AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ ಸ್ಟೇಷನ್​ಗೆ ಬೆಂಕಿ: ಪ್ರಕರಣದ ರೂವಾರಿ ಕಾಂಗ್ರೆಸ್ ಮುಖಂಡನ ಸಂಪೂರ್ಣ ಜಾತಕ

ಬೆಂಗಳೂರು: ನಗರದ ಡಿಜೆ ಹಳ್ಳಿ ವ್ಯಾಪ್ತಿಯಲ್ಲಾದ ಗಲಾಟೆ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಸದ್ಯ ಈಗ DJ ಹಳ್ಳಿ ಸ್ಟೇಷನ್​ಗೆ ಬೆಂಕಿ ಹಚ್ಚಲು ಕಾಂಗ್ರೆಸ್ ಮುಖಂಡನಿಂದ ಪ್ರಚೋದನೆ ನಡೆದಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದ ಆರೋಪಿ ಫೈರೋಜ್ ಪಾಷಾ DJ ಹಳ್ಳಿ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಲು ಪ್ರಚೋದನೆ ಮಾಡಿದ್ದನಂತೆ. ಮನೆಯಲ್ಲಿ ಕುಳಿತುಕೊಂಡು ವಾಟ್ಸ್ ಅಪ್ ಮೂಲಕ ಗಲಭೆಗೆ ರೂಪುರೇಷೆ ಸಿದ್ಧಪಡಿಸಿದ್ದ. ವಾಟ್ಸ್ ಅಪ್ ಕಾಲ್ ಮಾಡಿ ಎಲ್ಲರಿಗೂ ಪ್ರಚೋದನೆ ಮಾಡಿದ್ದ. ಗಣ್ಯರ ಜೊತೆ ಫೋಟೋಗಳಿಗೆ […]

DJ ಹಳ್ಳಿ ಸ್ಟೇಷನ್​ಗೆ ಬೆಂಕಿ: ಪ್ರಕರಣದ ರೂವಾರಿ ಕಾಂಗ್ರೆಸ್ ಮುಖಂಡನ ಸಂಪೂರ್ಣ ಜಾತಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 14, 2020 | 11:33 AM

Share

ಬೆಂಗಳೂರು: ನಗರದ ಡಿಜೆ ಹಳ್ಳಿ ವ್ಯಾಪ್ತಿಯಲ್ಲಾದ ಗಲಾಟೆ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಸದ್ಯ ಈಗ DJ ಹಳ್ಳಿ ಸ್ಟೇಷನ್​ಗೆ ಬೆಂಕಿ ಹಚ್ಚಲು ಕಾಂಗ್ರೆಸ್ ಮುಖಂಡನಿಂದ ಪ್ರಚೋದನೆ ನಡೆದಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದ ಆರೋಪಿ ಫೈರೋಜ್ ಪಾಷಾ DJ ಹಳ್ಳಿ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಲು ಪ್ರಚೋದನೆ ಮಾಡಿದ್ದನಂತೆ. ಮನೆಯಲ್ಲಿ ಕುಳಿತುಕೊಂಡು ವಾಟ್ಸ್ ಅಪ್ ಮೂಲಕ ಗಲಭೆಗೆ ರೂಪುರೇಷೆ ಸಿದ್ಧಪಡಿಸಿದ್ದ. ವಾಟ್ಸ್ ಅಪ್ ಕಾಲ್ ಮಾಡಿ ಎಲ್ಲರಿಗೂ ಪ್ರಚೋದನೆ ಮಾಡಿದ್ದ.

ಗಣ್ಯರ ಜೊತೆ ಫೋಟೋಗಳಿಗೆ ಪೋಸ್ ಗಲಭೆಯಲ್ಲಿ ನೇರವಾಗಿ ಭಾಗಿಯಾಗದಿದ್ದರೂ ಷಡ್ಯಂತ್ರ ರೂಪಿಸುವಲ್ಲಿ ಫೈರೋಜ್ ಪಾಷಾ ಪ್ರಮುಖ ಪಾತ್ರ ವಹಿಸಿದ್ದಾನೆ. ಮುಜಾಯಿದ್ ಪಾಷಾ ಬಂಧನದ ವೇಳೆ ಫೈರೋಜ್ ವಾಟ್ಸ್ ಅಪ್ ಕಾಲ್ ಮಾಡಿರೋದು ಬೆಳಕಿಗೆ ಬಂದಿದೆ. ತಾಂತ್ರಿಕ ವಿಭಾಗದಿಂದ ಪೊಲೀಸರ ತಂಡ ಫೈರೋಜ್ ಮೊಬೈಲ್ ಕಾಲ್ ಪರಿಶೀಲನೆ ನಡೆಸಿದಾಗ ಈತ ಸಾಕಷ್ಟು ಮಂದಿಗೆ ಕರೆ ಮಾಡಿರೋದು ತಿಳಿದು ಬಂದಿದೆ.

ಕಾಂಗ್ರೆಸ್​ನ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರ ಜೊತೆ ಗುರುತಿಸಿಕೊಂಡಿದ್ದ ಫೈರೋಜ್ ಪಾಷಾ, ಕೊರೊನಾ ವಾರಿಯರ್ ಆಗಿ ಸಿವಿಲ್ ಢಿಪೆನ್ಸ್​ನಲ್ಲೂ ಆಕ್ಟಿವ್ ಆಗಿದ್ದ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಜೊತೆಯೂ ಫೋಟೋ ತೆಗೆಸಿಕೊಂಡಿದ್ದಾನೆ. ಹೆಬ್ಬಾಳ ಶಾಸಕ ಬೈರತಿ ಸುರೇಶ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಜಿ.ಟಿ.ದೇವೇಗೌಡ ಜೊತೆ ಪೋಸ್ ಕೊಟ್ಟಿರುವ ಫೋಟೋಗಳನ್ನು ತನ್ನ ಫೇಸ್​ಬುಕ್​ನಲ್ಲಿ ಅಪ್ಲೋಡ್ ಮಾಡಿದ್ದಾನೆ.

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!