AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸವದಿಯವ್ರೇ.. ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ’

ಲಕ್ಷ್ಮಣ ಸವದಿಯವರೇ ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ರಾಜ್ಯ ಕಾಂಗ್ರೆಸ್ ಟಾಂಗ್ ಕೊಟ್ಟಿದೆ.

‘ಸವದಿಯವ್ರೇ.. ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ’
ಸಾರಿಗೆ ಸಚಿವ ಲಕ್ಷ್ಮಣ ಸವದಿ
KUSHAL V
|

Updated on:Dec 13, 2020 | 11:40 AM

Share

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿಕಾಸ ಸೌಧದಲ್ಲಿ ಇಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಎಐಟಿಯುಸಿ, ಬಿಎಂಎಸ್, ಸಿಐಟಿಯು ಮತ್ತು ಮಹಾಮಂಡಳ ಸಂಘಟನೆಗಳ ಜೊತೆ ಸವದಿ ಸಭೆ ನಡೆಸುತ್ತಿದ್ದಾರೆ.

ಇಂದಿನ ಸಭೆಯಲ್ಲಿ ಬಿಎಂಟಿಸಿ ಎಂಡಿ ಶಿಖಾ, ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್ ಹಾಗೂ NWKRTC, NEKRTC ಎಂಡಿಗಳು ಭಾಗಿಯಾಗಿದ್ದಾರೆ. ಜೊತೆಗೆ, ಸಭೆಯಲ್ಲಿ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಸಹ ಉಪಸ್ಥಿತರಿದ್ದಾರೆ.

ಇದಲ್ಲದೆ, ಸಾರಿಗೆ‌ ನೌಕರರ ಮುಖಂಡರಾದ ಅನಂತ ಸುಬ್ಬುರಾವ್ ಸೇರಿದಂತೆ ಒಕ್ಕೂಟದ ಮುಖಂಡರು ಭಾಗಿಯಾಗಿದ್ದು AITUCಯಿಂದ ಅನಂತ ಸುಬ್ಬುರಾವ್, ವಿಜಯ್ ಭಾಸ್ಕರ್, CITUಯಿಂದ ಪ್ರಕಾಶ್ ,ರೇವಪ್ಪ ಮತ್ತು ಭಾರತೀಯ ಮಜ್ದೂರ್ ಸಂಘದ ಪೂಂಜಾ ಮಂಜುನಾಥ, ಉದಯ್ ಕುಮಾರ್ ಮತ್ತು ಮಹಾಮಂಡಳದ ಅರುಸು ಸೇರಿದಂತೆ ನೋಂದಾಯಿತ ಒಕ್ಕೂಟದ ಮುಖಂಡರು ಮಾತ್ರ ಭಾಗಿಯಾಗಿದ್ದಾರೆ.

ಆದರೆ ಸಭೆಯಲ್ಲಿ ಪ್ರತಿಭಟನಾ ನಿರತ ಮುಖಂಡರೇ ಆಗಮಿಸಿಲ್ಲ ಎಂದು ತಿಳಿದುಬಂದಿದೆ. ಕೋಡಿಹಳ್ಳಿ ಚಂದ್ರಶೇಖರ್​ ನೇತೃತ್ವದ ತಂಡ ಸಭೆಯಲ್ಲಿ ಇಲ್ಲ ಎಂದು ಹೇಳಲಾಗಿದೆ. ಈ ಬಾರಿಯೂ ಅವರನ್ನು ಆಹ್ವಾನ ಮಾಡದೆ ಸಭೆ ನಡೆಸ್ತಿರುವ ಸವದಿ ಬರೀ ನೋಂದಾಯಿತ ಮುಖಂಡರ ಜೊತೆಗೆ ಮಾತ್ರ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

‘ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ’ ಈ ನಡುವೆ, ಲಕ್ಷ್ಮಣ ಸವದಿಯವರೇ ಬಿಕ್ಕಟ್ಟು ನಿರ್ವಹಿಸುವುದೆಂದರೆ, ಸದನದಲ್ಲಿ ಕೂತು ರೋಮಾಂಚನ ಚಿತ್ರ ವೀಕ್ಷಿಸಿದಂತಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ರಾಜ್ಯ ಕಾಂಗ್ರೆಸ್ ಟಾಂಗ್ ಕೊಟ್ಟಿದೆ. ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಉಚಿತ ಬಸ್ ಸೇವೆ..

Published On - 11:16 am, Sun, 13 December 20

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?