, Sat, 28 November 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ