AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೈ ಮಿಲಾಯಿಸಿದ ಕೈ ನಾಯಕರು! KPCC ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಮಾರಾಮಾರಿ?

ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ಮತ್ತು ರಾಜಾಜಿನಗರ ಕಾಂಗ್ರೆಸ್ ಮುಖಂಡ ಮಾನೋಹರ್ ಮನೋಹರ್ ಕೈ ಕೈ ಮೀಲಾಯಿಸಿ ಕೊಂಡಿದ್ದಾರೆ ಎನ್ನಲಾಗಿದೆ. ಕ್ಷುಲಕ ಕಾರಣಕ್ಕೆ ಮನೋಹರ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಕೈ ಕೈ ಮಿಲಾಯಿಸಿದ ಕೈ ನಾಯಕರು! KPCC ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಮಾರಾಮಾರಿ?
ಕೆಪಿಸಿಸಿ ಕಚೇರಿ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Jan 22, 2021 | 3:47 PM

Share

ಬೆಂಗಳೂರು: ಒಂದೇ ಪಕ್ಷದಲ್ಲಿದ್ದರೂ ವೈಮನಸ್ಯಗಳು ಇರುವುದು ಸಾಮಾನ್ಯ. ಆದರೆ, ನಿಜವಾದ ನಾಯಕ ಅನಿಸಿಕೊಂಡವರು ಅದನ್ನು ಸಾರ್ವಜನಿಕವಾಗಿ ತೋರಿಸಿಕೊಳ್ಳುವುದು ಉಚಿತವಲ್ಲ. ಆದರೆ, ರಾಜ್ಯ ಕಾಂಗ್ರೆಸ್​ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರ ಎದುರೇ ಕೈ ಕೈ ಮಿಲಾಯಿಸಿಕೊಂಡಿದ್ದು, ಕಾಂಗ್ರೆಸ್​ಗೆ ಇರುಸು ಮುರುಸು ತಂದಿಟ್ಟಿದೆ.

ರಾಜಧಾನಿಯ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಆ ರೀತಿ ಏನು ನಡೆದೇ ಇಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ಮತ್ತು ರಾಜಾಜಿನಗರ ಕಾಂಗ್ರೆಸ್ ಮುಖಂಡ ಮನೋಹರ್ ಕೈ ಕೈ ಮೀಲಾಯಿಸಿ ಕೊಂಡಿದ್ದಾರೆ ಎನ್ನಲಾಗಿದೆ. ಕ್ಷುಲಕ ಕಾರಣಕ್ಕೆ ನಾರಾಯಣಸ್ವಾಮಿ  ಮೇಲೆ ಮನೋಹರ್ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.  ಕೆಪಿಸಿಸಿ ಅಧ್ಯಕ್ಷರ ಬಲಗೈ ಬಂಟ ಎಂದು ಹೇಳಿಕೊಂಡು ತಿರುಗಾಡುವ ಮನೋಹರ್ ಎಲ್ಲರ ಮೇಲೂ ದೌರ್ಜನ್ಯ ಮಾಡುತ್ತಿದ್ದಾರೆ ಎನ್ನುವ ಆರೋಪ ಇದೆ.

ಕಾಂಗ್ರೆಸ್​ನವರು ಹೇಳೋದೇ ಬೇರೆ.. ಕಾಂಗ್ರೆಸ್​ ನಾಯಕರ ನಡುವೆ ಘರ್ಷಣೆ ಏರ್ಪಟ್ಟಿಲ್ಲ ಎಂದು ಸಲೀಂ ಅಹ್ಮದ್ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿ ಬಂದಿದ್ದೇವೆ. ಕಚೇರಿ ಕೆಳ ಭಾಗದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಬಗ್ಗೆ ಚರ್ಚೆ ಮಡೆಯುತ್ತಿತ್ತು. ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಆಪರೇಷನ್ ‌ಮಾಡಿದೆ ಎನ್ನುವ ಬಗ್ಗೆ ಚರ್ಚೆ ನಡಿಯುತಿತ್ತು. ಈ ವೇಳೆ ಸ್ವಲ್ಪ ಏರುಧ್ವನಿಯಲ್ಲಿ ಮಾತುಕತೆ ಆಗಿದೆ. ಅದು ಬಿಟ್ಟು ಯಾರಮೇಲೂ ಹಲ್ಲೆಯಾಗಿಲ್ಲ. ಯಾರು ಕೈ ಕೈ ಮಿಲಾಯಿಸಿಲ್ಲ ಎಂದು ಸಲೀಂ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ.

ಎಂಟಿಬಿ ನಾಗರಾಜ್​ ವಿರುದ್ಧ ಕಿಡಿಕಾರಿದ ಕಾಂಗ್ರೆಸ್​ ನಾಯಕರು

Published On - 3:44 pm, Fri, 22 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್