AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರೂ. ಚಿಲ್ಲರೆಗಾಗಿ ನಡುರಸ್ತೆಯಲ್ಲಿ ಬಡಿದಾಡಿಕೊಂಡ ಪ್ರಯಾಣಿಕ-ಕಂಡಕ್ಟರ್​; ವಿಡಿಯೋ ವೈರಲ್​ ಮಾಡಿದ ಸ್ಥಳೀಯರು

ಚಿಲ್ಲರೆಗಾಗಿ ನಡುರಸ್ತೆಯಲ್ಲಿ ಇವರಿಬ್ಬರೂ ಹೊಡೆದಾಟ ಮಾಡಿಕೊಂಡಿದ್ದನ್ನು ಸ್ಥಳೀಯ  ಮಂದಿ ನಿಂತು ನೋಡಿದ್ದಾರೆ. ಅಷ್ಟೇ ಏನು ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ನಂತರ ಅಲ್ಲಿದ್ದ ಬಸ್​ ಡ್ರೈವರ್​ ಮತ್ತಿತರರು ಬಂದು ಗಲಾಟೆಯನ್ನು ಬಿಡಿಸಿದ್ದಾರೆ.

5 ರೂ. ಚಿಲ್ಲರೆಗಾಗಿ ನಡುರಸ್ತೆಯಲ್ಲಿ ಬಡಿದಾಡಿಕೊಂಡ ಪ್ರಯಾಣಿಕ-ಕಂಡಕ್ಟರ್​; ವಿಡಿಯೋ ವೈರಲ್​ ಮಾಡಿದ ಸ್ಥಳೀಯರು
ಚಿಲ್ಲರೆಗಾಗಿ ಹೊಡೆದಾಡಿಕೊಳ್ಳುತ್ತಿರುವ ಕಂಡಕ್ಟ್​ ಮತ್ತು ಪ್ರಯಾಣಿಕ
Lakshmi Hegde
|

Updated on:Nov 28, 2020 | 2:09 PM

Share

ಕೋಲಾರ: ಚಿಲ್ಲರೆ ಹಣಕ್ಕಾಗಿ ಬಸ್​ನಲ್ಲಿ ಕಂಡಕ್ಟರ್​ ಜತೆ ಜಗಳ ಆಗುವುದು ತೀರ ಸಾಮಾನ್ಯ. ಆದರೆ ಇಲ್ಲಿ ನಿರ್ವಾಹಕ ಮತ್ತು ಪ್ರಯಾಣಿಕನ ನಡುವೆ ಮಾರಾಮಾರಿಯೇ ನಡೆದು ಹೋಗಿದೆ.. ಚಿಲ್ಲರೆಗಾಗಿ ಇವರಿಬ್ಬರೂ ಹೊಡೆದಾಟ ಮಾಡಿಕೊಂಡಿದ್ದನ್ನು ಸ್ಥಳೀಯ  ಮಂದಿ ನಿಂತು ನೋಡಿದ್ದಾರೆ.. ಅಷ್ಟೇ ಏನು ಮೊಬೈಲ್​ನಲ್ಲೂ ದೃಶ್ಯ ಸೆರೆಯಾಗಿ, ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ.

ಮುಳಬಾಗಿಲು ಪಟ್ಟಣದ ಹಳೇ ಕೋರ್ಟ್​ ಸರ್ಕಲ್​ ಬಳಿ ಘಟನೆ ನಡೆದಿದೆ. ಈ ಪ್ರಯಾಣಿಕನ ಟಿಕೆಟ್​ ಹಿಂದೆ 5 ರೂ. ಚಿಲ್ಲರೆ ಎಂದು ಕಂಡಕ್ಟರ್​ ಬರೆದುಕೊಟ್ಟಿದ್ದ. ಆದರೆ ನಂತರ ಕೇಳಿದಾಗ ಚಿಲ್ಲರೆ ಇಲ್ಲ ಎಂದು ಹೇಳಿದ್ದ. ಇದರಿಂದ ಸಿಟ್ಟಾದ ಪ್ರಯಾಣಿಕ ಸಹಜವಾಗಿಯೇ ಜಗಳ ತೆಗೆದ. ಆದರೆ ಇವರಿಬ್ಬರ ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದೆ.

ಬಸ್​ನಿಂದ ಇಳಿದು, ನಡುರಸ್ತೆಯಲ್ಲಿ ಪರಸ್ಪರ ಬಡಿದಾಡಿದ್ದಾರೆ. ಸ್ಥಳದಲ್ಲಿದ್ದವರು ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ನಂತರ ಅಲ್ಲಿದ್ದ ಬಸ್​ ಡ್ರೈವರ್​ ಮತ್ತಿತರರು ಬಂದು ಗಲಾಟೆಯನ್ನು ಬಿಡಿಸಿದ್ದಾರೆ. ಆದರೂ ಕೆಲವು ಹೊತ್ತು ಇವರಿಬ್ಬರೂ ಪರಸ್ಪರ ಬೈದಾಡಿಕೊಂಡು ಅಲ್ಲಿಯೇ ನಿಂತಿದ್ದರು.

Published On - 2:04 pm, Sat, 28 November 20

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್