AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್‌ನಲ್ಲಿ 240 ಕೋಟಿ ರೂ. ಹಗರಣ? CM ಸೆಕ್ರೆಟರಿ ಹೆಸರೇಕೆ ಕೇಳಿಬರ್ತಿದೆ?

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರಿನ ಹೊರವಲಯದಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕಂದ್ರದಲ್ಲಿ ನಿರ್ಮಿಸುತ್ತಿರುವ ಕೋವಿಡ್ ಕೇರ್ ಸೆಂಟರ್ ಈಗ ರಾಜ್ಯಕ್ಕೆ ಹೆಮ್ಮೆಯಾಗುವ ಬದಲು ಭ್ರಷ್ಟಾಚಾರದ ಕೇಂದ್ರವಾಗುತ್ತಿದೆಯಾ ಅನ್ನೋ ಅನುಮಾನ ಮೂಡಿದೆ. ಯಾಕಂದ್ರೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಅವರ ಸಂಬಂಧಿಗೆ ಕಾಂಟ್ರಾಕ್ಟ್ ನೀಡಿದ್ದು ಭಾರೀ ಅವ್ಯವಹಾರ ನಡೆದಿದೆಯೆಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್, ರಾಜ್ಯ ಸರ್ಕಾರ ಕೊವಿಡ್ ಕೇರ್‌ ಸೆಂಟರ್ ಉಪಕರಣ ಖರೀದಿ ವಿಚಾರದಲ್ಲಿ […]

ಕೋವಿಡ್  ಸೆಂಟರ್‌ನಲ್ಲಿ 240 ಕೋಟಿ ರೂ. ಹಗರಣ? CM ಸೆಕ್ರೆಟರಿ ಹೆಸರೇಕೆ ಕೇಳಿಬರ್ತಿದೆ?
Guru
| Edited By: |

Updated on:Jul 16, 2020 | 1:30 PM

Share

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರಿನ ಹೊರವಲಯದಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕಂದ್ರದಲ್ಲಿ ನಿರ್ಮಿಸುತ್ತಿರುವ ಕೋವಿಡ್ ಕೇರ್ ಸೆಂಟರ್ ಈಗ ರಾಜ್ಯಕ್ಕೆ ಹೆಮ್ಮೆಯಾಗುವ ಬದಲು ಭ್ರಷ್ಟಾಚಾರದ ಕೇಂದ್ರವಾಗುತ್ತಿದೆಯಾ ಅನ್ನೋ ಅನುಮಾನ ಮೂಡಿದೆ. ಯಾಕಂದ್ರೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಅವರ ಸಂಬಂಧಿಗೆ ಕಾಂಟ್ರಾಕ್ಟ್ ನೀಡಿದ್ದು ಭಾರೀ ಅವ್ಯವಹಾರ ನಡೆದಿದೆಯೆಂದು ಕಾಂಗ್ರೆಸ್ ಆರೋಪಿಸಿದೆ.

ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್, ರಾಜ್ಯ ಸರ್ಕಾರ ಕೊವಿಡ್ ಕೇರ್‌ ಸೆಂಟರ್ ಉಪಕರಣ ಖರೀದಿ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆಸಿದೆ. ಕೋವಿಡ್ ಕೇರ್ ಗೆ ಬೇಕಾದ ಹಾಸಿಗೆ, ದಿಂಬು, ಹೊದಿಕೆಗಳನ್ನು 100 ದಿನಗಳಿಗೆ ಬಾಡಿಗೆ ಪಡೆಯುವುದರ ಮೂಲಕ 240 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಒಟ್ಟಾರೆ ನಾಲ್ಕು ಜನ ಗುತ್ತಿಗೆದಾರರಿಗೆ ಈ ಸಂಬಂಧ ಗುತ್ತಿಗೆ ನೀಡಲಾಗಿದೆ. ಇವರೆಲ್ಲಾ ಬೆಂಗಳೂರಿನ ಮಂತ್ರಿಗಳ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಕೋವಿಡ್ ಹೆಸರನ್ನು ಹೇಳಿಕೊಂಡು ಬಿಜೆಪಿ ಮುಖಂಡರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಆರೋಪ ಮಾಡುತ್ತಿದ್ದರೂ ಬಿಜೆಪಿಯಿಂದ ಹಣದ ಲೂಟಿ ಮಾತ್ರ ನಿಂತಿಲ್ಲ ಎಂದು ಲಕ್ಷ್ಮಣ್ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇಷ್ಟೇ ಅಲ್ಲ ಕೋವಿಡ್ ನಿಯಂತ್ರಣ ವಿಚಾರದಲ್ಲಿ ವಿವಿಧ ಇಲಾಖೆಗಳ ಮಂತ್ರಿಗಳ ನಡುವೆ ಹೊಂದಾಣಿಕೆ ಇಲ್ಲದಂತಾಗಿದೆ. ಕೊರೊನಾ ಸೋಂಕಿತರನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ, ಬಿಜೆಪಿ ಮುಖಂಡರು ಕೇವಲ ಹೇಳಿಕೆಗೆ ಮತ್ತು ಪ್ರಚಾರಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಕಿಡಿಕಾರಿದ್ದಾರೆ.

Published On - 1:29 pm, Thu, 16 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ