AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೈ ಮಿಲಾಯಿಸಿದ ಕೈ ನಾಯಕರು! KPCC ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಮಾರಾಮಾರಿ?

ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ಮತ್ತು ರಾಜಾಜಿನಗರ ಕಾಂಗ್ರೆಸ್ ಮುಖಂಡ ಮಾನೋಹರ್ ಮನೋಹರ್ ಕೈ ಕೈ ಮೀಲಾಯಿಸಿ ಕೊಂಡಿದ್ದಾರೆ ಎನ್ನಲಾಗಿದೆ. ಕ್ಷುಲಕ ಕಾರಣಕ್ಕೆ ಮನೋಹರ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಕೈ ಕೈ ಮಿಲಾಯಿಸಿದ ಕೈ ನಾಯಕರು! KPCC ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಮಾರಾಮಾರಿ?
ಕೆಪಿಸಿಸಿ ಕಚೇರಿ
ರಾಜೇಶ್ ದುಗ್ಗುಮನೆ
| Edited By: |

Updated on:Jan 22, 2021 | 3:47 PM

Share

ಬೆಂಗಳೂರು: ಒಂದೇ ಪಕ್ಷದಲ್ಲಿದ್ದರೂ ವೈಮನಸ್ಯಗಳು ಇರುವುದು ಸಾಮಾನ್ಯ. ಆದರೆ, ನಿಜವಾದ ನಾಯಕ ಅನಿಸಿಕೊಂಡವರು ಅದನ್ನು ಸಾರ್ವಜನಿಕವಾಗಿ ತೋರಿಸಿಕೊಳ್ಳುವುದು ಉಚಿತವಲ್ಲ. ಆದರೆ, ರಾಜ್ಯ ಕಾಂಗ್ರೆಸ್​ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರ ಎದುರೇ ಕೈ ಕೈ ಮಿಲಾಯಿಸಿಕೊಂಡಿದ್ದು, ಕಾಂಗ್ರೆಸ್​ಗೆ ಇರುಸು ಮುರುಸು ತಂದಿಟ್ಟಿದೆ.

ರಾಜಧಾನಿಯ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಆ ರೀತಿ ಏನು ನಡೆದೇ ಇಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ಮತ್ತು ರಾಜಾಜಿನಗರ ಕಾಂಗ್ರೆಸ್ ಮುಖಂಡ ಮನೋಹರ್ ಕೈ ಕೈ ಮೀಲಾಯಿಸಿ ಕೊಂಡಿದ್ದಾರೆ ಎನ್ನಲಾಗಿದೆ. ಕ್ಷುಲಕ ಕಾರಣಕ್ಕೆ ನಾರಾಯಣಸ್ವಾಮಿ  ಮೇಲೆ ಮನೋಹರ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.  ಕೆಪಿಸಿಸಿ ಅಧ್ಯಕ್ಷರ ಬಲಗೈ ಬಂಟ ಎಂದು ಹೇಳಿಕೊಂಡು ತಿರುಗಾಡುವ ಮನೋಹರ್ ಎಲ್ಲರ ಮೇಲೂ ದೌರ್ಜನ್ಯ ಮಾಡುತ್ತಿದ್ದಾರೆ ಎನ್ನುವ ಆರೋಪ ಇದೆ.

ಕಾಂಗ್ರೆಸ್​ನವರು ಹೇಳೋದೇ ಬೇರೆ.. ಕಾಂಗ್ರೆಸ್​ ನಾಯಕರ ನಡುವೆ ಘರ್ಷಣೆ ಏರ್ಪಟ್ಟಿಲ್ಲ ಎಂದು ಸಲೀಂ ಅಹ್ಮದ್ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿ ಬಂದಿದ್ದೇವೆ. ಕಚೇರಿ ಕೆಳ ಭಾಗದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಬಗ್ಗೆ ಚರ್ಚೆ ಮಡೆಯುತ್ತಿತ್ತು. ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಆಪರೇಷನ್ ‌ಮಾಡಿದೆ ಎನ್ನುವ ಬಗ್ಗೆ ಚರ್ಚೆ ನಡಿಯುತಿತ್ತು. ಈ ವೇಳೆ ಸ್ವಲ್ಪ ಏರುಧ್ವನಿಯಲ್ಲಿ ಮಾತುಕತೆ ಆಗಿದೆ. ಅದು ಬಿಟ್ಟು ಯಾರಮೇಲೂ ಹಲ್ಲೆಯಾಗಿಲ್ಲ. ಯಾರು ಕೈ ಕೈ ಮಿಲಾಯಿಸಿಲ್ಲ ಎಂದು ಸಲೀಂ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ.

ಎಂಟಿಬಿ ನಾಗರಾಜ್​ ವಿರುದ್ಧ ಕಿಡಿಕಾರಿದ ಕಾಂಗ್ರೆಸ್​ ನಾಯಕರು

Published On - 3:44 pm, Fri, 22 January 21

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!