AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರೂ. ಚಿಲ್ಲರೆಗಾಗಿ ನಡುರಸ್ತೆಯಲ್ಲಿ ಬಡಿದಾಡಿಕೊಂಡ ಪ್ರಯಾಣಿಕ-ಕಂಡಕ್ಟರ್​; ವಿಡಿಯೋ ವೈರಲ್​ ಮಾಡಿದ ಸ್ಥಳೀಯರು

ಚಿಲ್ಲರೆಗಾಗಿ ನಡುರಸ್ತೆಯಲ್ಲಿ ಇವರಿಬ್ಬರೂ ಹೊಡೆದಾಟ ಮಾಡಿಕೊಂಡಿದ್ದನ್ನು ಸ್ಥಳೀಯ  ಮಂದಿ ನಿಂತು ನೋಡಿದ್ದಾರೆ. ಅಷ್ಟೇ ಏನು ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ನಂತರ ಅಲ್ಲಿದ್ದ ಬಸ್​ ಡ್ರೈವರ್​ ಮತ್ತಿತರರು ಬಂದು ಗಲಾಟೆಯನ್ನು ಬಿಡಿಸಿದ್ದಾರೆ.

5 ರೂ. ಚಿಲ್ಲರೆಗಾಗಿ ನಡುರಸ್ತೆಯಲ್ಲಿ ಬಡಿದಾಡಿಕೊಂಡ ಪ್ರಯಾಣಿಕ-ಕಂಡಕ್ಟರ್​; ವಿಡಿಯೋ ವೈರಲ್​ ಮಾಡಿದ ಸ್ಥಳೀಯರು
ಚಿಲ್ಲರೆಗಾಗಿ ಹೊಡೆದಾಡಿಕೊಳ್ಳುತ್ತಿರುವ ಕಂಡಕ್ಟ್​ ಮತ್ತು ಪ್ರಯಾಣಿಕ
Lakshmi Hegde
|

Updated on:Nov 28, 2020 | 2:09 PM

Share

ಕೋಲಾರ: ಚಿಲ್ಲರೆ ಹಣಕ್ಕಾಗಿ ಬಸ್​ನಲ್ಲಿ ಕಂಡಕ್ಟರ್​ ಜತೆ ಜಗಳ ಆಗುವುದು ತೀರ ಸಾಮಾನ್ಯ. ಆದರೆ ಇಲ್ಲಿ ನಿರ್ವಾಹಕ ಮತ್ತು ಪ್ರಯಾಣಿಕನ ನಡುವೆ ಮಾರಾಮಾರಿಯೇ ನಡೆದು ಹೋಗಿದೆ.. ಚಿಲ್ಲರೆಗಾಗಿ ಇವರಿಬ್ಬರೂ ಹೊಡೆದಾಟ ಮಾಡಿಕೊಂಡಿದ್ದನ್ನು ಸ್ಥಳೀಯ  ಮಂದಿ ನಿಂತು ನೋಡಿದ್ದಾರೆ.. ಅಷ್ಟೇ ಏನು ಮೊಬೈಲ್​ನಲ್ಲೂ ದೃಶ್ಯ ಸೆರೆಯಾಗಿ, ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ.

ಮುಳಬಾಗಿಲು ಪಟ್ಟಣದ ಹಳೇ ಕೋರ್ಟ್​ ಸರ್ಕಲ್​ ಬಳಿ ಘಟನೆ ನಡೆದಿದೆ. ಈ ಪ್ರಯಾಣಿಕನ ಟಿಕೆಟ್​ ಹಿಂದೆ 5 ರೂ. ಚಿಲ್ಲರೆ ಎಂದು ಕಂಡಕ್ಟರ್​ ಬರೆದುಕೊಟ್ಟಿದ್ದ. ಆದರೆ ನಂತರ ಕೇಳಿದಾಗ ಚಿಲ್ಲರೆ ಇಲ್ಲ ಎಂದು ಹೇಳಿದ್ದ. ಇದರಿಂದ ಸಿಟ್ಟಾದ ಪ್ರಯಾಣಿಕ ಸಹಜವಾಗಿಯೇ ಜಗಳ ತೆಗೆದ. ಆದರೆ ಇವರಿಬ್ಬರ ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದೆ.

ಬಸ್​ನಿಂದ ಇಳಿದು, ನಡುರಸ್ತೆಯಲ್ಲಿ ಪರಸ್ಪರ ಬಡಿದಾಡಿದ್ದಾರೆ. ಸ್ಥಳದಲ್ಲಿದ್ದವರು ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ನಂತರ ಅಲ್ಲಿದ್ದ ಬಸ್​ ಡ್ರೈವರ್​ ಮತ್ತಿತರರು ಬಂದು ಗಲಾಟೆಯನ್ನು ಬಿಡಿಸಿದ್ದಾರೆ. ಆದರೂ ಕೆಲವು ಹೊತ್ತು ಇವರಿಬ್ಬರೂ ಪರಸ್ಪರ ಬೈದಾಡಿಕೊಂಡು ಅಲ್ಲಿಯೇ ನಿಂತಿದ್ದರು.

Published On - 2:04 pm, Sat, 28 November 20

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ