AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ ಸ್ಟೇಷನ್​ಗೆ ಬೆಂಕಿ: ಪ್ರಕರಣದ ರೂವಾರಿ ಕಾಂಗ್ರೆಸ್ ಮುಖಂಡನ ಸಂಪೂರ್ಣ ಜಾತಕ

ಬೆಂಗಳೂರು: ನಗರದ ಡಿಜೆ ಹಳ್ಳಿ ವ್ಯಾಪ್ತಿಯಲ್ಲಾದ ಗಲಾಟೆ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಸದ್ಯ ಈಗ DJ ಹಳ್ಳಿ ಸ್ಟೇಷನ್​ಗೆ ಬೆಂಕಿ ಹಚ್ಚಲು ಕಾಂಗ್ರೆಸ್ ಮುಖಂಡನಿಂದ ಪ್ರಚೋದನೆ ನಡೆದಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದ ಆರೋಪಿ ಫೈರೋಜ್ ಪಾಷಾ DJ ಹಳ್ಳಿ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಲು ಪ್ರಚೋದನೆ ಮಾಡಿದ್ದನಂತೆ. ಮನೆಯಲ್ಲಿ ಕುಳಿತುಕೊಂಡು ವಾಟ್ಸ್ ಅಪ್ ಮೂಲಕ ಗಲಭೆಗೆ ರೂಪುರೇಷೆ ಸಿದ್ಧಪಡಿಸಿದ್ದ. ವಾಟ್ಸ್ ಅಪ್ ಕಾಲ್ ಮಾಡಿ ಎಲ್ಲರಿಗೂ ಪ್ರಚೋದನೆ ಮಾಡಿದ್ದ. ಗಣ್ಯರ ಜೊತೆ ಫೋಟೋಗಳಿಗೆ […]

DJ ಹಳ್ಳಿ ಸ್ಟೇಷನ್​ಗೆ ಬೆಂಕಿ: ಪ್ರಕರಣದ ರೂವಾರಿ ಕಾಂಗ್ರೆಸ್ ಮುಖಂಡನ ಸಂಪೂರ್ಣ ಜಾತಕ
ಆಯೇಷಾ ಬಾನು
| Edited By: |

Updated on: Aug 14, 2020 | 11:33 AM

Share

ಬೆಂಗಳೂರು: ನಗರದ ಡಿಜೆ ಹಳ್ಳಿ ವ್ಯಾಪ್ತಿಯಲ್ಲಾದ ಗಲಾಟೆ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಸದ್ಯ ಈಗ DJ ಹಳ್ಳಿ ಸ್ಟೇಷನ್​ಗೆ ಬೆಂಕಿ ಹಚ್ಚಲು ಕಾಂಗ್ರೆಸ್ ಮುಖಂಡನಿಂದ ಪ್ರಚೋದನೆ ನಡೆದಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದ ಆರೋಪಿ ಫೈರೋಜ್ ಪಾಷಾ DJ ಹಳ್ಳಿ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಲು ಪ್ರಚೋದನೆ ಮಾಡಿದ್ದನಂತೆ. ಮನೆಯಲ್ಲಿ ಕುಳಿತುಕೊಂಡು ವಾಟ್ಸ್ ಅಪ್ ಮೂಲಕ ಗಲಭೆಗೆ ರೂಪುರೇಷೆ ಸಿದ್ಧಪಡಿಸಿದ್ದ. ವಾಟ್ಸ್ ಅಪ್ ಕಾಲ್ ಮಾಡಿ ಎಲ್ಲರಿಗೂ ಪ್ರಚೋದನೆ ಮಾಡಿದ್ದ.

ಗಣ್ಯರ ಜೊತೆ ಫೋಟೋಗಳಿಗೆ ಪೋಸ್ ಗಲಭೆಯಲ್ಲಿ ನೇರವಾಗಿ ಭಾಗಿಯಾಗದಿದ್ದರೂ ಷಡ್ಯಂತ್ರ ರೂಪಿಸುವಲ್ಲಿ ಫೈರೋಜ್ ಪಾಷಾ ಪ್ರಮುಖ ಪಾತ್ರ ವಹಿಸಿದ್ದಾನೆ. ಮುಜಾಯಿದ್ ಪಾಷಾ ಬಂಧನದ ವೇಳೆ ಫೈರೋಜ್ ವಾಟ್ಸ್ ಅಪ್ ಕಾಲ್ ಮಾಡಿರೋದು ಬೆಳಕಿಗೆ ಬಂದಿದೆ. ತಾಂತ್ರಿಕ ವಿಭಾಗದಿಂದ ಪೊಲೀಸರ ತಂಡ ಫೈರೋಜ್ ಮೊಬೈಲ್ ಕಾಲ್ ಪರಿಶೀಲನೆ ನಡೆಸಿದಾಗ ಈತ ಸಾಕಷ್ಟು ಮಂದಿಗೆ ಕರೆ ಮಾಡಿರೋದು ತಿಳಿದು ಬಂದಿದೆ.

ಕಾಂಗ್ರೆಸ್​ನ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರ ಜೊತೆ ಗುರುತಿಸಿಕೊಂಡಿದ್ದ ಫೈರೋಜ್ ಪಾಷಾ, ಕೊರೊನಾ ವಾರಿಯರ್ ಆಗಿ ಸಿವಿಲ್ ಢಿಪೆನ್ಸ್​ನಲ್ಲೂ ಆಕ್ಟಿವ್ ಆಗಿದ್ದ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಜೊತೆಯೂ ಫೋಟೋ ತೆಗೆಸಿಕೊಂಡಿದ್ದಾನೆ. ಹೆಬ್ಬಾಳ ಶಾಸಕ ಬೈರತಿ ಸುರೇಶ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಜಿ.ಟಿ.ದೇವೇಗೌಡ ಜೊತೆ ಪೋಸ್ ಕೊಟ್ಟಿರುವ ಫೋಟೋಗಳನ್ನು ತನ್ನ ಫೇಸ್​ಬುಕ್​ನಲ್ಲಿ ಅಪ್ಲೋಡ್ ಮಾಡಿದ್ದಾನೆ.

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್