AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸಿಎಂ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ದೆಹಲಿಗೆ ಹೋಗಿ ವಾಪಸ್ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಖಡಕ್​ ಮಾತು?..ಭೇಟಿ ವೇಳೆ ಅಸಮಾಧಾನ !
ಬಿ.ಎಸ್​.ಯಡಿಯೂರಪ್ಪ ಮತ್ತು ರಮೇಶ್ ಜಾರಕಿಹೊಳಿ
Lakshmi Hegde
| Edited By: |

Updated on:Dec 09, 2020 | 2:16 PM

Share

ಬೆಂಗಳೂರು: ಒಂದೆಡೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದರೆ, ಮತ್ತೊಂದೆಡೆ ಸಚಿವ ರಮೇಶ್ ಜಾರಕಿಹೊಳಿ ದೆಹಲಿ ಪ್ರಯಾಣವೂ ಹೆಚ್ಚುತ್ತಿದೆ. ರಮೇಶ್ ಜಾರಕಿಹೊಳಿ ಪದೇಪದೆ ದೆಹಲಿಗೆ ಹೋಗುತ್ತಿರುವುದು ಪಕ್ಷದೊಳಗೇ ಚರ್ಚೆಗೆ ಕಾರಣವಾಗಿದೆ..ಅಷ್ಟೇ ಅಲ್ಲ ಮುಖ್ಯಮಂತ್ರಿ ಯಡಿಯೂರಪ್ಪನವರೂ ಸಹ ಈ ಬಗ್ಗೆ ಸಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿ.ಪಿ.ಯೋಗೇಶ್ವರ್​ ಸೇರಿ ಕೆಲವರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಪ್ರಯತ್ನ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈಗಾಗಲೇ ಬಿ.ಎಲ್​.ಸಂತೋಷ್​ ಸೇರಿ ಕೆಲವು ಕೇಂದ್ರ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.  ಇಂದು ಅವರು ದೆಹಲಿಯಿಂದ ವಾಪಸ್​ ಬಂದ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದ ವೇಳೆ, ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿಯಾಗಿ ನಾನು ನಿರ್ಧಾರ ಕೈಗೊಳ್ಳಬೇಕು. ದೆಹಲಿ ವರಿಷ್ಠರ ಜತೆ ಮಾತುಕತೆ, ಚರ್ಚೆ ನಡೆಸಬೇಕಾದವನು ನಾನು. ಹೀಗಿದ್ದಾಗ್ಯೂ ನೀವೇಕೆ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದೀರಿ. ಸಚಿವ ಸಂಪುಟ, ಮಂತ್ರಿ ಸ್ಥಾನದ ಬಗ್ಗೆ ದೆಹಲಿ ಸಚಿವರ ಬಳಿ ಯಾಕೆ ಮಾತುಕತೆ ನಡೆಸುತ್ತಿದ್ದೀರಿ ಎಂದು ಸೂಕ್ಷ್ಮವಾಗಿಯೇ ರಮೇಶ್ ಜಾರಕಿಹೊಳಿಗೆ ನೀವು ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಈ ವೇಳೆ ರಮೇಶ್ ಜಾರಕಿಹೊಳಿ, ತಾವು ನೀರಾವರಿ ಯೋಜನೆ ಬಗ್ಗೆ ಚರ್ಚಿಸಲು ಹೋಗಿದ್ದಾಗಿ ಸಿಎಂಗೆ ಹೇಳಿದರೂ, ಅವರು ಸಚಿವ ರಮೇಶ್ ನಡೆಯನ್ನು ಸ್ವಲ್ಪ ಖಾರವಾಗಿಯೇ ವಿರೋಧಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Published On - 8:48 pm, Sat, 28 November 20

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು