AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR ನಗರ ಒಮ್ಮತದ ಅಭ್ಯರ್ಥಿ? ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದ DK ರವಿ ಪತ್ನಿ ಕುಸುಮಾ

ಬೆಂಗಳೂರು: ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾದ ಬಳಿಕ ರಾಜರಾಜೇಶ್ವರಿನಗರದಲ್ಲಿ ಅಸೆಂಬ್ಲಿ ಉಪ ಚುನಾವಣಾ ಕಣ ರಂಗೇರಿದೆ. ಆರ್. ಮುನಿರತ್ನ ರಾಜೀನಾಮೆ ನಂತರ ತೆರವುಗೊಂಡ ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಮೂರೂ ಪ್ರಮುಖ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಈ ನಡುವೆ, ಒಮ್ಮತ ಅಭ್ಯರ್ಥಿಯನ್ನು ಹಾಕುವಂತೆ ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹೇರಲಾಗುತ್ತಿದೆ. ಮೈತ್ರಿ ಸರ್ಕಾರದ ಪತನಕ್ಕೆ ನೇರ ಕಾರಣವೆಂದು ಹೇಳಲಾಗುವ S-B-M ತ್ರಯರಲ್ಲಿ ಮುನಿರತ್ನ ಸಹ ಒಬ್ಬರು. ಹೀಗಾಗಿ, ಮುನಿರತ್ನ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಕೈ ಜೋಡಿಸಲೇ […]

RR ನಗರ ಒಮ್ಮತದ ಅಭ್ಯರ್ಥಿ? ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದ DK ರವಿ ಪತ್ನಿ ಕುಸುಮಾ
KUSHAL V
| Edited By: |

Updated on: Oct 01, 2020 | 11:00 AM

Share

ಬೆಂಗಳೂರು: ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾದ ಬಳಿಕ ರಾಜರಾಜೇಶ್ವರಿನಗರದಲ್ಲಿ ಅಸೆಂಬ್ಲಿ ಉಪ ಚುನಾವಣಾ ಕಣ ರಂಗೇರಿದೆ. ಆರ್. ಮುನಿರತ್ನ ರಾಜೀನಾಮೆ ನಂತರ ತೆರವುಗೊಂಡ ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಮೂರೂ ಪ್ರಮುಖ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.

ಈ ನಡುವೆ, ಒಮ್ಮತ ಅಭ್ಯರ್ಥಿಯನ್ನು ಹಾಕುವಂತೆ ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹೇರಲಾಗುತ್ತಿದೆ. ಮೈತ್ರಿ ಸರ್ಕಾರದ ಪತನಕ್ಕೆ ನೇರ ಕಾರಣವೆಂದು ಹೇಳಲಾಗುವ S-B-M ತ್ರಯರಲ್ಲಿ ಮುನಿರತ್ನ ಸಹ ಒಬ್ಬರು. ಹೀಗಾಗಿ, ಮುನಿರತ್ನ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಕೈ ಜೋಡಿಸಲೇ ಬೇಕು ಎಂಬುದು ಕೈ ಕಾರ್ಯಕರ್ತರ ಮನದಾಳದ ಮಾತು ಅನ್ನೋ ಮಾತಿದೆ.

ಈಗಾಗಲೇ, JDS ನಾಯಕ ಹನುಮಂತರಾಯಪ್ಪ ಜೊತೆ ಕಾಂಗ್ರೆಸ್​ ಸಂಸದ DK ಸುರೇಶ್ ಮಾತುಕತೆ ನಡೆಸಿದ್ದಾರೆ. ಇದರೊಟ್ಟಿಗೆ, ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುವಂತೆ ಕೆಪಿಸಿಸಿ ಅಧ್ಯಕ್ಷ DK ಶಿವಕುಮಾರ್ ಮೇಲೂ ಸಹ ಕೈ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಟಾರ್ಗೆಟ್ ಮುನಿರತ್ನ ಯಶಸ್ವಿ ಸೂತ್ರ ಉಭಯ ಪಕ್ಷಗಳು ಒಮ್ಮತದ ಅಭ್ಯರ್ಥಿ ಹಾಕಿದ್ರೆ ಮಾತ್ರ ಮುನಿರತ್ನ ಸೋಲು ಖಚಿತ. ಟಾರ್ಗೆಟ್ ಮುನಿರತ್ನ ಯಶಸ್ವಿ ಆಗಲೇ ಬೇಕು ಅಂತಿರೋ ಕೈ ಕಾರ್ಯಕರ್ತರು ದೋಸ್ತಿ ಸರ್ಕಾರ ಪತನಕ್ಕೆ ಮುನಿರತ್ನ ಕೂಡ ಕಾರಣ ಎಂಬ ತಮ್ಮ ಮನದಾಳದ ಕೋಪವನ್ನು ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಕ್ಕಿರೋ ಅವಕಾಶ ಬಿಡಲೇಬಾರದು. ಅದಕ್ಕಾಗಿ, DK ಶಿವಕುಮಾರ್ ಹಾಗೂ ಕುಮಾರಸ್ವಾಮಿ ಒಂದಾಗಿ ಅಭ್ಯರ್ಥಿ ಹಾಕುವಂತೆ ಒತ್ತಡ ಹೇರಿದ್ದು ಈಗಾಗಲೇ ಶಿವಕುಮಾರ್​ರನ್ನು ಭೇಟಿಯಾಗಿ ರಾಜರಾಜೇಶ್ವರಿ ನಗರ ಕಾಂಗ್ರೆಸ್‌ ನಾಯಕರು ಮಾತುಕತೆ ನಡೆಸಿದ್ದಾರೆ.

ಆದಿಚುಂಚನಗಿರಿ ಮಠಕ್ಕೆ ದಿವಂಗತ DK ರವಿ ಪತ್ನಿ ಕುಸುಮಾ ಭೇಟಿ ಈ ನಡುವೆ, ಆದಿಚುಂಚನಗಿರಿ ಮಠಕ್ಕೆ ಮಾಜಿ IAS ಅಧಿಕಾರಿ, ದಿವಂಗತ DK ರವಿ ಪತ್ನಿ ಕುಸುಮಾ ಭೇಟಿ ನೀಡಿದ್ದಾರೆ. ತಮ್ಮ ತಂದೆ ಹನುಮಂತರಾಯಪ್ಪ ಜೊತೆ ವಿಜಯನಗರದಲ್ಲಿರುವ ಶಾಖಾ ಮಠಕ್ಕೆ ಭೇಟಿ ಕೊಟ್ಟು ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು. ಕುಸುಮಾ RR ನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿದೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ